ಮನೆ ನಿರ್ಮಾಣಕ್ಕೆ ಚೆಕ್ ವಿತರಿಸಿದ ಶಾಸಕ ವಿ.ಸೋಮಣ್ಣ
Team Udayavani, Jul 31, 2021, 6:33 PM IST
ಬೆಂಗಳೂರು: ಪ್ರತಿಯೊಬ್ಬರ ಮನೆಯು ಮಂತ್ರಾಲಯವಾಗಬೇಕು ,ಮನಸ್ಸು ದೇವಾಲಯವಾಗಬೇಕು ಆಗ ಉತ್ತಮ ಸಮಾಜ ನೋಡಲು ಸಾಧ್ಯ ಎಂದು ಶಾಸಕ ವಿ.ಸೋಮಣ್ಣ ನುಡಿದರು.
ಅವರು ಶನಿವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು, ಮನೆ ಮಾಲೀಕರಿಗೆ ಅನುದಾನದ ಚಕ್ಕು ಗಳನ್ನು ಮಾಜಿ ಸಚಿವರು ,ಸ್ಥಳೀಯ ಶಾಸಕರಾದ ವಿ.ಸೋಮಣ್ಣರವರು ಅರ್ಹ ಫಲಾನುಭವಿಗಳಿಗೆ ಚೆಕ್ಕುಗಳನ್ನು ವಿತರಣೆಯ ಮಾಡಿದರು .
ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರು ಸ್ವಂತ ಸೂರು ಇರಬೇಕು ಮತ್ತು ಸುಸಜ್ಜಿತ ಮನೆ ನಿರ್ಮಿಸಬೇಕು ಎಂದು ಆಸೆ ಹೊಂದಿರುತ್ತಾರೆ .ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ 9 ವಾರ್ಡ್ ಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸ್ವಂತ ಜಾಗದಲ್ಲಿ ಶೀಟ್ ಮನೆಯಲ್ಲಿ ವಾಸವಿರುವವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 15×20 ಮತ್ತು 20×30 ಚದರ ಅಡಿಯಲ್ಲಿ ವಾಸಿಸುವ ನಿವಾಸಿಗಳಿಗೆ ಪ್ರತಿ ಮನೆ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಹಣ ನೀಡಲಾಗುತ್ತಿದೆ ಎಂದರು .
ಈ ವೇಳೆ ಗೋವಿಂದರಾಜನಗರ ಮಂಡಲ ಅಧ್ಯಕ್ಷರಾದ ವಿಶ್ವನಾಥ್ ಗೌಡ ಹಾಗೂ ಮಾಜಿ ಬಿಬಿಎಂಪಿ ಸದಸ್ಯರುಗಳಾದ ಕೆ.ಉಮೇಶ್ ಶೆಟ್ಟಿ ,ಮೋಹನ್ ಕುಮಾರ್ ,ವಾಗೇಶ್ ಶ್ರೀಮತಿ ರೂಪಲಿಂಗೇಶ್ವರ್ , ರಾಜೇಶ್ವರಿ ಬೆಳಗೊಡ್,ಶಂಕುತಲ ಡೊಡ್ಡಲಕ್ಕಪ್ಪರವರು,ಕೊಳಚೆ ನಿರ್ಮೂಲನ ಮಂಡಳಿ ಸಂಘದ ಅಧ್ಯಕ್ಷರಾದ ಎಂ.ಸೋಮಶೇಖರ್ ಮತ್ತು ಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ