![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಶಾಸಕ ಶಿವಣ್ಣ ಮನೆ ಮೇಲೆ ಐಟಿ ಇಲಾಖೆ ದಾಳಿ
Team Udayavani, Apr 17, 2018, 12:04 PM IST
![shivanna.jpg](https://www.udayavani.com/wp-content/uploads/2018/04/17/shivanna-464x465.jpg)
ಆನೇಕಲ್: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ರಾತ್ರಿಯೇ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಮನೆ ಮೇಲೆ ಐಟಿ ಇಲಾಖೆ ದಾಳಿ ನಡೆಸಿದೆ. ಭಾನುವಾರ ಮಧ್ಯರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮೂರು ಕಾರುಗಳು ಚಂದಾಪುರದ ಬಳಿಯಿರುವ ಸೂರ್ಯಸಿಟಿಯ ಆನೇಕಲ್ ಶಾಸಕ ಬಿ.ಶಿವಣ್ಣನವರ ಮನೆ ಮುಂದೆ ದಾಳಿಗಾಗಿ ಸಿದ್ಧವಾಗಿದ್ದವು. ನಾಲ್ಕು ಜನ ಅಧಿಕಾರಿಗಳ ತಂಡ ಮಧ್ಯರಾತ್ರಿಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಿರಂತರವಾಗಿ ಶೋಧ ನಡೆಸಿ ಒಂದು ಸೂಟ್ಕೇಸ್ನೊಂದಿಗೆ ತೆರಳಿದ್ದಾರೆ.
ಅಧಿಕಾರಿಗಳು ಶಾಸಕರ ಮನೆ ಜಾಲಾಡುತ್ತಿದ್ದಂತೆ ಸುದ್ದಿ ಕಾಡ್ಗಿಚ್ಚಿನಂತೆ ತಾಲೂಕಿನಾದ್ಯಂಥ ಹಬ್ಬಿತು. ಸಾವಿರಾರು ಸಂಖ್ಯೆಯಲ್ಲಿನ ಕಾರ್ಯಕರ್ತರು ಶಾಸಕ ಶಿವಣ್ಣ ಅವರ ಮನೆ ಮುಂದೆ ಜಮಾಯಿಸಿದರು. ಕಾರ್ಯಕರ್ತರು ಆಗಮಿಸುತ್ತಿದ್ದಂತೆ ಪೊಲೀಸರು ಸರ್ಪಗಾವಲು ಹಾಕಿ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೇಂದ್ರ ಸರ್ಕಾರ ಮತ್ತು ಆನೇಕಲ್ ಮಾಜಿ ಸಚಿವ ಎ.ನಾರಾಯಣಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಿದ್ದಂತೆ ಶಾಸಕ ಬಿ.ಶಿವಣ್ಣ ಮನೆಯಿಂದ ಹೊರ ಬಂದು ಘೋಷಣೆಗಳನ್ನು ಹಾಕದಂತೆ ಮನವಿ ಮಾಡಿದರು. ಆದರೆ ಕಾರ್ಯಕರ್ತರು ಮಾತ್ರ ಸಮಾಧಾನವಾಗದೇ ಘೋಷಣೆಗಳನ್ನು ಹಾಕುತ್ತಲೇ ಇದ್ದರು.
ಸುಮಾರು ಆರು ಗಂಟೆಗಳ ಸತತವಾಗಿ ದಾಖಲಾತಿಗಳನ್ನು ಮತ್ತು ಮನೆಯಲ್ಲಿ ಶಾಸಕರ ಮೊಬೈಲ್, ಸಿಸಿಟೀವಿ ಕ್ಯಾಮೆರಾ ಹಾರ್ಡ್ ಡಿಸ್ಕ್ ವಶಕ್ಕೆ ತೆಗೆದುಕೊಂಡು ಹೋಗಿದ್ದಾರೆನ್ನಲಾಗಿದೆ. ಸುಮಾರು ಮಧ್ಯಾಹ್ನ 12ಗಂಟೆಗೆ ಶಾಸಕ ಬಿ.ಶಿವಣ್ಣನವರ ಮನೆಯಿಂದ ಅಧಿಕಾರಿಗಳು ಹೊರ ನಡೆಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಶಿವಣ್ಣನವರ ಪರ ಘೋಷಣೆಗಳನ್ನು ಹಾಕಿ ಸಂಭ್ರಮಿಸಿದರು. ಶಿವಣ್ಣನವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡಿ, ಮತ್ತೆ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಮಾನಸಿಕವಾಗಿ ಕುಗ್ಗಿಸಲು ತಂತ್ರ: ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ.ಶಿವಣ್ಣ ಇದೊಂದು ರಾಜಕೀಯ ಪ್ರೇರಿತ ದಾಳಿ. ನನ್ನನ್ನು ಮಾನಸಿಕವಾಗಿ ಕುಗ್ಗಿಸಲು ಈ ರೀತಿ ತಂತ್ರ ಅನುಸರಿಸಿದ್ದಾರೆಂದು ಆರೋಪಿಸಿದರು. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಈ ರೀತಿಯ ಹೆದರಿಸುವ ಕೆಲಸ ಮಾಡಿರಲಿಲ್ಲ. ಆದರೆ ಬಿಜೆಪಿ ಐಟಿ ಅಧಿಕಾರಿಗಳನ್ನು ಮುಂದೆ ಬಿಟ್ಟು ಇಷ್ಟು ದಿನ ನನ್ನ ಮೇಲೆ ತನಿಖೆ ಮಾಡಬಹುದಿತ್ತು. ಚುನಾವಣೆ ಸಮಯಕ್ಕೆ ಇಂತಹ ದಾಳಿ ಮಾಡುವುದು ರಾಜಕೀಯ ಪ್ರೇರಿತವಾಗಿದೆ ಎಂದರು.
ಅಧಿಕಾರಿಗಳು ಕೆಲವೊಂದು ಪ್ರಶ್ನೆಗಳನ್ನು ನನ್ನ ಬಳಿ ಕೇಳಿದ್ದಾರೆ. ಅದಕ್ಕೆಲ್ಲ ಸೂಕ್ತವಾದ ಉತ್ತರ ಕೊಟ್ಟಿದ್ದೇನೆ. ಕೆಲವೊಂದು ದಾಖಲೆಗಳನ್ನು ಅವರು ಪಡೆದುಕೊಂಡಿದ್ದಾರೆ. ನನ್ನಿಂದ ತಪ್ಪಾಗಿದ್ದರೆ ಶಿಕ್ಷೆಯಾಗಲಿ. ಚುನಾವಣೆಯಲ್ಲಿ ಜನತೆ ತೀರ್ಮಾನ ಮಾಡುತ್ತಾರೆ. ನೇರವಾಗಿ ಸ್ಪರ್ಧಿಸಬೇಕಾದವರು ಹಿಂಬದಿಯ ರಾಜಕಾರಣ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷ ಸಾಧಿಸುತ್ತಿದೆ ಎಂದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.