ಚಾಕು ತೋರಿಸಿದ ಅಪ್ರಾಪ್ತ ಸೆರೆ
Team Udayavani, Mar 21, 2019, 9:06 AM IST
ಬೆಂಗಳೂರು: ತಾನು ಪ್ರೀತಿಸುತ್ತಿದ್ದ ವಿದ್ಯಾರ್ಥಿನಿಗೆ ತನ್ನ ಪ್ರೀತಿ ವಿಚಾರ ತಿಳಿಸಿ, ತನ್ನನ್ನೇ ಮದುವೆಯಾಗುವಂತೆ ಒಪ್ಪಿಸಲು ಮತ್ತೂಬ್ಬ ವಿದ್ಯಾರ್ಥಿನಿಗೆ ಅಪ್ರಾಪ್ತನೊಬ್ಬ ಚಾಕು ತೋರಿಸಿ ಹೆದರಿಸಿ, ಕಿರುಕುಳ ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ಮಧ್ಯ ಪ್ರವೇಶದಿಂದ (ಎನ್ಸಿಪಿಸಿಆರ್) ಆರೋಪಿತನ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಜನವರಿ 25ರಂದು ಮಧ್ಯಾಹ್ನ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ತಂದೆ ಎನ್ ಸಿಪಿಸಿಆರ್ಗೆ ಇ-ಮೇಲ್ ಮುಖಾಂತರ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ್ದ ಆಯೋಗ, ಕೂಡಲೇ ಘಟನೆ ಸಂಬಂಧ ಕ್ರಮ ಕೈಗೊಳ್ಳುವಂತೆ ನೀಡಿದ ಸೂಚನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು, ಸಂತ್ರಸ್ತೆಯಿಂದ ಘಟನೆ ಬಗ್ಗೆ ವಿವರ ಪಡೆದು, ಆರೋಪಿತ ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯು 15 ವರ್ಷದವನಾಗಿದ್ದು, ಖಾಸಗಿ ಶಾಲೆಯೊಂದರ ಬಸ್ನಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಜತೆಗೆ, ಪ್ರಕರಣ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಲಿದ್ದು, ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ, ಜ.25ರಂದು ಮಧ್ಯಾಹ್ನ ಒಬ್ಬರೇ ನಡೆದು ಹೋಗುವಾಗ ಬೈಕ್ನಲ್ಲಿ ಬಂದು ಅಡ್ಡಗಟ್ಟಿದ್ದ ಆರೋಪಿ, “ನಿಮ್ಮ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ನಾನು ಪ್ರೀತಿಸುತ್ತಿದ್ದೇನೆ. ಈ ವಿಚಾರವನ್ನು ಆಕೆಗೆ ತಿಳಿಸಬೇಕು. ಇಲ್ಲದಿದ್ದರೆ ನಿನಗೆ ಒಂದು ಗತಿ ಕಾಣಿಸುತ್ತೇನೆ’ ಎಂದು ಚಾಕು ತೋರಿಸಿ ಬೆದರಿಸಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಜೆ ನಾಲ್ಕು ಗಂಟೆಯಾದರು ಮಗಳು ಮನೆಗೆ ಬಾರದ್ದರಿಂದ ಆಕೆಯನ್ನು ಕರೆದುಕೊಂಡು ಬರಲು ಅವರ ತಂದೆ ಶಾಲೆ ಬಳಿ ತೆರಳುತ್ತಿದ್ದಾಗ ರಸ್ತೆಯ ಸಮೀಪ ಮಗಳು ಅಳುತ್ತಾ ಬರುತ್ತಿರುವುದು ಕಂಡುಬಂದಿದೆ. ಕೂಡಲೇ ಮನೆಗೆ ಕರೆದೊಯ್ದು ವಿಚಾರಿಸಿದಾಗ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ಹೀಗಾಗಿ ವಿದ್ಯಾರ್ಥಿನಿಯ ತಂದೆ ಎನ್ಸಿಪಿಸಿಆರ್ಗೆ ದೂರು ನೀಡಿದ್ದರು ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…