ಉಪನಗರ ರೈಲಿಗೆ ಹೆಚ್ಚು ಹೂಡಿಕೆ


Team Udayavani, Jul 6, 2019, 3:10 AM IST

upanagara

ಬೆಂಗಳೂರು: “ಪ್ರಾದೇಶಿಕ ಸಾರಿಗೆ ಸಂಪರ್ಕ ಕಲ್ಪಿಸುವಲ್ಲಿ ಉಪನಗರ ರೈಲು ಸೇವೆ ಬಹುಮುಖ್ಯ ಪಾತ್ರ ವಹಿಸುತ್ತಿದ್ದು, ಭಾರತೀಯ ರೈಲ್ವೆಯು ಬರುವ ದಿನಗಳಲ್ಲಿ ಉಪನಗರ ರೈಲು ವ್ಯವಸ್ಥೆಗೆ ಆದ್ಯತೆ ಮೇರೆಗೆ ಇನ್ನಷ್ಟು ಬಂಡವಾಳ ಹೂಡಿಕೆ ಮಾಡಲಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಈ ಹೇಳಿಕೆಯಿಂದ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ಮತ್ತಷ್ಟು ಉತ್ತೇಜನ ಸಿಕ್ಕಂತಾಗಿದೆ. ಈ ಮೊದಲು ಉದ್ದೇಶಿತ ರೈಲು ಯೋಜನೆಗೆ ಬಂಡವಾಳ ಹೂಡಿಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಚೌಕಾಸಿ ನಡೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚೌಕಾಸಿಯಿಂದಲೇ ಯೋಜನೆ ಅನುಷ್ಠಾನ ಕೂಡ ವಿಳಂಬವಾಗಿದೆ. ಆದರೆ, ಈಗ ಕೇಂದ್ರ ಹಣಕಾಸು ಸಚಿವರೇ ಈ “ಕ್ಷಿಪ್ರ ಪ್ರಾದೇಶಿಕ ಸಾರಿಗೆ ವ್ಯವಸ್ಥೆ’ (ಆರ್‌ಆರ್‌ಟಿಎಸ್‌)ಗೆ ಹೆಚ್ಚು-ಹೆಚ್ಚು ಹೂಡಿಕೆ ಮಾಡುವುದಾಗಿ ಹೇಳಿರುವುದು ಮತ್ತಷ್ಟು ಉತ್ತೇಜನ ಸಿಕ್ಕಂತಾಗಿದೆ.

“ವಿಶೇಷ ಉದ್ದೇಶಿತ ವಾಹನ’ (ಎಸ್‌ಪಿವಿ)ದ ಮೂಲಕ ಉಪನಗರ ರೈಲು ವ್ಯವಸ್ಥೆಗೆ ಭಾರತೀಯ ರೈಲ್ವೆ ವತಿಯಿಂದ ಬಂಡವಾಳ ಹೂಡಿಕೆ ಮಾಡಲಾಗುವುದು’ ಎಂದ ನಿರ್ಮಲಾ ಸೀತಾರಾಮನ್‌, “ಇದಲ್ಲದೆ ಮೆಟ್ರೋ ರೈಲ್ವೆ ಯೋಜನೆಗಳನ್ನೂ ಪ್ರೋತ್ಸಾಹಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಯೋಜನೆಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸಲಾಗುವುದು’ ಎಂದು ಪ್ರಕಟಿಸಿದರು.

ಒಟ್ಟಾರೆ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗಾಗಿ 2030ರವರೆಗೆ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಗುರಿ ಇದೆ ಎಂದೂ ತಿಳಿಸಿದ್ದಾರೆ. ಇದರಿಂದ ನಗರದ ರೈಲ್ವೆ ವ್ಯವಸ್ಥೆಗೂ ಬಂಡವಾಳ ಹರಿದುಬರಲಿದ್ದು, ಈ ಮೂಲಕ ಇನ್ನಷ್ಟು ಪ್ರಯಾಣಿಕ ಸ್ನೇಹಿ ಆಗುವ ಸಾಧ್ಯತೆ ಇದೆ.

ಮುಕ್ತ ಮನಸ್ಸು; ಉತ್ತೇಜನದ ಕನಸು: “ಸುಮಾರು 1,745 ಕೋಟಿ ವೆಚ್ಚದ ಬೆಂಗಳೂರು ಉಪನಗರ ರೈಲು ಯೋಜನೆಗೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಪ್ರತ್ಯೇಕ ಹಣ ಮೀಸಲಿಟ್ಟಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಆದರೆ, ಹಣಕಾಸು ಸಚಿವರ ಈ ಹೇಳಿಕೆಯಿಂದ ಯೋಜನೆಗೆ ವೇಗ ದೊರೆಯುವ ನಿರೀಕ್ಷೆ ಗರಿಗೆದರಿದೆ. ಯಾಕೆಂದರೆ, ಈ ಮೊದಲು ರೈಲ್ವೆ ಇಲಾಖೆಯ ಭಾಗವಾಗಿ ಯೋಜನೆಯನ್ನು ಪರಿಗಣಿಸುತ್ತಿರಲಿಲ್ಲ.

ಬದಲಿಗೆ ಇದೊಂದು ನಗರಾಭಿವೃದ್ಧಿಯ ಭಾಗವಾಗಿ ನೋಡುತ್ತಿದ್ದರು. ಬಜೆಟ್‌ನಲ್ಲಿಯೇ ಈಗ ಉದ್ದೇಶಿತ ಯೋಜನೆಗಳಿಗೆ ಬಂಡವಾಳ ಹೂಡಿಕೆಯಲ್ಲಿ ಮುಕ್ತ ಮನಸ್ಸು ಹೊಂದಿರುವುದಾಗಿ ಸರ್ಕಾರ ಹೇಳಿರುವುದು ಉತ್ತೇಜನ ಸಿಕ್ಕಿದೆ’ ಎಂದು ಪ್ರಜಾ ರಾಗ್‌ ಸಂಸ್ಥೆಯ ಸಂಜೀವ್‌ ದ್ಯಾಮಣ್ಣವರ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಅದೇ ರೀತಿ, ಯಾವುದೇ ಹೊಸ ಮೆಟ್ರೋ ಯೋಜನೆಗಳನ್ನು ಸರ್ಕಾರ ಪ್ರಕಟಿಸಿಲ್ಲ. ಆದರೆ, ಚಾಲ್ತಿಯಲ್ಲಿರುವ ಮೆಟ್ರೋ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಒತ್ತುನೀಡಲಾಗಿದೆ. ಇದೊಂದು ಸ್ವಾಗತಾರ್ಹ ಕ್ರಮ ಎಂದೂ ಅವರು ಹೇಳಿದರು. ಅಂದಹಾಗೆ, ಈಚೆಗೆ ಪ್ರಧಾನಿ ಕಚೇರಿಯಿಂದ ಬೆಂಗಳೂರು ಉಪನಗರ ರೈಲು ಯೋಜನೆ ಮರುಪರಿಶೀಲನೆಗೆ ಸಂಬಂಧಿಸಿದಂತೆ ಪತ್ರ ಬರೆಯಲಾಗಿತ್ತು. ಅದರಲ್ಲಿ ನಗರ ವ್ಯಾಪ್ತಿಯಲ್ಲಿ ಉಪನಗರದ ಬಗ್ಗೆ ಸಣ್ಣ ಅಪಸ್ವರವೂ ಇತ್ತು ಎಂದು ಉಪನಗರ ರೈಲು ಹೋರಾಟಗಾರರು ಇದೇ ವೇಳೆ ಸ್ಮರಿಸಿದರು.

ಆರು ವರ್ಷಗಳಲ್ಲಿ ಪೂರ್ಣ: ಬೆಂಗಳೂರು ಉಪನಗರ ರೈಲು ಯೋಜನೆ 162 ಕಿ.ಮೀ. ಸಂಪರ್ಕ ಜಾಲ ಒಳಗೊಂಡಿದ್ದು, ಈಗಾಗಲೇ ಇರುವ 31 ಹಾಗೂ ಹೊಸದಾಗಿ 50 ಸೇರಿ ಒಟ್ಟಾರೆ 81 ನಿಲ್ದಾಣಗಳು ಯೋಜನೆ ಮಾರ್ಗದಲ್ಲಿ ಬರಲಿವೆ. ಮುಂದಿನ ಆರು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ಸಂಬಂಧ ಎಸ್‌ಪಿವಿ ರಚನೆ ಆಗಬೇಕಾಗಿದೆ.

ಬಜೆಟ್‌ನಲ್ಲಿ ಸಣ್ಣ ಉದ್ಯಮಿಗಳಿಗೆ ಉತ್ತೇಜನ ನೀಡಿರುವುದು ಮತ್ತು 5 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ನೀಡಿರುವುದು ಖುಷಿ ನೀಡಿದೆ.
-ಅಂಬಾಡಿ, ಖಾಸಗಿ ಉದ್ಯೋಗಿ

ಈಗಾಗಲೇ 10 ರೂ. ನಾಣ್ಯದ ಬಗ್ಗೆ ಜನರಲ್ಲಿ ಗೊಂದಲವಿದೆ. ಈಗ 20 ರೂ. ನಾಣ್ಯ ಪರಿಚಯಿಸುವುದಕ್ಕೆ ಮುಂದಾಗಿರುವುದು ಎಷ್ಟು ಯಶಸ್ವಿಯಾಗುತ್ತದೆ ಎಂದು ಕಾದು ನೋಡಬೇಕು.
-ಶ್ರೀವಾನನ್‌, ಬ್ಯಾಂಕ್‌ ಉದ್ಯೋಗಿ

ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌ಗಳ ಬಗ್ಗೆ ಇದ್ದ ಗೊಂದಲ ನಿವಾರಿಸಿ ಕೆಲವು ವಿನಾಯಿತಿಗಳನ್ನು ನೀಡಿರುವುದು ಜನಸಾಮಾನ್ಯರ ಮಟ್ಟಿಗೆ ಸಕಾರಾತ್ಮಕ ಬೆಳವಣಿಗೆ.
-ದೇವನಾಥ ರೆಡ್ಡಿ, ಸರ್ಕಾರಿ ಉದ್ಯೋಗಿ

ಬಜೆಟ್‌ನಲ್ಲಿ ವಿವಿಧ ವಿಷಯಗಳಿಗೆ ಆದ್ಯತೆ ನೀಡಲಾಗಿದೆ. ಆದರೆ, ಬಿಎಸ್‌ಎನ್‌ಎಲ್‌ ಉದ್ಯೋಗಿಗಳ ಸಮಸ್ಯೆಗೆ ಪರಿಹಾರ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು.
-ಕೆ.ಆರ್‌.ರವೀಂದ್ರ, ಬಿಎಸ್‌ಎನ್‌ಎಲ್‌ ಉದ್ಯೋಗಿ

ಕರ್ನಾಟಕಕ್ಕೆ ವಿಶೇಷ ಯೋಜನೆಗಳು ಸಿಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಸಂಕಷ್ಟದಲ್ಲಿರುವ ಉದ್ದಿಮೆಗಳಿಗೆ ಉತ್ತೇಜನ ನೀಡಲು ಮತ್ತಷ್ಟು ಅವಕಾಶಗಳನ್ನು ನೀಡಬಹುದಿತ್ತು.
-ಎನ್‌.ಆರ್‌.ಬಿರಾದರ್‌, ಸರ್ಕಾರಿ ಉದ್ಯೋಗಿ

ಸ್ಟಾರ್ಟ್‌ಆಪ್‌ ಕಂಪನಿಗಳಿಗೆ ತೆರಿಗೆ ವಿನಾಯಿತಿ ಸೇರಿ ಹಲವು ಸೌಲಭ್ಯಗಳ ಮೂಲಕ ಉತ್ತೇಜ ನೀಡಲಾಗಿದೆ. ಪ್ರವಾಸಿ ಕೇಂದ್ರಗಳನ್ನು ವಿಶ್ವ ದರ್ಜೆಗೆ ಏರಿಸಿರುವ ಚಿಂತನೆಯೂ ಉತ್ತಮ.
-ಶ್ರೀ ಗೌಡ, ಖಾಸಗಿ ಉದ್ಯೋಗಿ

ಅಸಂಘಟಿತ ವಲಯದ ಕಾರ್ಮಿಕರು 60ನೇ ವರ್ಷದವರೆಗೆ 100 ರೂ. ಪ್ರೀಮಿಯಂ ಕಟ್ಟಿದರೆ 60 ವರ್ಷದ ನಂತರ 3 ಸಾವಿರ ರೂ. ಪಿಂಚಣಿ ಸಿಗಲಿದೆ. “ಈಸಿ ಆಫ್ ಲಿವಿಂಗ್‌’ ಯೋಜನೆಯಿಂದ ಜೀವನ ಈಸಿ ಆಗದು.
-ಧನಂಜಯ್‌ ಎನ್‌., ವೈದ್ಯಕೀಯ ಪ್ರತಿನಿಧಿ

ಭಾರತವನ್ನು 5 ಟ್ರಿಲಿಯನ್‌ ಡಾಲರ್‌ ಆರ್ಥಿಕ ವ್ಯವಸ್ಥೆಯನ್ನಾಗಿ ಮಾಡಲಾಗುತ್ತದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಆದರೆ, ಇದರಿಂದ ಆರ್ಥಿಕ ಅಸಮಾನತೆ ಹೆಚ್ಚಾಗಲಿದೆ.
-ನಾಗೇಗೌಡ ಕೆ.ಎಸ್‌, ಪ್ರಾಧ್ಯಾಪಕ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.