Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ


Team Udayavani, Apr 14, 2024, 10:38 AM IST

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಏರುತ್ತಿರುವಂತೆಯೇ ಕುರುಡು ಕಾಂಚಾಣದ ಕುಣಿತ ಜೋರಾಗಿದೆ. ಶನಿವಾರ ಬೆಂಗಳೂರಿನ ಜಯನಗರ ನಾಲ್ಕನೇ ಬ್ಲಾಕ್‌ನಲ್ಲಿ ಚುನಾವಣಾಧಿಕಾರಿಗಳು 1.35 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಎರಡು ಕಾರು ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ. ವಾಹನಗಳ ಮಾಲೀಕರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಜಯನಗರದ ಗಣಪತಿ ದೇವಾಲಯದ ಬಳಿ ಖಚಿತ ಮಾಹಿ ತಿಯ ಮೇರೆಗೆ ನಗದು ಸಾಗಿಸುತ್ತಿದ್ದ ಎರಡು ಕಾರುಗಳನ್ನು ಚುನಾವಣಾ ಸಿಬ್ಬಂದಿ ತಪಾಸಣೆ ನಡೆಸಿದರು. ಕಾರು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ.

1.35 ಕೋಟಿ ರೂ. ನಗದು ಸಿಕ್ಕಿದ್ದು ಆದಾಯ ತೆರಿಗೆ ಇಲಾಖೆಯ ವಶಕ್ಕೆ ನೀಡಲಾಗಿದೆ. ಅನುಮಾನ ಬಾರದಿರಲಿ ಎಂದು ಹಣ ವನ್ನು ಗೋಣಿಚೀಲದಲ್ಲಿ ತುಂಬಲಾಗಿತ್ತು. ಅಧಿಕಾರಿಗಳು ತಪಾಸಣೆಗೆ ಮುಂದಾದಾಗ ಮಾವಿನ ಹಣ್ಣಿನ ಬ್ಯಾಗ್‌ ಎಂದು ನೆಪ ಹೇಳಿ ಕಾರನ್ನು ಲಾಕ್‌ ಮಾಡಲಾಗಿದೆ.

ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್‌ ಒಡೆದು ಪರಿಶೀಲಿಸಿದಾಗ ನಗದು ಪತ್ತೆಯಾಗಿದೆ. ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದವರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಘಟನೆ ಬಗ್ಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ ಮೌನೀಶ್‌ ಮುದ್ಗಿಲ್‌, ವಾಹನದಲ್ಲಿ ಹಣ ಇರುವ ಶಂಕೆ ವ್ಯಕ್ತಪಡಿಸಿ ಶನಿವಾರ ಬೆಳಗ್ಗೆ ನಮಗೊಂದು ಅಪರಿಚಿತ ಕರೆ ಬಂದಿತ್ತು. ಕರೆ ಬಂದ ಮೂರು ನಿಮಿಷಕ್ಕೆ ನಮ್ಮ ಅಧಿಕಾರಿ ವಿನೋತ್‌ ಪ್ರಿಯಾ ಅವರು ಸ್ಥಳಕ್ಕೆ ಭೇಟಿ ನೀಡಿದರು. ಅಧಿಕಾರಿಗಳು ಬಂದಾಗ ಸ್ಕೂಟರ್‌ನಿಂದ ಫಾರ್ಚೂನರ್‌ ಕಾರಿಗೆ ಹಣ ವರ್ಗಾಯಿಸುತ್ತಿದ್ದರು. ಫಾರ್ಚೂನರ್‌ನಲ್ಲಿ ಒಟ್ಟು ಐವರು ಇದ್ದರು.

ಈ ಬಗ್ಗೆ ಚುನಾವಣಾ ಮಹಿಳಾ ಅಧಿಕಾರಿ ಪ್ರಶ್ನಿಸಿದ್ದರು. ಒಬ್ಬರೇ ಇದ್ದಿದ್ದರಿಂದ ತಕ್ಷಣ ದ್ವಿಚಕ್ರ ವಾಹನದಲ್ಲಿದ್ದ ಒಂದು ಬ್ಯಾಗ್‌ ಜಪ್ತಿ ಮಾಡಿದ್ದರು. ಸ್ಥಳದಿಂದ ಪರಾರಿ ಆಗಿರುವ ಫಾರ್ಚೂನರ್‌ ಕಾರಿನ ನಂಬರ್‌ ನೋಟ್‌ ಮಾಡಲಾಗಿದ್ದು ಮುಂದಿನ ಕಾನೂನು ಕ್ರಮವನ್ನ ಪೊಲೀಸರು ತೆಗೆದುಕೊಳ್ಳಲಿದ್ದಾರೆ ಎಂದರು.

ಕಾರಿನ ಒಳಗಡೆ ಇದ್ದ ದಾಖಲಾತಿಗಳನ್ನ ಚುನಾವಣಾಧಿಕಾರ ಗಳು ವಶಕ್ಕೆ ಪಡೆದಿದ್ದಾರೆ. ಕಾರಿನ ಒಳಗಡೆ ಇದ್ದ ಒಂದು ಮೊಬೈಲ್‌ ಮತ್ತು ದಾಖಲಾತಿಗಳು ಚುನಾ ವಣಾಧಿಕಾರಿಗಳಿಗೆ ಲಭ್ಯವಾಗಿದ್ದು, ಸೋಮಶೇಖರ್‌ ಗಂಗಾಧರಯ್ಯ ಎಂಬುವರ ಹೆಸರಲ್ಲಿ ಕೆಲವು ದಾಖಲೆಗಳು ಪತ್ತೆ ಯಾಗಿವೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.