ಖಾಸಗಿ ಬಸ್‌ ಮಾಲೀಕರಿಗೆ ಕ್ರಮದ ಎಚ್ಚರಿಕೆ


Team Udayavani, Mar 29, 2019, 11:49 AM IST

khasagi

ಬೆಂಗಳೂರು: ಮತದಾನದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಬೇಕಾಬಿಟ್ಟಿಯಾಗಿ ಪ್ರಯಾಣ ದರ ಹೆಚ್ಚಳ ಮಾಡಬಾರದು ಎಂದು ಖಾಸಗಿ ಬಸ್‌ಗಳ ಮಾಲಿಕರಿಗೆ ಸೂಚನೆ ನೀಡಿರುವ ಸಾರಿಗೆ ಇಲಾಖೆ ಆಯುಕ್ತ ವಿ.ಪಿ.ಇಕ್ಕೇರಿ, ಇಂತಹ ಪ್ರಕರಣಗಳು ಗಮನಕ್ಕೆ ಬಂದಲ್ಲಿ ದಂಡದೊಂದಿಗೆ ಪರವಾನಗಿ ಅಮಾನತು ಅಥವಾ ರದ್ದು ಗೊಳಿಸುವುದಾಗಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಮತದಾನ ದಿನದ ಆಸುಪಾಸು ಸಾಲು ರಜೆಗಳು ಬಂದಿವೆ. ಈ ವೇಳೆ ನಗರದಲ್ಲಿ ನೆಲೆಸಿರುವ ಅನೇಕರು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಇದರ ಲಾಭ ಪಡೆಯಲು ಖಾಸಗಿ ಬಸ್‌ ಮಾಲಿಕರು ಬೇಕಾಬಿಟ್ಟಿ ಪ್ರಯಾಣ ದರ ಹೆಚ್ಚಳ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಖಾಸಗಿ ಬಸ್‌ ಮಾಲಿಕರೊಂದಿಗೆ ಚರ್ಚಿಸಿ, ಸೂಚನೆ ನೀಡಲಾಗಿದೆ. ಆದಾಗ್ಯೂ ಮನಬಂದಂತೆ ಏರಿಕೆ ಮಾಡುವುದು ಕಂಡುಬಂದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಬ್ಬ ಅಥವಾ ವಿಶೇಷ ಸಂದರ್ಭಗಳಲ್ಲಿ ಕೆಎಸ್‌ಆರ್‌ಟಿಸಿಯು ಪ್ರಯಾಣ ದರವನ್ನು ಶೇ.20ರಷ್ಟು ಹೆಚ್ಚಿಸಿಕೊಳ್ಳಲು ನಿಯಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಖಾಸಗಿ ಬಸ್‌ಗಳಿಗೆ ಇಂತಹ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರಿ ಬಸ್‌ಗಳಂತೆ ದರ ಏರಿಕೆ ಮಿತಿ ಶೇ.20 ಅನ್ನು ಮೀರದಂತೆ ನಿಗದಿಪಡಿಸಲಿ. ಅದುಬಿಟ್ಟು, ಮೂರ್‍ನಾಲ್ಕು ಪಟ್ಟು ಹೆಚ್ಚಳ ಮಾಡುವುದರಿಂದ ಪ್ರಯಾಣಿಕರ ಮೇಲೆ ಹೊರೆ ಬೀಳಲಿದೆ ಎಂದರು.

ದರ ಏರಿಕೆ ಪ್ರಸ್ತಾವನೆ: ಕೆಎಸ್‌ಆರ್‌ಟಿಸಿ ಶೇ.18ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ಬೆನ್ನಲ್ಲೇ ಖಾಸಗಿ ಬಸ್‌ ಪ್ರಯಾಣ ದರವನ್ನೂ ಶೇ.18ರಷ್ಟು ಏರಿಕೆ ಮಾಡುವಂತೆ ಮಾಲಿಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಅದನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ.

ಚುನಾವಣೆ ನಂತರ ಈ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ವಿ.ಪಿ. ಇಕ್ಕೇರಿ ತಿಳಿಸಿದರು. 2014ರಿಂದ ಬಸ್‌ಗಳ ದರ ಪರಿಷ್ಕರಣೆ ಆಗಿಲ್ಲ. ಈ ಮಧ್ಯೆ ಡೀಸೆಲ್‌ ದರ ಸಾಕಷ್ಟು ಏರಿಕೆ ಆಗಿದೆ. ವಾರದಲ್ಲಿ ಎರಡು-ಮೂರು ದಿನ ಬಸ್‌ಗಳು ಕಾರ್ಯಾಚರಣೆ ಮಾಡುವುದೇ ಇಲ್ಲ.

ಹೀಗಾಗಿ ನಿರ್ವಹಣಾ ವೆಚ್ಚವೂ ಸಂಗ್ರಹವಾಗುತ್ತಿಲ್ಲ. ದರ ಪರಿಷ್ಕರಣೆ ಮಾಡಬೇಕು ಎಂದು ಖಾಸಗಿ ಬಸ್‌ಗಳ ಮಾಲಿಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು. ಇದೆಲ್ಲವೂ ಮಜಲು ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದರು.

ಖಾಸಗಿ ಬಸ್‌ಗಳಿಗೆ ಯಾವುದೇ ಪ್ರಯಾಣ ದರವೇ ನಿಗದಿ ಆಗಿಲ್ಲ. ಹೀಗಿರುವಾಗ, ಯಾವ ಆಧಾರದಲ್ಲಿ ದಂಡ ಅಥವಾ ಶಿಸ್ತು ಕ್ರಮ ಕೈಗೊಳ್ಳುತ್ತೀರಿ ಎಂದು ಕೇಳಿದಾಗ, “ದರ ನಿಗದಿ ಆಗಿಲ್ಲ ಎನ್ನುವುದು ನಿಜ.

ಆದರೆ, ಸಾಮಾನ್ಯ ದಿನಗಳಲ್ಲಿ ಅವರು ವಿಧಿಸುವ ಪ್ರಯಾಣ ದರ ಹಾಗೂ ವಿಶೇಷ ಸಂದರ್ಭಗಳಲ್ಲಿ ವಿಧಿಸುವ ದರ ಮತ್ತು ಸರ್ಕಾರಿ ಬಸ್‌ಗಳ ದರಗಳಿಗೆ ತಾಳೆ ಹಾಕಲಾಗುವುದು. ತುಂಬಾ ವ್ಯತ್ಯಾಸ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು.

1.35 ಕೋಟಿ ರೂ. ದಂಡ ವಸೂಲಿ: ಬೇಕಾಬಿಟ್ಟಿ ಪ್ರಯಾಣದರ ಹೆಚ್ಚಳ ಮಾಡಿದವರ ವಿರುದ್ಧ 2018ರ ನವೆಂಬರ್‌ನಿಂದ 2019ರ ಫೆಬ್ರವರಿ ನಡುವಿನ ಅವಧಿಯಲ್ಲಿ ರಾಜ್ಯ ಸಾರಿಗೆ ಪ್ರಾಧಿಕಾರದಿಂದ ಕಾರ್ಯಾಚರಣೆ ನಡೆಸಿ, 1.35 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆ 842 ಪ್ರಕರಣಗಳ ತನಿಖೆ ನಡೆಸಿದ್ದು, 584 ರಹದಾರಿ ಅಮಾನತು ಮಾಡಲಾಗಿದೆ. 59 ರಹದಾರಿಗಳನ್ನು ರದ್ದು ಮಾಡಲಾಗಿದೆ ಎಂದು ವಿ.ಪಿ.ಇಕ್ಕೇರಿ ತಿಳಿಸಿದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.