ಉದಯವಾಣಿ ವರದಿಗೆ ಬಸ್‌ ಸೌಲಭ್ಯ ಕಲ್ಪಿಸಿದ ಸಚಿವರು


Team Udayavani, Jul 12, 2018, 6:30 AM IST

ban12071806medn.gif

ಚಾಮರಾಜನಗರ: ಜಿಲ್ಲೆಯ ಗರಗನಹಳ್ಳಿಯಿಂದ ಅಗತಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಮಯಕ್ಕೆ ಬಸ್‌ ಇಲ್ಲದೇ ವಿದ್ಯಾರ್ಥಿಗಳು 5 ಕಿ.ಮೀ. ನಡೆದು ಹೋಗ ಬೇಕಾಗಿದೆ ಎಂಬ ಉದಯವಾಣಿ ವರದಿ ಓದಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು, ಕ್ರಮ ಕೈಗೊಂಡು ಒಂದೇ ದಿನದಲ್ಲಿ ಬಸ್‌ ಸೌಲಭ್ಯ ಕಲ್ಪಿಸಿದ್ದಾರೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನ ಹಳ್ಳಿಯಿಂದ 5ನೇ ತರಗತಿ ನಂತರದ ತರಗತಿ ಗಳ ಒಟ್ಟು 25 ವಿದ್ಯಾರ್ಥಿಗಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಲು ಒಟ್ಟು 5 ಕಿ.ಮೀ. ದೂರ ನಡೆಯಬೇಕಾಗಿದೆ ಎಂಬ ವರದಿ ಜು.10ರ ಉದಯವಾಣಿಯಲ್ಲಿ ಪ್ರಕಟವಾಗಿತ್ತು. ಈ ವರದಿ ಓದಿದ ಸಾರಿಗೆ ಸಚಿವರು ತಕ್ಷಣ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಕರೆ ಮಾಡಿ, ಗರಗನಹಳ್ಳಿಯಿಂದ ಅಗತಗೌಡನಹಳ್ಳಿಗೆ ಶಾಲಾ ಸಮಯಕ್ಕೆ ಬಸ್‌ ಸೌಲಭ್ಯ ಕಲ್ಪಿಸಿ, ತಮಗೆ ವರದಿ ನೀಡುವಂತೆ ಸೂಚಿಸಿದ್ದಾರೆ.

ಸಚಿವರ ಆದೇಶದಂತೆ, ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್‌ ಕುಮಾರ್‌ ಹಾಗೂ ಗುಂಡ್ಲುಪೇಟೆ ಡಿಪೋ ವ್ಯವಸ್ಥಾಪಕ ಜಯಕುಮಾರ್‌ ಅವರು ಬುಧವಾರ ಬೆಳಗ್ಗೆ ಗರಗನಹಳ್ಳಿ ಹಾಗೂ ಅಗತಗೌಡನಹಳ್ಳಿಗೆ ಭೇಟಿ ನೀಡಿದ್ದರು. ವಿದ್ಯಾರ್ಥಿಗಳನ್ನು ಮಾತನಾಡಿಸಿ ಮಾಹಿತಿ ಪಡೆದುಕೊಂಡರು.

ಗುಂಡ್ಲುಪೇಟೆ ಡಿಪೋದಿಂದ ಹೊರಡುವ ಬಸ್‌ ಬೆಳಗ್ಗೆ 8.45ಕ್ಕೆ ಗರಗನಹಳ್ಳಿ ಗ್ರಾಮಕ್ಕೆ ಬಂದು ವಿದ್ಯಾರ್ಥಿಗಳನ್ನು
ಹತ್ತಿಸಿಕೊಂಡು ಅಗತಗೌಡನಹಳ್ಳಿ ಮಾರ್ಗ ಹೋಗುವ ವ್ಯವಸ್ಥೆ ಮಾಡಲಾಯಿತು. ಅಲ್ಲದೇ ಸಂಜೆ, ಗುಂಡ್ಲು ಪೇಟೆಯಿಂದ ಹೊರಟು, ಅಗತಗೌಡನಹಳ್ಳಿ, ಹೆಗ್ಗಡಹಳ್ಳಿ, ಅಕ್ಕಲಪುರಕ್ಕೆ ಹೋಗಿ ವಾಪಸ್‌ ಬಂದು 4.30ಕ್ಕೆ ಅಗತಗೌಡನಹಳ್ಳಿಯಲ್ಲಿ ಮಕ್ಕಳನ್ನು ಹತ್ತಿಸಿಕೊಂಡು ಗರಗನಹಳ್ಳಿಗೆ ಬಿಟ್ಟು ಹಿಂದಿರುಗುವ ರೂಟ್‌ ಮಾಡಲಾಯಿತು.

ಗ್ರಾಮದಲ್ಲಿ ಸಂಭ್ರಮ
ಕೆಎಸ್‌ಆರ್‌ಟಿಸಿ ಬಸ್‌ನೊಂದಿಗೆ ಗರಗನಹಳ್ಳಿ ಗೇಟ್‌ಗೆ ಬುಧವಾರ ಬೆಳಗ್ಗೆ ಬಂದ ಅಧಿಕಾರಿಗಳು, ನೂತನ
ಬಸ್‌ ಮಾರ್ಗಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಅಗತ ಗೌಡನಹಳ್ಳಿಗೆ ಬಂದರು.

ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಸಂಭ್ರಮಿಸಿದರು. ಅನೇಕ ವರ್ಷಗಳಿಂದ ಈ ಸಮಸ್ಯೆಯಿದ್ದರೂ, ಯಾರೂ
ಬಗೆಹರಿಸಿರಲಿಲ್ಲ. ಉದಯವಾಣಿ ವರದಿಯಿಂದ ಸೌಲಭ್ಯ ದೊರಕಿದೆ ಎಂದು ಶಿಕ್ಷಕಿ ಶ್ರೀದೇವಿ ತಿಳಿಸಿದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.