Mahadevpur ಠಾಣೆ ಆವರಣದಲ್ಲಿದ್ದ 60 ಕ್ಕೂ ಹೆಚ್ಚು ವಾಹನಗಳು ಭಸ್ಮ
Team Udayavani, Apr 13, 2023, 7:06 PM IST
ಮಹದೇವಪುರ: ಜಪ್ತಿ ಮಾಡಿ ವಶಪಡಿಸಿಕೊಂಡಿದ್ದ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ಅಂಟಿಕೊಂಡ ಪರಿಣಾಮ ಆವಲಹಳ್ಳಿ ಪೊಲೀಸ್ ಠಾಣಾ ಆವರಣದಲ್ಲಿದ್ದ ಸುಮಾರು 60 ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಗುರುವಾರ ನಡೆದಿದೆ.
ಮಧ್ಯಾಹ್ನ ಸುಮಾರು 12.30 ರ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ವಾಹನಗಳಲ್ಲಿ ಕಾಣಿಸಿಕೊಂಡ ಬೆಂಕಿಯು ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಗೆಯಾಯಿತು. ಬೆಂಕಿಯನ್ನು ನಂದಿಸಲು ಹೊಸಕೋಟೆ ಅಗ್ನಿ ಶಾಮಕ ಸಿಬಂದಿ ಸತತ ಎರಡು ಗಂಟೆ ಕಾರ್ಯಚರಣೆ ಮಾಡಿ ಮೂರು ವಾಹನಗಳಲ್ಲಿ ಬೆಂಕಿಯ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸ್ ಠಾಣೆ ಹಿಂಭಾಗ 3 ಎಕರೆ ಜಾಗದಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡು ಗಾಳಿ ಹೆಚ್ಚಾಗಿರುವುದರಿಂದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿ ಪೊಲೀಸ್ ಠಾಣಾ ಆವರಣದಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಬೆಂಕಿ ಅಂಟಿಕೊಂಡು 8 ಆಟೋ, 8 ಕಾರು,45ಬೈಕ್ ಗಳು ಸೇರಿ ಸುಮಾರು 60 ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ಐಜಿ ರವಿಕಾಂತೆಗೌಡ ಮಾಹಿತಿ ನೀಡಿದರು.
ಬೆಂಕಿ ಯಾವುದರಿಂದ ಬಂತು ಎಲ್ಲಿಂದ ಬಂತು ಎಂದು ತನಿಖೆ ಮಾಡಲು ಪೋಲಿಸರಿಗೆ ಸೂಚಿಸಲಾಗಿದೆ ಎಂದರು.ಪೊಲೀಸ್ ಠಾಣೆಗೆ ಅಥವಾ ಠಾಣೆ ಯ ಸ್ವತ್ತು,ದಾಖಲೆ ಗಳಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ . ತನಿಖೆ ಮಾಡಿದ ನಂತರ ಬೆಂಕಿ ಎಲ್ಲಿಂದ ಬಂತು ಯಾವುದರಿಂದ ಬಂತು ಮುಂದೆ ಈ ರೀತಿಯ ಅನಾಹುತ ಆಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ