ಸಿಎಂಗೆ ಬಿಸಿತುಪ್ಪವಾದ ರೇವಣ್ಣ ಪಟ್ಟು


Team Udayavani, Jan 12, 2019, 12:30 AM IST

h-d-revanna-800.jpg

ಬೆಂಗಳೂರು:ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ಕಳೆದ ಹದಿನೈದು ದಿನಗಳಿಂದ ಕಾಂಗ್ರೆಸ್‌ ನಾಯಕರ ವಿರುದ್ಧ ಆಡುತ್ತಿರುವ ಮಾತುಗಳು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಬಿಸಿತುಪ್ಪವಾಗಿರುವ ಜತೆಗೆ ರಾಜಕೀಯ ವಲಯಗಳಲ್ಲಿ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿದೆ.

ಎಚ್‌.ಡಿ.ರೇವಣ್ಣ  ಅವರ ಆಕ್ರೋಶದ  ಮಾತುಗಳೇ ಬಿಜೆಪಿ ಪಾಲಿಗೆ ಆಶಾದಾಯಕವಾಗಿದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಕಂಟಕ ತರುವ ಪ್ರಯತ್ನಕ್ಕೆ ಕೈ ಹಾಕಲಾಗಿದೆ. ಅವಕಾಶ ತಾನಾಗಿಯೇ ಬಂದರೆ ಒಂದು ಕೈ ನೋಡುವುದು ಇದರ ಹಿಂದಿನ ಮರ್ಮವಾಗಿದೆ.

ಹಾಸನ ವಿಚಾರದಲ್ಲಿ  ಎಚ್‌.ಡಿ.ರೇವಣ್ಣ  ಪಟ್ಟು ಸಡಿಲಿಸದೆ ತಮ್ಮ ಇಲಾಖೆ ವ್ಯಾಪ್ತಿಗೆ ಬರುವ ಕೆಆರ್‌ಡಿಎಲ್‌ಗೆ ಕಾಂಗ್ರೆಸ್‌ ಶಾಸಕರನ್ನು ಸುತಾರಾಂ ನೇಮಿಸಬಾರದು. ಹಾಸನದ ವಿಧಾನಪರಿಷತ್‌ ಸದಸ್ಯ ಗೋಪಾಲಸ್ವಾಮಿಯನ್ನು ಸಂಸದೀಯ ಕಾರ್ಯದರ್ಶಿಯನ್ನಾಗಿಯೂ ಮಾಡಬಾರದು. ಹಾಸನ ಜಿಲ್ಲೆಯ ವರ್ಗಾವಣೆ ಸೇರಿದಂತೆ ಇತರೆ ನೇಮಕಾತಿಗಳಲ್ಲಿ ತಮ್ಮ ಮಾತೇ ನಡೆಯಬೇಕು ಎಂದು ಪಟ್ಟು ಹಿಡಿದಿರುವುದು ಒಂದು ರೀತಿಯ ರಾಜಕೀಯ ತಂತ್ರಗಾರಿಕೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.

ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರನ್ನು ತುಳಿಯಲಾಗುತ್ತಿದೆ. ಕಾಂಗ್ರೆಸ್‌ ಮುಖಂಡರ ಶಿಫಾರಸ್ಸುಗಳಿಗೆ ಬೆಲೆ ನೀಡುತ್ತಿಲ್ಲ ಎಂಬ ಆಕ್ರೋಶದ ನಡುವೆಯೂ ರೇವಣ್ಣ ಅವರು ತಮ್ಮ ಹಿಡಿತ ಸಡಿಲ ಮಾಡುತ್ತಿಲ್ಲ. ಯಾರು ಏನೇ ಹೇಳಿದರೂ ನಮ್ಮ ಜಿಲ್ಲೆಯ ವಿಚಾರಕ್ಕೆ ಬರಬೇಡಿ, ನಮ್ಮ ಜಿಲ್ಲೆಯ ಶಾಸಕರ ಹಿತಾಸಕ್ತಿ ನನಗೆ ಮುಖ್ಯ ಎಂದೇ ಪ್ರತಿಪಾದನೆ ಮಾಡುತ್ತಿದ್ದಾರೆ.

ಹೀಗಾಗಿ, ಕಾಂಗ್ರೆಸ್‌ ರೇವಣ್ಣ  ವಿಚಾರದಲ್ಲಿ ಒಂದೊಮ್ಮೆ ತೀವ್ರ ವಿರೋಧಕ್ಕೆ ಮುಂದಾದರೆ ಬೇರೇಯೇ ಸ್ವರೂಪ ಪಡೆಯಬಹುದು. ರೇವಣ್ಣ  ಅವರು ಹಾಸನ ಜಿಲ್ಲೆಯ ಜೆಡಿಎಸ್‌ ಶಾಸಕರ ಹಿತ ಕಾಯುವ ಸಲುವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದೂ ಹೇಳಲಾಗುತ್ತಿದೆ.

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರು  ತಮ್ಮ ಬೆಂಬಲಿಗರಿಗೆ  ಸ್ಥಾನಮಾನ ದೊರಕಿಸಿಕೊಡುವಲ್ಲಿ  ಪಟ್ಟು ಬಿಡುತ್ತಿಲ್ಲ. ಸಂಪುಟ ಪುನಾರಚನೆಯಿಂದ ಹಿಡಿದು ನಿಗಮ ಮಂಡಳಿ ನೇಮಕದವರೆಗೆ ತಮ್ಮ ಕೈ ಮೇಲುಗೈ ಆಗುವಂತೆ ನೋಡಿಕೊಂಡಿದ್ದಾರೆ.

ಮತ್ತೂಂದೆಡೆ ಕಾಂಗ್ರೆಸ್‌ನ ಆಂತರಿಕ ಒತ್ತಡಗಳಿಂದ ಮುಖ್ಯಮಂತ್ರಿ ಚ್‌.ಡಿ.ಕುಮಾರಸ್ವಾಮಿಯವರು ಬೇಸರಗೊಂಡಿದ್ದಾರೆ . ಮುಖ್ಯಮಂತ್ರಿಯವರು ಸಮಾಧಾನವಾಗಿಲ್ಲ ಎಂಬುದು ಅವರ ಆಪ್ತರ ಅನಿಸಿಕೆ.  ಜೆಡಿಎಲ್‌ಪಿ ಸಭೆಯಲ್ಲೂ  ಈ ಕುರಿತು ಅಳಲು ತೋಡಿಕೊಂಡಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಮಹಾಘಟ್‌ಬಂಧನ್‌ ಬಲಿಷ್ಠಗೊಳಿಸುವ ಮುಂಚೂಣಿಯಲ್ಲಿದ್ದಾರೆ. ಅವರಿಗೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದುವರಿಯಬೇಕು ಎಂಬ ಆಸೆಯಿದೆ. ಹೀಗಾಗಿಯೇ ಎಚ್‌.ಡಿ.ರೇವಣ್ಣ ಸೇರಿದಂತೆ ಯಾವ ಸಚಿವರೂ ಬಹಿರಂಗವಾಗಿ ಮಾತನಾಡಿದಂತೆ ತಾಕೀತು ಮಾಡಿದ್ದಾರೆ. ಅದರಂತೆ ಎಚ್‌.ಡಿ.ರೇವಣ್ಣ ಅವರೂ ನಮ್ಮ ಹೈಕಮಾಂಡ್‌ ಹೇಳಿದೆ, ನಾನು ಮಾತನಾಡಲ್ಲ ಎಂದಿದ್ದಾರೆ. ಆದರೆ, ಆಂತರಿಕ  ಪರಿಸ್ಥಿತಿ ಬೇರೆಯೇ ಇದೆ ಎಂದೂ ಹೇಳಲಾಗಿದೆ.

ಈ ಎಲ್ಲ ಬೆಳವಣಿಗೆಗಳು ಸಂಕ್ರಾಂತಿ ನಂತರದ ರಾಜ್ಯ ರಾಜಕೀಯದಲ್ಲಿ ಬದಲಾವಣೆಗಾಗಿ ಕಾಯುತ್ತಿರುವ ಬಿಜೆಪಿಗೆ ವರದಾನವಾಗಲಿದೆಯೇ ಎಂಬುದು ಕಾದು ನೋಡಬೇಕಾಗಿದೆ.

ಎಚ್‌.ಡಿ.ರೇವಣ್ಣ  ಸೆಳೆಯುತ್ತಾ ಬಿಜೆಪಿ
ಸಂಪುಟ ಪುನಾರಚನೆ,ನಿಗಮ-ಮಂಡಳಿ ಹಾಗೂ ಇತರೆ ನೇಮಕಾತಿಗಳ ನಂತರದ ವಿದ್ಯಮಾನಗಳು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಒಂದಷ್ಟು ಕಂದಕವಂತೂ ಸೃಷ್ಟಿಯಾಗಿವೆ. ಈ ಎಲ್ಲ ಬೆಳವಣಿಗೆಗಳು ಬಿಜೆಪಿಯಲ್ಲಿ ಆಶಾಭಾವನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ. ಎರಡೂ ಪಕ್ಷಗಳಲ್ಲಿನ ವ್ಯತ್ಯಾಸಗಳು ಸರ್ಕಾರಕ್ಕೆ ಕುತ್ತು ತರುವ ಹಂತ ತಲುಪಿದರೆ ಎಚ್‌.ಡಿ.ರೇವಣ್ಣ ಅವರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಬಹುದೇ? ಅವರಿಗೆ ಉಪ ಮುಖ್ಯಮಂತ್ರಿ ಪಟ್ಟ ನೀಡುವ “ಆಫ‌ರ್‌’ ನೀಡಬಹುದೇ ಎಂಬ ಚರ್ಚೆಗಳು ಬಿಜೆಪಿ ವಲಯದಲ್ಲಿ ನಡೆಯುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.