ಸಚಿವ ವಿನಯ ಕುಲಕರ್ಣಿಗೆ ಗೃಹ ಬಲ
Team Udayavani, Nov 28, 2017, 7:15 AM IST
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ
ಕುಲಕರ್ಣಿ ಪಾತ್ರ ಇಲ್ಲವೇ ಇಲ್ಲ. ಬಿಜೆಪಿಯ ಈ ಆರೋಪ ರಾಜಕೀಯ ಪ್ರೇರಿತ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ
ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸೋಮವಾರ ಪೊಲೀಸ್ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆಯಾದ ಯೋಗೀಶ್ ಗೌಡ ರೌಡಿ ಶೀಟರ್ ಆಗಿದ್ದ. ಆತನ ವಿರುದ್ಧ 25 ಮೊಕದ್ದಮೆಗಳಿದ್ದವು. ಈತನ ಕೊಲೆ ಆರೋಪಿ ಬಸವರಾಜ್ ಮುತ್ತಗಿ ಜತೆ ಜಮೀನು ವ್ಯಾಜ್ಯವಿದೆ. ಈ ಕಾರಣಕ್ಕೆ ಹತ್ಯೆ ನಡೆದಿದೆ. ಇದು ಗೊತ್ತಿದ್ದರೂ ಬಿಜೆಪಿ ರಾಜಕೀಯ ಪ್ರೇರಿತ ಹೋರಾಟ ನಡೆಸುತ್ತಿದೆ ಎಂದು ಕಿಡಿಕಾರಿದರು.
ಕೆಂಪಯ್ಯ ಸಂಧಾನ ಊಹಾಪೋಹ: ಯೋಗೀಶ್ಗೌಡ ಹತ್ಯೆ ಪ್ರಕರಣದಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ
ಸಂಧಾನ ಮಾಡುತ್ತಿದ್ದಾರೆಂಬ ಶೋಭಾ ಕರಂದ್ಲಾಜೆ ಆರೋಪವನ್ನು ತಳ್ಳಿಹಾಕಿದರು. ಇವೆಲ್ಲವೂ ಊಹಾಪೋಹ. ಶೋಭಾ ಅವರು ದಾಖಲೆ ಸಹಿತ ಈ ಕುರಿತು ಮಾತನಾಡಲಿ ಎಂದರು.
ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿಯವರಿಗೆ ಯಾವುದೇ ವಿಷಯ ಸಿಗುತ್ತಿಲ್ಲ. ಆ ಪಕ್ಷದ ರಾಜ್ಯಾಧ್ಯಕ್ಷರು ಹೋರಾಟ ಮಾಡಿ ಎಂದು ಹೇಳಿದ್ದಕ್ಕೆ ಸಚಿವ ರಾದ ವಿನಯ ಕುಲಕರ್ಣಿ ಮತ್ತು ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರ ಹೋರಾಟ ನಡೆಯುತ್ತದೆಯೇ ಹೊರತು ಬಿಜೆಪಿ ಲೆಕ್ಕಕ್ಕಿಲ್ಲ ಎಂದು ಹೇಳಿದರು.
ನಂತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ರಾಮಲಿಂಗಾರೆಡ್ಡಿ, ಪೊಲೀಸ್ ಜನಸ್ನೇಹಿ ಕೇಂದ್ರಕ್ಕೆ ಬರುವ ಜನರ ಜತೆ ಅನ್ಯೋನ್ಯವಾಗಿ ಮತ್ತು ಪ್ರೀತಿಯಿಂದ ನಡೆದುಕೊಂಡು ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ