ಉದ್ಯೋಗಸ್ಥರಿಗೆ ಅವರಿರುವ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ: ಸಚಿವ ಡಾ.ಕೆ.ಸುಧಾಕರ್

13 ಜಿಲ್ಲಾಡಳಿತಗಳೊಂದಿಗೆ ಸಭೆ, ಕೋವಿಡ್ ನಿಯಂತ್ರಣಕ್ಕೆ ಸೂಚನೆ

Team Udayavani, Apr 7, 2021, 9:05 PM IST

bfgdfd

ಬೆಂಗಳೂರು : ಕೋವಿಡ್ ಸೋಂಕು ತಡೆಗಟ್ಟಲು ಹಾಗೂ ಹೆಚ್ಚಿನವರಿಗೆ ಲಸಿಕೆ ನೀಡಲು ಉದ್ಯೋಗಸ್ಥರಿರುವಲ್ಲಿಗೇ ಹೋಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೆ ರಾಜ್ಯದಲ್ಲೂ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬುಧವಾರ (ಏಪ್ರಿಲ್ 7) ಕೋವಿಡ್ ನಿಯಂತ್ರಣ ಸಂಬಂಧ ಬೀದರ್, ಬೆಳಗಾವಿ, ವಿಜಯಪುರ, ಕಲಬುರ್ಗಿ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಚಿವರು ವೀಡಿಯೋ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಉದ್ಯೋಗಸ್ಥರಿಗೆ, ಅರ್ಹರಿಗೆ ಅದೇ ಸ್ಥಳಗಳಲ್ಲಿ ಹೋಗಿ ಲಸಿಕೆ ನೀಡುವ ಅವಕಾಶ ಕೊಟ್ಟಿದೆ. ಈ ಕುರಿತು ದೊಡ್ಡ ಉದ್ಯಮಗಳು, ಐಟಿ ಉದ್ಯಮಗಳು ಮನವಿ ಮಾಡಿದ್ದವು. ಅದಕ್ಕೆ ಕೇಂದ್ರದಿಂದ ಮಂಜೂರಾತಿ ಸಿಕ್ಕಿದೆ. ಏಪ್ರಿಲ್ 11 ರಿಂದ ಅವರಿರುವ ಸ್ಥಳದಲ್ಲೇ ಲಸಿಕೆ ನೀಡುವ ವ್ಯವಸ್ಥೆಯಾಗಲಿದೆ. ಇದರಿಂದಾಗಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಲಿದೆ. ಈವರೆಗೆ 50 ಲಕ್ಷ ಡೋಸ್ ತಲುಪಲಾಗಿದೆ. ಆದಷ್ಟು ಶೀಘ್ರ ಇನ್ನಷ್ಟು 50 ಲಕ್ಷವಾಗಿ, ಒಂದು ಕೋಟಿ ತಲುಪಲಿದೆ ಎಂದರು.

ಕಳೆದೆರಡು ವಾರ ಗಮನಿಸಿದಾಗ ಕೆಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗುತ್ತಾ ಹೋಗಿದೆ. ಕೆಲವು ಕಡೆ ಕೋವಿಡ್ ಪರೀಕ್ಷೆ ಕಡಿಮೆಯಾಗಿದೆ. ಸಾರಿ ಹಾಗೂ ಐಎಲ್ ಐ ಪ್ರಕರಣ ಪತ್ತೆ ಕಡಿಮೆ ಹಾಗೂ ಲಸಿಕೆ ಮೊದಲಾದ ವಿಷಯ ಕುರಿತು ಚರ್ಚಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವರು ನೀಡಿದ ಮಾರ್ಗದರ್ಶನವನ್ನು ಈ ಜಿಲ್ಲೆಗಳಿಗೆ ತಿಳಿಸಲಾಗಿದೆ. ಎಲ್ಲರೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸಾಮಾನ್ಯರು ಸ್ವಯಂ ನಿಯಮ ಹಾಕಿಕೊಳ್ಳಬೇಕು ಎಂದರು.

ಜನರು ನಡವಳಿಕೆಗಳಲ್ಲಿ ಬದಲಾವಣೆ ಮಾಡಿಕೊಂಡು ಸರ್ಕಾರಕ್ಕೆ ಸಹಕಾರ ನೀಡಬೇಕು. ಎರಡನೇ ಅಲೆ ನಿರೀಕ್ಷೆಗೆ ಮೀರಿ ಹರಡುತ್ತಿದೆ. ಸೋಂಕು ಹೆಚ್ಚಾದರೆ ಹಾಸಿಗೆ ಲಭ್ಯತೆ ಕಷ್ಟವಾಗುತ್ತದೆ. ಕಳೆದೊಂದು ವರ್ಷದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿರುವುದರಿಂದ ಅಂತಹ ಸಮಸ್ಯೆ ಇಲ್ಲ. ಆದರೆ ಇದೇ ರೀತಿ 6%, 9% ಪಾಸಿಟಿವಿಟಿ ದರ ಬಂದರೆ ಅಥವಾ 20%, 25% ಬಂದರೆ ಎಷ್ಟು ಜನ ಐಸಿಯುಗೆ ಹೋಗಬೇಕಾಗುತ್ತದೆ ಎಂದು ಯೋಚಿಸಬೇಕಾಗುತ್ತದೆ. ಎಲ್ಲ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ 5 ಸಾವಿರ ಹತ್ತಿರಕ್ಕೆ ಪ್ರಕರಣ ಸಂಖ್ಯೆ ಬಂದಿದೆ. ಪಾಸಿಟಿವಿಟಿ ದರ ಶೇ.5.56 ಇದೆ. ಇಡೀ ರಾಜ್ಯದಲ್ಲಿ 35 ಒಟ್ಟು ಸಾವಾಗಿದ್ದರೆ, 25 ಬೆಂಗಳೂರಿನಲ್ಲೇ ಆಗಿದೆ. ನಾಳೆ ಬಿಬಿಎಂಪಿ, ಬೆಂಗಳೂರು ನಗರ, ಗ್ರಾಮಾಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಪ್ರಧಾನಮಂತ್ರಿಗಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಲಿರುವ ಸಭೆಯಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಕೂಡ ಪಾಲ್ಗೊಂಡು ಚರ್ಚಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.