2500 ಕೋಟಿಗೂ ಹೆಚ್ಚು ಅನುದಾನ


Team Udayavani, Jul 19, 2018, 6:30 AM IST

180718kpn75.jpg

ಬೆಂಗಳೂರು: ಕಳೆದೆರಡು ದಿನಗಳಿಂದ ಕೇಂದ್ರದ ವಿವಿಧ ಸಚಿವರೊಂದಿಗೆ ನಡೆಸಿದ ಮಾತುಕತೆ ಫ‌ಲವಾಗಿ ರಾಜ್ಯಕ್ಕೆ ಸುಮಾರು 2,500 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಪಡೆದುಕೊಳ್ಳುವುದರ ಜತೆಗೆ ವಿವಿಧ ಯೋಜನೆಗಳಿಗೆ ಅನುಮತಿ
ದೊರಕಿಸಿಕೊಳ್ಳುವಲ್ಲಿ ತಾವು ಯಶಸ್ವಿಯಾಗಿರುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಸಂಸದರೊಂದಿಗೆ ಚರ್ಚಿಸುವ ಸಲುವಾಗಿ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ, ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳು, ಭೂಸಾರಿಗೆ, ರಕ್ಷಣೆ, ಕೃಷಿ ಹಾಗೂ ರೈಲ್ವೆ ಮತ್ತು ಕಲ್ಲಿದ್ದಲು ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರ ಭೇಟಿ ಫ‌ಲಪ್ರದವಾಗಿದೆ. ರಾಜ್ಯದ ಕೋರಿಕೆಗಳಿಗೆ ಎಲ್ಲ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯಕ್ಕೆ 2014ರಿಂದ ಇದುವರೆಗೆ ಕೇಂದ್ರದಿಂದ ಬರಬೇಕಾಗಿದ್ದ ಬೆಂಬಲ ಬೆಲೆ ಬಾಕಿ ಮೊತ್ತ 954 ಕೋಟಿ ರೂ.ಬಿಡುಗಡೆ ಮಾಡಲು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್‌ವಿಲಾಸ್‌ ಪಾಸ್ವಾನ್‌ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ಹೆದ್ದಾರಿಗೆ ನೆರವು, ನೀರಾವರಿ ಸಮಸ್ಯೆಗೆ ಸ್ಪಂದನೆ: ಕೇಂದ್ರ ಹೆದ್ದಾರಿ, ಭೂಸಾರಿಗೆ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಹೆದ್ದಾರಿ ಮಂತ್ರಾಲಯದಿಂದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ  ಸೇರಿದಂತೆ ರಾಜ್ಯದಲ್ಲಿರುವ ಪ್ರಮುಖ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿಕೊಡುವಂತೆ ಮಾಡಿದ ಮನವಿಗೆ ಸ್ಪಂದಿಸಿದ್ದಾರೆ. ಜತೆಗೆ, ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ರಚನೆ ವೇಳೆ ಆಗಿರುವ ಗೊಂದಲ ಮತ್ತು ಮೇಕೆದಾಟು ವಿಷಯಗಳ ಬಗ್ಗೆ ರಾಜ್ಯಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಮೆಟ್ರೋಗೆ ರಕ್ಷಣಾ ಇಲಾಖೆ ಜಮೀನು: ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ
ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಮೆಟ್ರೋ ವಿಸ್ತರಣೆ ಸಂದರ್ಭದಲ್ಲಿ ನಿಲ್ದಾಣ ಕಾಮಗಾರಿಗಳಿಗೆ
ನಿಗದಿಪಡಿಸಿರುವ ಭೂಮಿಯಲ್ಲಿ ಕೆಲವೊಂದು ಕಡೆ ರಕ್ಷಣಾ ಇಲಾಖೆ ಜಮೀನು ಸೇರಿರುವುದರಿಂದ ಅದನ್ನು ರಾಜ್ಯ ಸರ್ಕಾರಕ್ಕೆ
ಬಿಟ್ಟು ಕೊಡುವಂತೆ ಮನವಿ ಮಾಡಲಾಗಿದೆ.ಇದಕ್ಕೆ ಸ್ಪಂದಿಸಿದ ಸಚಿವರು, ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ನೆರವು ಕೊಡುವ ಭರವಸೆ ನೀಡಿರುವುದಾಗಿ ತಿಳಿಸಿದರು ಎಂದರು.

ರೈಲ್ವೆ ಯೋಜನೆಗಳಿಗೆ ನೆರವು: ಕೇಂದ್ರ ರೈಲ್ವೆ ಮತ್ತು ಕಲ್ಲಿದ್ದಲು ಸಚಿವ ಪಿಯೂಷ್‌ ಗೋಯೆಲ್‌ ಅವರನ್ನು ಭೇಟಿಯಾಗಿ, ಕೊಂಕಣ ರೈಲ್ವೆಯಲ್ಲಿರುವ ಪೊಲೀಸ್‌ ಬಲದ ಕಾರ್ಯಕ್ಷಮತೆ ಹೆಚ್ಚಿಸುವ ದೃಷ್ಟಿಯಿಂದ ಹಾಲಿ ಇರುವ 900 ಹುದ್ದೆಗಳ ಜತೆಗೆ ಸರ್ಕಾರಿ ರೈಲ್ವೆ ಪೊಲೀಸ್‌ ದಳದ (ಜಿಆರ್‌ಪಿ) ಸಂಖ್ಯಾಬಲಕ್ಕೆ ಹೆಚ್ಚುವರಿಯಾಗಿ 919ಕ್ಕೆ ಏರಿಕೆ ಮಾಡುವಂತೆ ಮತ್ತು ರಾಜ್ಯದಲ್ಲಿ ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಆದ್ಯತೆ ನೀಡುವಂತೆ ಮನವಿ ಮಾಡಿದ್ದು, ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎಂದು ತಿಳಿಸಿದರು.

ಮೆಗಾ ಡೈರಿಗಳಿಗೆ 900 ಕೋಟಿ ರಾಜ್ಯದ ಬೇಡಿಕೆಗಳಿಗೆ ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌ ಅವರೂ ಪೂರಕವಾಗಿ ಸ್ಪಂದಿಸಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ 85 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಹಲವು ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಮೆಗಾ ಡೈರಿ ಸ್ಥಾಪಿಸಬೇಕೆಂಬ ರಾಜ್ಯದ ಉದ್ದೇಶವನ್ನು ಅವರ ಗಮನಕ್ಕೆ ತಂದಾಗ, ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ಕೇಂದ್ರದಿಂದ 900 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ. ಈ ಅನುದಾನದಲ್ಲಿ ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೆಗಾ ಡೈರಿಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಇದರ ಜತೆಗೆ, ರಾಜ್ಯದಲ್ಲಿ ಮಾರುಕಟ್ಟೆಗಳನ್ನು ಉನ್ನತೀಕರಿಸಲು ಅಗತ್ಯವಿರುವ ಅನುದಾನ, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮಣ್ಣು ಪರೀಕ್ಷಾ ಕೇಂದ್ರಗಳ ಸ್ಥಾಪನೆ, ಆವರ್ತ ನಿಧಿ, ಬೆಂಬಲ ಬೆಲೆ ಹಾಗೂ ಅಡಕೆ ಮತ್ತು ತೆಂಗು ಬೆಳೆಗಾರರ ರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಅನುದಾನ ಒದಗಿಸುವಂತೆ ಮಾಡಿದ ಮನವಿಗೂ ಕೇಂದ್ರ ಕೃಷಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಹೇಳಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.