ದಿನಪೂರ್ತಿ ಅಂಗಡಿಯ ಶೌಚಗೃಹದಲ್ಲಿ ಕಾದು ಕುಳಿತು ಪ್ರೇಯಸಿಗಾಗಿ ಮೊಬೈಲ್ ಕದ್ದ ಪ್ರಿಯಕರ
Team Udayavani, Jul 30, 2022, 12:58 PM IST
ಬೆಂಗಳೂರು: ಪ್ರೇಯಸಿಗಾಗಿ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೆಪಿ ನಗರದ ನಿವಾಸಿ ಅಬ್ದುಲ್ ಮುನಾಫ್ ಬಂಧಿತ. ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ 6 ಮೊಬೈಲ್ ಜಪ್ತಿ ಮಾಡಲಾಗಿದೆ.
ಜು.22ರಂದು ಸಂಜೆ ವೇಳೆ ಗ್ರಾಹಕರ ಸೋಗಿನಲ್ಲಿ ಕ್ರೋಮಾ ಮೊಬೈಲ್ ಸ್ಟೋರ್ಗೆ ಮುನಾಫ್ ಹೋಗಿದ್ದ. ಮೊಬೈಲ್ ಖರೀದಿಸುವುದಾಗಿ ಅಂಗಡಿ ಸಿಬ್ಬಂದಿ ಬಳಿ ಹೇಳಿ ಶೌಚಗೃಹಕ್ಕೆ ಹೋಗಿದ್ದ. ಹೆಚ್ಚಿನ ಜನ ಸಂದಣಿಯಿದ್ದ ಹಿನ್ನೆಲೆಯಲ್ಲಿ ಅಂಗಡಿ ಸಿಬ್ಬಂದಿ ಆತ ಶೌಚಗೃಹಕ್ಕೆ ಹೋಗಿರುವುದನ್ನು ಗಮನಿಸಿರಲಿಲ್ಲ.
ಇದನ್ನೂ ಓದಿ: ಒಂದು ವೇಳೆ ಮಹಾರಾಷ್ಟ್ರದಲ್ಲಿ ಗುಜರಾತಿಗಳು ಇಲ್ಲದಿದ್ರೆ…ಗವರ್ನರ್ ಕೋಶ್ಯಾರಿ ಹೇಳಿಕೆ ವಿವಾದ
ಅಂಗಡಿ ಬಾಗಿಲು ಹಾಕುವವರೆಗೂ ಶೌಚಗೃಹ ದೊಳಗೆ ಕುಳಿತಿದ್ದ. ಇದಾದ ಬಳಿಕ ಶೌಚಗೃಹದಿಂದ ಹೊರಬಂದ ಮುನಾಫ್, ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ತಾನು ತಂದಿದ್ದ ಬ್ಯಾಗ್ ನೊಳಗೆ ತುಂಬಿದ್ದ. ಮರುದಿನ ಮಾಲೀಕರು ಅಂಗಡಿ ತೆರೆದಾಗ, ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಜೆಪಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ತನ್ನ ಪ್ರೇಯಸಿಗಾಗಿ ಖರ್ಚು ಮಾಡಲು ನನ್ನ ಬಳಿ ಹಣ ಇರಲಿಲ್ಲ. ಹೀಗಾಗಿ ಮೊಬೈಲ್ಕಳ್ಳತನಕ್ಕೆ ಇಳಿದಿರುವುದಾಗಿ ಆರೋಪಿ ಹೇಳಿದ್ದಾನೆ. ಆತನ ಉತ್ತರ ಕೇಳಿ ಪೊಲೀಸರೇ ಒಂದು ಕ್ಷಣ ತಬ್ಬಿಬ್ಟಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ