ಚಳವಳಿಗಾರರ ಸಾಹಿತ್ಯದ ಬಗ್ಗೆ ತಪ್ಪು ಕಲ್ಪನೆ


Team Udayavani, Feb 7, 2019, 8:29 AM IST

blore-17.jpg

ಬೆಂಗಳೂರು: ಚಳವಳಿಗಳಲ್ಲಿ ಪಾಲ್ಗೊಂಡವರಲ್ಲಿ ಶುದ್ಧ ಸಾಹಿತ್ಯ ಇಲ್ಲ ಎಂಬ ತಪ್ಪುಕಲ್ಪನೆ ಕೆಲವರಲ್ಲಿ ಆಳವಾಗಿ ಬೇರೂರಿದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದರು.

ಅ.ನ.ಕೃ ಕನ್ನಡ ಸಂಘ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದ್ವಾರನಕುಂಟೆ ಪಾತಣ್ಣ ಅವರ ‘ಬೇಲಿ ಮೇಲಿನ ಹೂ’ ಕಥಾ ಸಂಕಲನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಚಳವಳಿಗಳ ಕುರಿತು ಕೆಲವರು ಬೇರೆ ಬೇರೆ ರೀತಿಯಲ್ಲಿ ಅರ್ಥೈಸುತ್ತಾರೆ. ಶುದ್ಧ ಮತ್ತು ಅಶುದ್ಧ ಸಾಹಿತ್ಯದ ಬಗ್ಗೆಯೂ ಮಾತನಾಡುತ್ತಾರೆ. ಆದರೆ, ಈ ಕಲ್ಪನೆ ತಪ್ಪು. ಸಾಹಿತ್ಯ ಲೋಕದಲ್ಲಿ ಶುದ್ಧ ಮತ್ತು ಅಶುದ್ಧ ಎಂಬುವುದಿಲ್ಲ ಎಂದರು.

ಚಳವಳಿಗಳ ಜತೆಯಲ್ಲೇ ಸಾಹಿತ್ಯವೂ ಕೂಡ ಸಾಗಿದೆ. ಹೀಗಾಗಿ ಸಾಹಿತ್ಯಕ್ಕೂ ಮತ್ತು ಚಳವಳಿಗೆ ನಿಕಟ ಸಂಬಂಧ ಇದೆ. ಕುವೆಂಪು ಅವರು ಎಂದೂ ಬೀದಿಗೆ ಇಳಿದು ಹೋರಾಟ ಮಾಡಲಿಲ್ಲ. ಆದರೆ, ತಮ್ಮ ವೈಚಾರಿಕ ಬರಹಗಳ ಮೂಲಕ ಸಮಾಜವನ್ನು ಎಚ್ಚರಿಸಿದರು. ಕೆಲವರು ಸತ್ಯವಲ್ಲದ ಸುಳ್ಳುಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಚಳವಳಿಗಳಿಗೆ ಸೈದ್ಧಾಂತಿಕತೆ ಇದೆ, ನೈತಿಕತೆ ಇದೆ. ಎಲ್ಲಕ್ಕಿಂತಲೂ ಹೆಚ್ಚಾಗಿ ಒಂದು ಬದ್ಧತೆ ಇದೆ. ಆ ಹಿನ್ನೆಲೆಯಲ್ಲಿಯೇ ಜನರು ಚಳವಳಿಗಳನ್ನು ನಂಬಿದರು. ಆದರೆ ಆ ಚಳವಳಿಗಳಲ್ಲಿ ಪಾಲ್ಗೊಂಡಿರುವವರಿಗೆ ಶುದ್ಧ ಸಾಹಿತ್ಯದ ಬರವಣಿಗೆ ಇಲ್ಲ ಎಂದು ಅಪಪ್ರಚಾರ ಮಾಡುವ ಪ್ರವೃತ್ತಿ ಸರಿಯಲ್ಲ ಎಂದು ಹೇಳಿದರು.

ದ್ವಾರನಕುಂಟೆ ಪಾತಣ್ಣ ಅವರ ಕಥಾ ಸಂಕಲನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಗ್ರಾಮೀಣ ಸೊಗಡನ್ನು ಮೇಳೈಸಿಕೊಂಡು ಕಥೆಗಳು ಒಡಮೂಡಿವೆ. ಗ್ರಾಮೀಣ ಸೊಗಡನ್ನೇ ಕೇಂದ್ರೀಕರಿಸಿ ಮತ್ತಷ್ಟು ಕೃತಿಗಳು ಹೊರಹೊಮ್ಮಲಿ ಎಂದು ಆಶಿಸಿದರು.

ಕೃತಿ ಕುರಿತು ಮಾತನಾಡಿದ ಕನ್ನಡಪರ ಚಿಂತಕ ಜಾಣಗೆರೆ ವೆಂಕಟರಾಮಯ್ಯ, ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ವ್ಯಕ್ತಿ ಎಂದು ಕೊಂಡವರು ಮುಖ್ಯ ಮಂತ್ರಿಯಾದರೂ ಈ ರಾಜ್ಯದ ಸಮಸ್ಯೆಗಳು ಪರಿಹಾರವಾಗಲಿಲ್ಲ. ಇಂತಹ ಸ್ಥಿತಿಯಲ್ಲಿ ದ್ವಾರನಕುಂಟೆ ಪಾತಣ್ಣ ಅವರ ಕಥಾ ಸಂಕಲನ ‘ಬೇಲಿ ಮೇಲಿನ ಹೂ’ ರೈತರ ಸಮಸ್ಯೆಯನ್ನು ಬಿಚ್ಚಿಡುತ್ತದೆ ಎಂದರು.

ಹಳ್ಳಿಯಿಂದ ನಗರಕ್ಕೆ ಬಂದು ಬದುಕು ಕಟ್ಟಿಕಟ್ಟಿಕೊಳ್ಳುವ ಮಹಿಳೆಯರ ಕಥೆಗಳು ಸ್ಫೂರ್ತಿಯ ಸೆಲೆಯಾಗಿವೆ. ಹಳ್ಳಿಯಲ್ಲಿದ್ದು ಕೊಂಡೇ ಗಂಡನ ಆಸರೆಯಿಲ್ಲದೆ ಸಂಸಾರ ಸಾಗಿಸುವ ಮಹಿಳೆಯರ ಕಥೆಗಳು ಕೂಡ ಬದುಕುವ ಚೈತನ್ಯವನ್ನು ವೃದ್ಧಿಸುತ್ತವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಮಾತನಾಡಿದರು. ಕರುನಾಡ ಸಾಹಿತ್ಯ ವೇದಿಕೆಯ ಹನುಮಂತರಾಯಪ್ಪ, ರು.ಬಸಪ್ಪ, ಸಾಹಿತಿ ದ್ವಾರನಕುಂಟೆ ಪಾತಣ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.