ಮೊಬೈಲ್‌ ಕ್ಯಾಂಟೀನ್‌ ಸಂಚಾರ


Team Udayavani, Jan 25, 2018, 9:39 AM IST

indira-2.jpg

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಸ್ಥಳಾವಕಾಶ ದೊರೆಯದ ವಾರ್ಡ್‌ಗಳಿಗೆ ಆಹಾರ ಪೂರೈಸಲು “ಮೊಬೈಲ್‌ ಇಂದಿರಾ ಕ್ಯಾಂಟೀನ್‌’ಗಳು ಸಜ್ಜಾಗಿದ್ದು, ಜ.26ರಿಂದ ನಗರದ ವಿವಿಧೆಡೆ ಆಹಾರ ವಿತರಿಸುವ ಕಾರ್ಯ ಆರಂಭಿಸಲಿವೆ. 

ಈಗಾಗಲೇ 174 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಿಸಲಾಗಿದೆ. ಆದರೆ, ಕೇಂದ್ರ ಭಾಗದ 24 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗೆ ಅಗತ್ಯ ವಿಸ್ತೀರ್ಣದ ಸರ್ಕಾರಿ ಜಾಗ ಸಿಕ್ಕಿಲ್ಲ. ಆ ಹಿನ್ನೆಲೆಯಲ್ಲಿ ಪಾಲಿಕೆಯ ಅಧಿಕಾರಿಗಳು “ಮೊಬೈಲ್‌ ಇಂದಿರಾ ಕ್ಯಾಂಟೀನ್‌’ಗಳ ಮೂಲಕ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ವಿತರಿಸಲು ಮುಂದಾಗಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮವೆನಿಸಿದ 10 ಮೊಬೈಲ್‌ ಕ್ಯಾಂಟೀನ್‌ಗಳ ಅಧ್ಯಯನ ನಡೆಸಿರುವ ಅಧಿಕಾರಿಗಳು ಅವುಗಳಲ್ಲಿನ ಪ್ರಮುಖ ಅಂಶಗಳನ್ನು ಆಧರಿಸಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ವಾಹನ ವಿನ್ಯಾಸಗೊಳಿಸಿದ್ದಾರೆ. ಇದರಲ್ಲಿ ಹಲವು ವ್ಯವಸ್ಥೆ ಕಲ್ಪಿಸಲಾಗಿದೆ.

ಸಿಸಿಟಿವಿ ಮತ್ತು ಜಿಪಿಎಸ್‌ ಅಳವಡಿಕೆ: ಭದ್ರತೆ ಹಾಗೂ ಸುರಕ್ಷತಾ ದೃಷ್ಟಿಯಿಂದ ವಾಹನದಲ್ಲಿ ನಾಲ್ಕು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಹನದ ಚಲನವಲನ ನಿಯಂತ್ರಿಸಲು ಪ್ರತಿ ವಾಹನದಲ್ಲಿ ಜಿಪಿಎಸ್‌ ಅಳವಡಿಸಲಾಗಿದೆ. ನಿಗದಿಪಡಿಸಿರುವ ಮಾರ್ಗದಲ್ಲಿಯೇ ವಾಹನಗಳು ಸಂಚರಿಸುತ್ತಿವೆಯೇ ಎಂಬುದನ್ನು ಅಧಿಕಾರಿಗಳು ಗಮನಿಸಲಿದ್ದಾರೆ.

 ಸೌರಶಕ್ತಿ ಆಧಾರಿತ ಲೈಟ್ಸ್‌: ಮೊಬೈಲ್‌ ಇಂದಿರಾ ಕ್ಯಾಂಟೀನ್‌ ವಾಹನಗಳ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಅಳವಡಿಸಿರುವ ಲೈಟ್‌ಗಳು ಸೌರಶಕ್ತಿಯಿಂದ ಉರಿಯಲಿವೆ. ಅದಕ್ಕಾಗಿಯೇ ವಾಹನದ ಮೇಲ್ಭಾಗದಲ್ಲಿ ಸೌರಶಕ್ತಿ ಪ್ಯಾನಲ್‌ಗ‌ಳನ್ನು ಅಳವಡಿಸಲಾಗಿದ್ದು, ವಾಹನದಲ್ಲಿರುವ ಸಿಸಿಟಿವಿ ಕ್ಯಾಮರಾ, ಟಿಕ್ಕರ್‌ ಬೋರ್ಡ್‌ ಹಾಗೂ ಪಿಒಎಸ್‌ ಯಂತ್ರಗಳು ಸಹ ಸೌರಶಕ್ತಿಯಿಂದಲೇ ಕಾರ್ಯನಿರ್ವಹಿಸುತ್ತವೆ.

ಪ್ರತಿ ವಾಹನಕ್ಕೆ ಮಾರ್ಷಲ್‌ ನೇಮಕ: ಪ್ರತಿ ವಾಹನಕ್ಕೆ ಪಾಲಿಕೆಯಿಂದ ಒಬ್ಬರು ಮಾರ್ಷಲ್‌ ನೇಮಿಸಲಾಗಿದೆ. ಮಾರ್ಷಲ್‌ಗ‌ಳು ಕ್ಯಾಂಟೀನ್‌ ನಲ್ಲಿನ ಸ್ವತ್ಛತೆ, ನೈರ್ಮಲ್ಯದ ಜತೆಗೆ, ಆಹಾರ ಪಡೆಯಲು ಜನರು ಸಾಲಿನಲ್ಲಿ ಬರುವಂತೆ ಹಾಗೂ ಕ್ಯಾಂಟೀನ್‌ ಬಳಿ ಯಾವುದೇ ರೀತಿಯ ಅಹಿತಕರ ಘಟನೆ ಗಳು ನಡೆಯದಂತೆ ನೋಡಿಕೊಳ್ಳಲಿದ್ದಾರೆ.

ಮಳೆ, ಬಿಸಿಲಿನ ಚಿಂತೆಯಿಲ್ಲ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ವಾಹನದ ಎರಡು ಕಡೆಗಳಲ್ಲಿ ವಿಸ್ತರಿಸಬಹುದಾದ ಮೇಲ್ಛಾವಣಿ (ಕ್ಯಾನೋಪಿ) ಅಳವಡಿಸಲಾಗಿದೆ. ಅದರಂತೆ ಪ್ರತಿ ಪಾರ್ಶ್ವದಲ್ಲಿಯೂ ಮೇಲ್ಛಾವಣಿಗಳು 4 ಅಡಿ ವಿಸ್ತರಿಸಬಹುದಾಗಿದ್ದು, ಇದರಿಂದಾಗಿ ಜನರು ಬಿಸಿಲು ಮತ್ತು ಮಳೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ. 

ಈ ಹಿಂದೆ ಸ್ಥಳ ದೊರೆಯಲಿಲ್ಲ ಎಂದು ಕ್ಯಾಂಟೀನ್‌ನಿಂದ ವಂಚಿತರಾದವರಿಗೆ ಸೌಲಭ ವಾಹನಗಳು ನಿರ್ದಿಷ್ಟ ಮಾರ್ಗದಲ್ಲೇ ಸಂಚರಿಸುತ್ತಿವೆ ಎಂದು ತಿಳಿಯಲು ಜಿಪಿಎಸ್‌
 
ಕ್ಯಾಂಟೀನ್‌ ವಿಶೇಷತೆಗಳು
ಆಹಾರವನ್ನು ತ್ವರಿತವಾಗಿ ವಿತರಿಸಲು ಪ್ರತ್ಯೇಕ ನಗದು ಮತ್ತು ಆಹಾರದ ಕೌಂಟರ್‌. 
ಸ್ವತ್ಛ ಹಾಗೂ ಬಳಸಿದ ಪ್ಲೇಟ್‌ಗಳನ್ನು ಇರಿಸಲು ಪ್ರತ್ಯೇಕ ರ್ಯಾಕ್‌.
ಅಂತರ್ನಿರ್ಮಿತ ಪ್ರತ್ಯೇಕ 250 ಲೀ. ಕುಡಿಯುವ ನೀರಿನ, 350 ಲೀ. ಕೈತೊಳೆಯುವ ನೀರು ಮತ್ತು ತ್ಯಾಜ್ಯ ನೀರು ಶೇಖರಿಸಲು 500 ಲೀ.ಟ್ಯಾಂಕ್‌.
ಆಹಾರದ ಪಾತ್ರೆಗಳನ್ನು ಲೋಡಿಂಗ್‌ ಮತ್ತು ಅನ್‌ಲೋಡಿಂಗ್‌ ಮಾಡಲು ಸೈಡ್‌ ಪೋರ್ಟ್‌.
ಎಸ್‌ಎಸ್‌-304 ಆಹಾರ ದರ್ಜೆಯ ಒಳಾಂಗಣ.
ಎಲೆಕ್ಟ್ರಾನಿಕಲ್‌ ಟಿಕ್ಕರ್‌ ಬೋರ್ಡ್‌ ಮತ್ತು ಪಿಒಎಸ್‌ ಯಂತ್ರಗಳು.
ಹೆಚ್ಚುವರಿಯಾಗಿ 6 ಊಟದ ಟೇಬಲ್‌ಗ‌ಳು.
ಬಳಸಿದ ಪ್ಲೇಟ್‌ಗಳು ಮತ್ತು ತ್ಯಾಜ್ಯ ಆಹಾರ ಸಂಗ್ರಹಣೆಗೆ ಕ್ರೇಟ್‌ಗಳನ್ನೊಳಗೊಂಡ ಪ್ರತ್ಯೇಕ ಪ್ರದೇಶ.
„ಒಳಗೆ, ಹೊರೆಗೆ 4 ಸಿಸಿಟಿವಿ ಕ್ಯಾಮರಾ ಅಳವಡಿಕ.

ಸೇವೆ ದೊರೆವ ಸ್ಥಳಗಳು
ಪಶ್ಚಿಮ ವಲಯ
ಕಾಡು ಮಲ್ಲೇಶ್ವರ, ಮೆಜೆಸ್ಟಿಕ್‌, ಓಕಳಿಪುರ, ದಯಾನಂದನಗರ, ಬಸವೇಶ್ವರನಗರ, ಚಾಮರಾಜಪೇಟೆ,
ಶ್ರೀರಾಮಮಂದಿರ

ದಕ್ಷಿಣ ವಲಯ
ಶ್ರೀನಗರ, ಗಿರಿನಗರ, ಮಡಿವಾಳ, ಜಯ ನಗರ, ಜೆ.ಪಿ.ನಗರ, ಕೆಂಪಾಪುರ ಅಗ್ರಹಾರ, ಬಾಪೂಜಿನಗರ, ಯಡಿಯೂರು

ಪೂರ್ವ ವಲಯ 
ಕಾಚರಕನಹಳ್ಳಿ, ಮೋರಾಯನಪಾಳ್ಯ,

 ಹಲಸೂರು, ಬೊಮ್ಮನಹಳ್ಳಿ, ಯಲಚೇನಹಳ್ಳಿ , ಮಹದೇವಪುರ , ಎಚ್‌ಎಎಲ್‌ ಏರ್‌ಪೋರ್ಟ್‌, ರಾಜರಾಜೇಶ್ವರಿ ನಗರ, ಲಕ್ಷ್ಮೀದೇವಿನಗರ, ಜ್ಞಾನಭಾರತಿ, ಲಗ್ಗೆರ

ವಿಶ್ವದ ಅತ್ಯುತ್ತಮವಾದ 10 ಮೊಬೈಲ್‌ ಕ್ಯಾಂಟೀನ್‌ ವಾಹನಗಳ ವಿನ್ಯಾಸವನ್ನು ಅಧ್ಯಯನ ನಡೆಸಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ವಿನ್ಯಾಸಗೊಳಿಸಲಾಗಿದ್ದು, ನಿರ್ಮಿತ ಕ್ಯಾಂಟೀನ್‌ನಲ್ಲಿರುವ ಎಲ್ಲ ಸೌಲಭ್ಯಗಳು ಮೊಬೈಲ್‌ ಕ್ಯಾಂಟೀನ್‌ನಲ್ಲಿಯೂ ಇರಲಿವೆ. ಜತೆಗೆ ವಾಹನ ಪರಿಸರ ಸ್ನೇಹಿಯಾಗಿದೆ. ಜತೆಗೆ ಟೇಬಲ್‌ಗ‌ಳು, ಬಳಸಿದ ನೀರು, ಕುಡಿಯುವ ನೀರಿಗಾಗಿ ಪ್ರತ್ಯೇಕ ಟ್ಯಾಂಕ್‌, ಪ್ಲೇಟ್‌ಗಳನ್ನು ಇರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
 ಮನೋಜ್‌ ರಾಜನ್‌, ವಿಶೇಷ ಆಯುಕ್ತ

ಪಾಲಿಕೆಯ 174 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳಿವೆ. 24 ಕಡೆಗಳಲ್ಲಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಸೇವೆ ನೀಡಲಿವೆ. ಪ್ರತಿ ಮೊಬೈಲ್‌ ಕ್ಯಾಂಟೀನ್‌ಗೆ 14 ಲಕ್ಷ ರೂ. ವೆಚ್ಚವಾಗಿದ್ದು, ಜ.26ರಂದು  ಮುಖ್ಯಮಂತ್ರಿಗಳು 16 ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ಅಂದು ರಾತ್ರಿಯಿಂದ ಆಹಾರ ವಿತರಣೆಯನ್ನು ಆರಂಭಿಸಲಿವೆ.
 ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

 ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.