ಕಂಪ್ಲಿ ಶಾಸಕ ಗಣೇಶ್ ಅಮಾನತು
Team Udayavani, Jan 22, 2019, 12:30 AM IST
ಬೆಂಗಳೂರು: ಆಪರೇಷನ್ ಕಮಲದ ಆತಂಕದ ಹಿನ್ನೆಲೆಯಲ್ಲಿ ರೆಸಾರ್ಟ್ ಸೇರಿದ್ದ ಕಾಂಗ್ರೆಸ್ ಶಾಸಕರು ಗಲಾಟೆ ಮಾಡಿಕೊಂಡ
ಹಿನ್ನೆಲೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಅಲ್ಲದೇ ಶತಾಯುಷಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರೆಸಾರ್ಟ್ ರಾಜಕೀಯಕ್ಕೆ ವಿದಾಯ ಹೇಳಿ ಕೈ ನಾಯಕರು ತಮ್ಮ ಶಾಸಕರನ್ನು ಆತಂಕದಲ್ಲಿಯೇ ಕ್ಷೇತ್ರಗಳಿಗೆ ಕಳುಹಿಸಿ ಕೊಟ್ಟಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ವೈ ಘೋರ್ಪಡೆ, ಶಾಸಕ ಗಣೇಶ್ ಅವರ ಅಮಾನತು ಆದೇಶ ಹೊರಡಿಸಿದ್ದಾರೆ. ಘಟನೆಯ ಬಗ್ಗೆ ಆನಂದ್ ಸಿಂಗ್ ಗಂಭೀರ ಆರೋಪ ಮಾಡಿರುವ ಕಾರಣ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಜೆ.ಎನ್. ಗಣೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಅಲ್ಲದೇ ಪ್ರಕರಣದ ವಿಚಾರಣೆ ನಡೆಸಲು ಡಿಸಿಎಂ ಪರಮೇಶ್ವರ್ ನೇತೃತ್ವದಲ್ಲಿ ಸಚಿವ ರಾದ ಕೆ.ಜೆ. ಜಾರ್ಜ್ ಹಾಗೂ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ವಿಶೇಷ ತನಿಖಾ ಸಮಿತಿ ರಚಿಸಲಾಗಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸಿಂಗ್ಗೆ ಚಿಕಿತ್ಸೆ ಮುಂದುವರಿಕೆ
ಭಾನುವಾರ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ವಿಜಯನಗರ ಶಾಸಕ ಆನಂದ್ ಸಿಂಗ್ ಅವರಿಗೆ ಕಣ್ಣಿಗೆ ಆಗಿರುವ ಗಾಯ ಇನ್ನೂ ಊದಿಕೊಂಡಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಇದರ ಬೆನ್ನಲ್ಲೇಕಂಪ್ಲಿ ಶಾಸಕ ಗಣೇಶ್ ಐಪಿಸಿ ಸೆಕ್ಸನ್ 323, 324, 307 ,504, 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್