‘ಕೊರೊನಾ ಕರ್ಫ್ಯೂ’ ಅಪಹಾಸ್ಯ ಮಾಡಿದವರಿಗೆ ತಿರುಗೇಟು ನೀಡಿದ ಸಚಿವ ಕೆ.ಸುಧಾಕರ್
Team Udayavani, Apr 9, 2021, 9:16 PM IST
ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಪರೀಕ್ಷೆ ಹೆಚ್ಚಳ,ಸಮರ್ಪಕ ಸಂಪರ್ಕ ಪತ್ತೆ, ಸೋಂಕಿತರ ಚಿಕಿತ್ಸೆಗೆ ಆಂಬ್ಯುಲೆನ್ಸ್, ಹಾಸಿಗೆಗಳ ವ್ಯವಸ್ಥೆ ಹೀಗೆ ಹಲವು ರೀತಿಯ ಸಿದ್ಧತೆಗಳಲ್ಲಿ ಅಧಿಕಾರಿಗಳು,ಕೋವಿಡ್ ಯೋಧರು ನಿರಂತರ ಶ್ರಮಿಸುತ್ತಿದ್ದಾರೆ ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಇಂತಹ ಸಂದರ್ಭದಲ್ಲಿ ಸೋಂಕು ಹರಡುವಿಕೆಯನ್ನು ತಡೆಯಲು ಕೊರೊನಾ ಕರ್ಫ್ಯೂ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿ ಮಾಡಲಾಗಿದೆ. ಈ ಕುರಿತು ಕೆಲವರು ಅಪಹಾಸ್ಯ, ಟೀಕೆ-ಟಿಪ್ಪಣಿಗಳು ಮಾಡುತ್ತಿರುವುದನ್ನು ಗಮನಿಸಿದ್ದೇನೆ. ಮೊದಲನೇ ಅಲೆ ಕಡಿಮೆಯಾದ ನಂತರ ಕೊಂಚ ನಿರ್ಲಕ್ಷ್ಯ ತೋರುತ್ತಿರುವ ಜನರಲ್ಲಿ ಮತ್ತೊಮ್ಮೆ ಜಾಗೃತಿ ಮೂಡಿಸಬೇಕಿದೆ ಎಂದಿದ್ದಾರೆ.
ಈ ಬಾರಿ ಲಸಿಕೆ ಕೂಡ ಲಭ್ಯವಿರುವುದರಿಂದ ಹೆಚ್ಚು ಹೆಚ್ಚು ಜನರಿಗೆ ಲಸಿಕೆ ವಿತರಿಸುವುದು, ಲಸಿಕೆ ಬಗ್ಗೆ ಇರುವ ಅಂಜಿಕೆ, ತಪ್ಪು ತಿಳುವಳಿಕೆಗಳ ನಿವಾರಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ವಿಪಕ್ಷಗಳಿಗೆ ಮೊಸರಿನಲ್ಲಿ ಕಲ್ಲು ಹುಡುಕುವುದು, ಕಂಡೋರ ಮಕ್ಕಳನ್ನ ಬಾವಿಗೆ ತಳ್ಳಿ ಆಳ ನೋಡುವುದೇ ಕೆಲಸವಾಗಿದೆ.
ಅನ್ಯ ಪಕ್ಷಗಳ ನಾಯಕರೂ ಜನರಿಂದ ಆರಿಸಿ ಬಂದಂತಹ ಜನಪ್ರತಿನಿಧಿಗಳೇ. ಸರ್ಕಾರಕ್ಕೆ ರಚನಾತ್ಮಕ ಸಲಹೆ ಸೂಚನೆ ನೀಡುವುದಕ್ಕೆ ಅವರಿಗೆ ಅವಕಾಶವೂ ಇದೆ, ಅದು ಅವರ ಕರ್ತವ್ಯವೂ ಹೌದು. ಅದು ಬಿಟ್ಟು ‘ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ’ ಎಂಬಂತೆ ಕೇವಲ ಅನಗತ್ಯ ಟೀಕೆ ಮಾಡುವುದು ಸರಿಯಲ್ಲ, ಅದು ಅವರಿಗೆ ಶೋಭೆ ತರುವುದೂ ಇಲ್ಲ.
ಪಕ್ಷಾತೀತವಾಗಿ ಎಲ್ಲ ನಾಯಕರು, ಜನಪ್ರತಿನಿಧಿಗಳು ಒಗ್ಗಟ್ಟಾಗಿ, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡಲು ಪ್ರಯತ್ನಿಸಿದರೆ, ಜನರಲ್ಲಿ ಎರಡನೇ ಅಲೆ ಬಗ್ಗೆ ಜಾಗೃತಿ ಮೂಡಿಸಿದರೆ, ರಾಜ್ಯವನ್ನು ಆದಷ್ಟು ಬೇಗ ಕೊರೊನಾ ಮುಕ್ತವನ್ನಾಗಿ ಮಾಡಿ, ಜನರ ಜೀವ ಮತ್ತು ಜೀವನೋಪಾಯ ಎರಡನ್ನೂ ಉಳಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ