ಕಸಾಪದಿಂದ ಆಧುನಿಕ ದಲಿತ ಸಾಹಿತ್ಯ ಸಂಪುಟ


Team Udayavani, Nov 9, 2018, 11:47 AM IST

kasapa.jpg

ಬೆಂಗಳೂರು: ಭಾರತದ ಸ್ವಾತಂತ್ರ್ಯ ನಂತರ ದಲಿತ ಸಾಹಿತ್ಯದಲ್ಲಾದ ಬದಲಾವಣೆಯನ್ನು “ಸಂಪುಟ’ರೂಪದಲ್ಲಿ ಕಟ್ಟಿಕೊಡಲು ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ.

ಈಗಾಗಲೇ ಕನ್ನಡ ಸಾಹಿತ್ಯ ದಿಗ್ಗಜರ ಕವಿತೆಗಳನ್ನು ನೇಪಾಳಿ ಭಾಷೆಗೆ ಹಾಗೂ ಅಲ್ಲಿಯ ಕವಿಗಳ ಕವಿತೆಗಳನ್ನು ಕನ್ನಡಕ್ಕೆ ತರುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿರುವ ಕನ್ನಡ ಸಾಹಿತ್ಯ ಪರಿಷತ್ತು, ಇದೀಗ ದಲಿತ ಸಾಹಿತ್ಯ ಕುರಿತಾದ ಸಮಗ್ರ ಸಂಪುಟವನ್ನು  “ಆಧುನಿಕ ದಲಿತ ಸಾಹಿತ್ಯ ಸಂಪುಟಗಳು’ ಹೆಸರಿನಲ್ಲಿ ದಾಖಲಿಸಲು ತೀರ್ಮಾನಿಸಿದೆ.

ದಲಿತ ಸಾಹಿತಿಗಳ ಬರಹಗಳ ಮೇಲೆ ಸಮಾಜವಾದಿ ಚಿಂತಕ ರಾಮ ಮನೋಹರ ಲೋಹಿಯಾ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರಭಾವ. ಕಥೆ, ಕವಿತೆ, ನಾಟಕ, ಪ್ರಬಂಧ, ಆತ್ಮಕಥೆ, ವಿಮರ್ಶೆ ಮತ್ತು ಸಂಶೋಧನೆಯ ಪ್ರಕಾರಗಳಲ್ಲಿ ದಲಿತ ಲೇಖಕರು ಹೇಗೆ ತೊಡಗಿಸಿಕೊಂಡಿದ್ದಾರೆ.

ಅವರ ಆಕಾಂಕ್ಷೆಗಳು ಏನಿದ್ದವು.ಅಕ್ಷರ ಕಲಿತ ಮೇಲೆ ಅವರಲ್ಲಿ ಉಂಟಾದ ಭಾವನೆ ಹೇಗಿತ್ತು. ಪ್ರಸ್ತುತ ಅವರು ಯಾವ ರೀತಿಯ ಬರವಣಿಗೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬುವುದರ ಕುರಿತ ಸಮಗ್ರ ನೋಟವನ್ನು ಸಂಪುಟ ಕಟ್ಟಿಕೊಡಲಿದೆ ಎಂದು ಹೇಳಲಾಗಿದೆ.

ಸಮಗ್ರ ಸಂಪುಟ ಪ್ರಕಟ: ಸಂಸ್ಕೃತ ಚಿಂತಕ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ಅವರ ಮಾರ್ಗ ದರ್ಶನದಲ್ಲಿ ಸಮಗ್ರ ಸಂಪುಟ ಪ್ರಕಟವಾಗಲಿದ್ದು “ಕಾವ್ಯ ಸಂಪಾದನೆ’ ಜವಾಬ್ದಾರಿ ಮೂಡ್ನಾಕೂಡು ಚಿನ್ನಸ್ವಾಮಿ,  “ಜಾನಪದ’ಕ್ಕೆ ಸಂಬಂಧಿಸಿದ ವಿಷಯ ಸಂಗ್ರಹಣೆ ಹೊಣೆ ಕಲಬುರ್ಗಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಚ್‌.ಟಿ.ಕೋಟೆ,

“ವೈಚಾರಿಕೆ ಬರಹ’ಕ್ಕೆ ಸಂಬಂಧಿಸಿದ ವಿಷಯ ಸಂಗ್ರಹಣೆ ಜವಾಬ್ದಾರಿ ಡಾ.ಬಿ.ಎಂ.ಪುಟ್ಟಯ್ಯಗೆ ವಹಿಸಲಾಗಿದೆ. “ಆತ್ಮಕತನಗಳ’ ಕುರಿತು ಅರ್ಜುನ್‌ ಗೊಳಸಂಗಿ ಹಾಗೂ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ “ದಲಿತ ಕನ್ನಡ ಸಂಶೋಧನೆ’ಕುರಿತು ಸಂಪುಟದಲ್ಲಿ ದಾಖಲಿಸಲಿದ್ದು ಒಟ್ಟು 8 ಸಂಪುಟಗಳಲ್ಲಿ ಇದು ಮೂಡಿಬರಲಿದೆ.

ದಕ್ಷಿಣ ಭಾರತದಲ್ಲಿ ಹೊಸ ಪ್ರಯತ್ನ: ಈ ಕುರಿತಂತೆ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ನೇತೃತ್ವದಲ್ಲಿ ಸದ್ಯದಲ್ಲೇ ಸಭೆ ನಡೆಯಲಿದ್ದು ಅಲ್ಲಿ ವಿಷಯ ಜೋಡಣೆ ಮತ್ತು ಸಮಗ್ರ ಸಂಪುಟದ ರೂಪರೇಷಗಳ ಕುರಿತು ಚರ್ಚೆ ನಡೆಯಲಿದೆ. ಡಿಸೆಂಬರ್‌ನಲ್ಲಿ ಮುದ್ರಣ ಕಾರ್ಯ ಆರಂಭವಾಗಲಿದೆ.

ಈ ಬಗ್ಗೆ”ಉದಯವಾಣಿ’ಯೊಂದಿಗೆ  ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ಮಾತನಾಡಿ, ದಲಿತ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಚರಿತ್ರೆ ದಾಖಲಿಸಲು ಇದು ಮೂಲ ಆಕಾರ ಗ್ರಂಥವಾಗಲಿದೆ. ದಲಿತ ಸಾಹಿತ್ಯದ ಬದಲಾವಣೆ ಕುರಿತಂತೆ ದಕ್ಷಿಣ ಭಾರತದಲ್ಲಿ ಇಂತಹ ಯಾವುದೇ ಪ್ರಯತ್ನ ನಡೆದಿಲ್ಲ.ಆ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪುಟ ಹೊರತರುವ ಕುರಿತು ಸಲಹೆ ನೀಡಿದೆ.  

ದಲಿತ ಸಾಹಿತ್ಯದ ಮೇಲೆ ಬಂಡಾಯ ಮತ್ತು ನವ್ಯ ಸಾಹಿತ್ಯದ ಪ್ರಭಾವವೂ ಇರುವುದರಿಂದ ಅನೇಕ ರೀತಿಯ ಬದಲಾವಣೆಗಳಿಗೂ ಸಾಕ್ಷಿಯಾಗಿದೆ. ಹೀಗಾಗಿ, ಸಾಹಿತ್ಯ ಸಂಪುಟ ತರುತ್ತಿರುವುದು ಸೂಕ್ತವಾಗಿದೆ  ಎಂದು ಹೇಳಿದರು.

25ಲಕ್ಷ ರೂ. ಯೋಜನೆ: ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಈ ಸಮಗ್ರ ಸಂಪುಟ ಹೊರತರಲು ಮುಂದಾಗಿದೆ.ದಲಿತ ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನಗಳು, ಕೃತಿಗಳು ಒಂದು ಕಡೆ ಸಿಗಲಿ ಎಂಬ ಆಶಯ ಕೂಡ ಇದರಲ್ಲಿದೆ.ಈ ಯೋಜನೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಸುಮಾರು 25 ಲಕ್ಷ ರೂ.ಗಳನ್ನ ಮೂಡುಪಾಗಿಟ್ಟಿದೆ ಎಂದು ಕಸಾಪದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೇ ಮೊದಲ ಬಾರಿಗೆ ಕಸಾಪ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ದಲಿತ ಸಾಹಿತ್ಯಕ್ಕೆ ಸಂಬಂಧಿಸಿದ ಸಮಗ್ರ ಸಂಪುಟ ಹೊರತರಲಾಗುತ್ತಿದ್ದು,ಮಾರ್ಚ್‌ನಲ್ಲಿ ಬಿಡುಗಡೆಗೊಳ್ಳಲಿದೆ.
-ಡಾ.ಮನುಬಳಿಗಾರ್‌, ಕಸಾಪ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.