ಸಾಗಿಬಂದ ಹಾದಿ ಮರೆಯಬಾರದು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
Team Udayavani, Mar 8, 2020, 12:26 PM IST
ಬೆಂಗಳೂರು: ಮನುಷ್ಯ ಎಷ್ಟೇ ಪ್ರಗತಿ ಸಾಧಿಸಿದರೂ ತಾನು ಬೆಳೆದುಬಂದ ಹಾದಿಯನ್ನು ಮರೆಯಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು ಹೊರವಲಯದ ಜನಸೇವಾ ವಿದ್ಯಾಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಂಘ ಇಷ್ಟೊಂದು ಬದಲಾಗಿದೆ. ಆದರೆ, ಸ್ವಯಂಸೇವಕರ ನಿಷ್ಠೆ, ಪ್ರಮಾಣಿಕತೆ, ಶ್ರದ್ಧೆ ಸ್ವಲ್ಪವೂ ಬದಲಾಗಿಲ್ಲ. ಹಿಂದೆ ಹೇಗೆ ಕೆಲಸ ಮಾಡುತ್ತಿದ್ದರೂ ಈಗಲೂ ಹಾಗೆ ಕೆಲಸ ಮಾಡುತ್ತಾರೆ ಎಂದರು.
ಜಗತ್ತಿನಲ್ಲಿ ನಾವು ಮುಂದೆ ಸಾಗಬೇಕಾದರೆ ಸಾಧನೆ ಬೇಕು. ಲೋಕಕಲ್ಯಾಣಕ್ಕಾಗಿ ಸುವಿಧ ಇರಬೇಕು. ಸಾಧನೆ ಮತ್ತು ಸುವಿಧದಿಂದ ಜಗತ್ತು ಚೆನ್ನಾಗಿರುತ್ತದೆ. ಶಿಕ್ಷಣವು ಸಂಸ್ಕಾರದ ಭಾಗವಾಗಿರಬೇಕು ಮತ್ತು ಕಾರ್ಯಪರತೆಯು ಉತ್ಕೃಷ್ಟ ರೂಪದಲ್ಲಿ ಮಾಡಬೇಕು ಎಂದು ಸಲಹೆ ನೀಡಿದರು.
ಮುದ್ದೇನ ಹಳ್ಳಿ ಸತ್ಯಸಾಯಿ ಗ್ರಾಮದ ಮಧುಸೂಧನ್ ಸಾಯಿ ಜೀ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಸಚಿವರಾದ ಆರ್ ಅಶೋಕ್, ವಿ ಸೋಮಣ್ಣ, ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ, ಆರೆಸ್ಸೆಸ್ ಪ್ರಮುಖರಾದ ಕಲಡ್ಕ ಪ್ರಭಾಕರ್ ಭಟ್ ಮತ್ತು ಮುಕುಂದ್ ಮೊದಲಾದವವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?