ರಾಜಧಾನಿಯಲ್ಲಿ ಮೋದಿ ಭರ್ಜರಿ ಪ್ರಚಾರ


Team Udayavani, Apr 14, 2019, 3:32 AM IST

raja-modi-pra

ಬೆಂಗಳೂರು: ಲೋಕಸಭಾ ಚುನಾವಣೆಯ ಬಿರುಸಿನ ಪ್ರಚಾರದಲ್ಲಿದ್ದ ರಾಜಾಧಾನಿ ವ್ಯಾಪ್ತಿಯ ಬಿಜೆಪಿ ಅಭ್ಯರ್ಥಿಗಳಿಗೆ ಶನಿವಾರ ಮೋದಿ ಪ್ರಚಾರದ ಟಾನಿಕ್‌ ದೊರೆಯಿತು. ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಮೋದಿ ಮತ್ತೂಮ್ಮೆ ಬೃಹತ್‌ ರ್ಯಾಲಿ’ಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿದ್ದರು.

ರಾತ್ರಿ 7.40ರ ಸುಮಾರಿಗೆ ಪ್ರಧಾನಿ ಮೋದಿಯವರು ವೇದಿಕೆ ಪ್ರವೇಶ ಮಾಡಿದರು. ವೇದಿಕೆ ಮೇಲೇರುತ್ತಿದ್ದಂತೆ ಬೆಂಗಳೂರು ಉತ್ತರದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ, ದಕ್ಷಿಣದ ತೇಜಸ್ವಿ ಸೂರ್ಯ, ಕೇಂದ್ರದ ಪಿ.ಸಿ.ಮೋಹನ್‌ ಹಾಗೂ ಗ್ರಾಮಾಂತರ ಅಭ್ಯರ್ಥಿ ಅಶ್ವಥ್‌ನಾರಾಯಣಗೌಡರನ್ನು ಮಾತನಾಡಿದರು. ಈ ವೇಳೆ ತೇಜಸ್ವಿ ಸೂರ್ಯ ಅವರು ಮೋದಿಯವರ ಕಾಲು ಮುಟ್ಟಿ ನಮಸ್ಕರಿಸಿದ್ದು ವಿಶೇಷವಾಗಿತ್ತು. ವೇದಿಕೆಯಿಂದ ತೆರಳುವ ಮುನ್ನವೂ ನಾಲ್ಕೂ ಅಭ್ಯರ್ಥಿಗಳ ಜತೆ ಕೈ ಎತ್ತಿ ವಿಜಯದ ಸಂಕೇತ ಪ್ರದರ್ಶಿಸಿದರು.

ತೇಜಸ್ವಿನಿ ಅನಂತಕುಮಾರ್‌ ಜತೆ ಮಾತುಕತೆ: ಮೋದಿಯವರು ಆಗಮಿಸುತ್ತಿದ್ದಂತೆ ವೇದಿಕೆಯ ಎರಡನೇ ಸಾಲಿನ ಕುರ್ಚಿಯಲ್ಲಿ ಕುಳಿತದ್ದ ತೇಜಸ್ವಿನಿ ಅನಂತಕುಮಾರ್‌ ಅವರು ನೇರವಾಗಿ ಮೋದಿ ಬಳಿಗೆ ಬಂದು ನಮಸ್ಕಾರ ಮಾಡಿದರು. ಜನರತ್ತ ಕೈಬೀಸುವ ಭರದಲ್ಲಿದ್ದ ಮೋದಿಯವರು ಮೊದಲಿಗೆ ಸರಿಯಾಗಿ ಅವರನ್ನು ಗಮನಿಸಿರಲಿಲ್ಲ. ಜನರತ್ತ ಕೈಬೀಸಿ ಹಿಂದೆ ಬರುತ್ತಿದ್ದಂತೆ ಅಲ್ಲೇ ಪಕ್ಷದಲ್ಲಿ ನಿಂತಿದ್ದ ತೇಜಸ್ವಿನಿ ಅನಂತಕುಮಾರ್‌ ಅವರ ಜತೆಗೆ ಕೆಲಕಾಲ ಮಾತುಕತೆ ನಡೆಸಿ ಉಭಯಕುಶಲೋಪರಿ ವಿಚಾರಿಸಿದರು.

ಎಸ್‌ಎಂಕೆ ಜತೆ ಚರ್ಚೆ: ಮೋದಿಯವರು ವೇದಿಕೆಯಲ್ಲಿ ಕುಳಿತಿದ್ದಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭಾಷಣ ಮಾಡುತ್ತಿದ್ದರು. ಈ ವೇಳೆ ಮೋದಿಯವರು ತಮ್ಮ ಪಕ್ಷದಲ್ಲೇ ಇದ್ದ ಮಾಜಿ ಮುಖ್ಯಮಂತ್ರಿ ಎಸ್‌. ಎಂ.ಕೃಷ್ಣ ಅವರ ಜತೆಗೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದರು. ಅಲ್ಲದೇ, ವೇದಿಕೆ ಪ್ರವೇಶಿಸಿದಾಗ ಮತ್ತು ವೇದಿಕೆಯಿಂದ ನಿರ್ಗಮಿವಾಗಲೂ ಎಸ್‌.ಎಂ.ಕೃಷ್ಣ ಅವರಿಗೆ ವಿಶೇಷವಾಗಿ ನಮಸ್ಕರಿಸಿದರು. ವೇದಿಕೆಯ ಮೇಲೆ ಬಿಜೆಪಿಯ ಹಲವು ನಾಯಕರಿದ್ದರೂ, ಮೋದಿಯವರು ವಿಶೇಷವಾಗಿ ಎಸ್‌.ಎಂ.ಕೃಷ್ಣ ಅವರ ಜತೆಗೆ ಚರ್ಚೆ ಮಾಡುತ್ತಿದ್ದದ್ದು ಹೆಚ್ಚು ಆರ್ಕಷಕವಾಗಿತ್ತು.

ಅನಂತ ಕುಮಾರ್‌, ವಿಜಯ ಕುಮಾರ್‌ ಸ್ಮರಣೆ: ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್‌ ಹಾಗೂ ಜಯನಗರ ಶಾಸಕರಾಗಿದ್ದ ವಿಜಯ್‌ ಕುಮಾರ್‌ ಅವರನ್ನು ಪ್ರಧಾನಿ ಮೋದಿಯವರು ತಮ್ಮ ಭಾಣಷದ ಆರಂಭದಲ್ಲೇ ನೆನಪಿಸಿಕೊಂಡು ಶ್ರದ್ಧಾಂಜಲಿ ಸಲ್ಲಿಸಿದರು. ಕೇಂದ್ರ ಸರ್ಕಾರದ ಸಾಧನೆಯನ್ನು ವಿವರಿಸುವ ಸಂದರ್ಭದಲ್ಲಿ ಜನರಿಕ್‌ ಔಷಧ ಹಾಗೂ ಮಂಡಿಚಿಪ್ಪು ಕೈಗೆಟುಕುವ ದರದಲ್ಲಿ ನೀಡಲು ಸಾಧ್ಯವಾಗಿದ್ದು ಅನಂತಕುಮಾರ್‌ ಅವರ ಪರಿಶ್ರಮದಿಂದ ಎಂದು ಮೋದಿಯವರು ಸ್ಮರಿಸಿದರು.

ಬಿಲ್ಲುಬಾಣದ ಅರ್ಪಣೆ: ಶನಿವಾರ ದೇಶಾದ್ಯಂತ ರಾಮನವಮಿ ಆಚರಣೆ ಮಾಡುತ್ತಿರುವುದರಿಂದ ಇದರ ನೆನಪಿಗಾಗಿ ರಾಜ್ಯ ಬಿಜೆಪಿಯಿಂದ ಮೋದಿಯವರಿಗೆ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಬಿಲ್ಲುಬಾಣ ಅರ್ಪಿಸಿದರು.ಖುಷಿಯಿಂದ ಸ್ವೀಕರಿಸಿದ ಮೋದಿ, ಅದನ್ನು ಜನರತ್ತ ತೋರಿಸಿದರು.

ಜನ ಸಾಗರ: ಸಂಜೆ 6.45ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಒಂದು ಗಂಟೆ ತಡವಾಗಿ ಶುರವಾಗಿತ್ತು. ಸಂಜೆ 5.30ರ ಸುಮಾರಿಗೆ ಮೈದಾನ ಬಹುತೇಕ ಭರ್ತಿಯಾಗಿತ್ತು. ವಿಐಪಿ, ವಿವಿಐಪಿ ಹಾಗೂ ಸಮಾನ್ಯ ಕಾರ್ಯಕರ್ತರಿಗಾಗಿ ಹಾಕಿದ್ದ ಎಲ್ಲ ಕುರ್ಚಿಗಳು ಭರ್ತಿಯಾಗಿದ್ದು, ವೇದಿಕೆಯ ಮೂರು ಸುತ್ತುಗಳಲ್ಲೂ ಕಾರ್ಯಕರ್ತರು ನಿಂತಿದ್ದರು. ಮೋದಿ ಭಾಷಣ ವೀಕ್ಷಿಸಲು 11 ಬೃಹದಾಕಾರದ ಎಲ್‌ಇಡಿ ಸ್ಕ್ರೀನ್‌ ಕೂಡ ಅಳವಡಿಸಲಾಗಿತ್ತು. ಹಾಗೆಯೇ ಭದ್ರತೆಯ ದೃಷ್ಟಿಯಿಂದ ಸಿಸಿಟಿವಿ ಕಣ್ಗಾವಲು ಇತ್ತು. ಎಲ್ಲೆಲ್ಲೂ ಬಿಜೆಪಿ ಬಾವುಟ ರಾರಾಜಿಸುತ್ತಿತ್ತು.

ಬಿಜೆಪಿ ರ್ಯಾಲಿಯಲ್ಲಿ ವೈದ್ಯರು, ಎಂಜಿನಿಯರ್‌ಗಳು, ಆಟೋ ಚಾಲಕರು, ಖಾಸಗಿ ಉದ್ಯೋಗಿಗಳು ಸೇರಿ ಎಲ್ಲ ವೃತ್ತಿಯವರೂ ಸ್ವ ಇಚ್ಛೆಯಿಂದ ಪಾಲ್ಗೊಂಡಿದ್ದಾರೆ. ಕಾಂಗ್ರೆಸ್‌ನವರು ಇಂತಹ ಒಂದು ರ್ಯಾಲಿ ಮಾಡಿ ತೋರಿಸಲಿ.
-ತೇಜಸ್ವಿ ಸೂರ್ಯ

ದೇಶದ ಸೈನಿಕರಿಗೆ ಒನ್‌ರ್‍ಯಾಂಕ್‌-ಒನ್‌ಪೆನ್ಷನ್‌ ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ನರೇಂದ್ರ ಮೋದಿ ಸರ್ಕಾರ ಇದನ್ನು ಮಾಡಿ ತೋರಿಸಿತು. ಕಾಂಗ್ರೆಸ್‌ಗೆ ಒಆರ್‌ಒಪಿ ಅಂದರೆ-ಒನ್‌ ರಾಹುಲ್‌ ಒನ್‌ ಪ್ರಿಯಾಂಕ ಎಂದಷ್ಟೇ ಗೊತ್ತು.
-ಡಿ.ವಿ.ಸದಾನಂದಗೌಡ

70 ವರ್ಷದಲ್ಲಿ ಆಗದ ಕೆಲಸವನ್ನು 5ವರ್ಷದಲ್ಲಿ ಮೋದಿ ಮಾಡಿ¨ªಾರೆ. ಮೈತ್ರಿ ಸರ್ಕಾರದಲ್ಲಿ ಭ್ರಷ್ಟಚಾರ ತುಂಬಿ ತುಳುಕುತ್ತಿದೆ. ರಾಜ್ಯ ಸರ್ಕಾರ ಬೆಂಗಳೂರನ್ನು ಮರೆತಿದೆ. ವೈಟ್‌ ಟಾಪಿಂಗ್‌ ಹೆಸರಿನಲ್ಲಿ ಜನರ ದುಡ್ಡು ಲೂಟಿ ಹೊಡೆಯುತ್ತಿದೆ.
-ಪಿ.ಸಿ.ಮೋಹನ್‌

ಡಿ.ಕೆ.ಸುರೇಶ್‌ ಹಾಗೂ ಡಿ.ಕೆ.ಶಿವಕುಮಾರ್‌, ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬಂಡೆ ಗುಡ್ಡ ಕಂಡಲ್ಲಿ ಕ್ರಷರ್‌ಮಾಡುತ್ತಾರೆ. ಕೇಂದ್ರದ ಯಾವುದೇ ಯೋಜನೆಗಳನ್ನು ಅನುಷ್ಠಾನ ಮಾಡದಂತೆ ನೋಡಿಕೊಳ್ಳುತ್ತಿದ್ದಾರೆ.
-ಅಶ್ವತ್ಥನಾರಾಯಣ

ಮಂಡ್ಯದಲ್ಲಿ ಈಗಾಗಲೇ ಕಾಂಗ್ರೆಸ್‌ ನಾಯಕರು ಮೈತ್ರಿ ಅಭ್ಯರ್ಥಿಗೆ ಕೈಕೊಟ್ಟಿ¨ªಾರೆ. ಜನರೂ ಕೈ ಕೊಡುತ್ತಾರೆ. ಮೋದಿ ಪ್ರಧಾನಿಯಾದರೆ ಸನ್ಯಾಸ ಸ್ವೀಕರಿಸುವುದಾಗಿ ಎಚ್‌.ಡಿ.ರೇವಣ್ಣ ಹೇಳಿದ್ದಾರೆ. ರೇವಣ್ಣ ಯಾವ ಮಠ ಸೇರುತ್ತಾರೆ?
-ಆರ್‌.ಅಶೋಕ್‌

ಚುನಾವಣೆಗೆ ನಾಲ್ಕು ದಿನ ಉಳಿದಿದ್ದು, ನಾವೆಲ್ಲರೂ ಸಂಘಟಿತವಾಗಿ ವ್ಯಾಪಕ ಪ್ರಚಾರನಡೆಸಬೇಕಿದೆ. ಮೋದಿಯವರ ಆಡಳಿತದಲ್ಲಿ ದೇಶ ಸರ್ವಾಂಗೀಣ ಅಭಿವೃದ್ಧಿ ಕಂಡಿದೆ. ವಿರೋಧ ಪಕ್ಷಗಳ ಘಟಬಂಧನ್‌ ನೆಲಕಚ್ಚಿದೆ.
-ವಿ.ಸೋಮಣ್ಣ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.