ಜೆಡಿಎಸ್‌ನಲ್ಲಿ ಬಹುತೇಕ ಮಂದಿಗೆ ಟಿಕೆಟ್‌ ಖಾತ್ರಿ


Team Udayavani, Dec 10, 2017, 6:25 AM IST

JDS.jpg

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುನ್ನವೇ ಆಯ್ದ ಕ್ಷೇತ್ರಗಳ ಟಿಕೆಟ್‌ ಪಕ್ಕಾ ಮಾಡಿರುವ ಜೆಡಿಎಸ್‌ ತತಕ್ಷಣದಿಂದಲೇ ಕೆಲಸ ಪ್ರಾರಂಭಿಸುವಂತೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ 65 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಮತದಾರರ ಮನವೊಲಿಕೆ ಕಾರ್ಯದಲ್ಲಿ ನಿರತರಾಗಿದ್ದಾರೆ.

“ಮಿಷನ್‌ 113′ ಕಾರ್ಯಾಚರಣೆಯಡಿ ಶ್ರಮ ಹಾಕಿದರೆ ಜೆಡಿಎಸ್‌ ಗೆಲ್ಲಬಹುದಾದ ಎ ಕೆಟಗೆರಿಯ 75 ಕ್ಷೇತ್ರಗಳನ್ನು  ಈಗಾಗಲೇ ಗುರುತಿಸಿರುವ ಎಚ್‌.ಡಿ.ಕುಮಾರಸ್ವಾಮಿ ಆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ. ಎರಡನೇ ಹಾಗೂ ಮೂರನೇ ಹಂತದ ಕರ್ನಾಟಕ ವಿಕಾಸ ವಾಹಿನಿ ಯಾತ್ರೆ ಆ ಕ್ಷೇತ್ರಗಳಲ್ಲಿ ಸಂಚರಿಸಲಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೆಲಸ ಪ್ರಾರಂಭಿಸುವಂತೆ ಸೂಚಿಸಲಾಗಿರುವ ಅಭ್ಯರ್ಥಿಗಳ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಏನಾದರೂ ತೀವ್ರ ವಿರೋಧ ವ್ಯಕ್ತವಾದರೆ ಬದಲಾವಣೆ ಹೊರತುಪಡಿಸಿ ಬೇರೆ ಯಾವುದೇ ಒತ್ತಡ ಅಥವಾ ಲಾಬಿಗೆ ಮಣಿಯದೆ ಅಂತಿಮ ಕ್ಷಣದಲ್ಲಿ ಟಿಕೆಟ್‌ ಘೋಷಣೆ ಮಾಡುವ ಪದ್ಧತಿ  ಈ ಬಾರಿಯ ಚುನಾವಣೆಯಲ್ಲಿ ಇರಲೇಕೂಡದು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸಹ ಕುಮಾರಸ್ವಾಮಿಗೆ ತಾಕೀತು ಮಾಡಿದ್ದಾರೆ ಎಂದು ಹೇಳಲಾಗಿದೆ.

ಜೆಡಿಎಸ್‌ಕಳೆದ ಬಾರಿ ಗೆಲುವು ಸಾಧಿಸಿದ್ದ 40 ಕ್ಷೇತ್ರಗಳ ಪೈಕಿ  ಈ ಬಾರಿಯೂ 36 ಕ್ಷೇತ್ರ ಗೆಲ್ಲುವ ಭರವಸೆ ಇಟ್ಟುಕೊಂಡಿರುವ ಕುಮಾರಸ್ವಾಮಿ 33 ಹಾಲಿ ಶಾಸಕರಿಗೂ ಟಿಕೆಟ್‌ ಕೊಡಲು ನಿರ್ಧರಿಸಿದ್ದು,  ಈಗಾಗಲೇ ಜೆಡಿಎಸ್‌ ಶಾಸಕರು ಇರುವ ಕ್ಷೇತ್ರ ಹೊರತುಪಡಿಸಿ ಕಾಗವಾಡ, ದೇವರಹಿಪ್ಪರಗಿ, ಸಿಂಧಗಿ, ಅಫ‌jಲಪುರ, ಆಳಂದ, ಚಿಂಚೋಳಿ, ಗುರುಮಿಟ್ಕಲ್‌, ಬೀದರ್‌ ದಕ್ಷಿಣ, ಹುಬ್ಬಳ್ಳಿ-ಧಾರವಾಡ ಪೂರ್ವ, ಕಾರವಾರ, ಸಿರಸಿ, ಚಿತ್ರದುರ್ಗ, ಹಿರಿಯೂರು, ಶಿವಮೊಗ್ಗ, ಚಿಕ್ಕಮಗಳೂರು, ತಿಪಟೂರು, ತುಮಕೂರು ನಗರ , ತುಮಕೂರು ಗ್ರಾಮಾಂತರ, ಸಿರಾ, ಶ್ರೀನಿವಾಸಪುರ, ಮುಳಬಾಗಿಲು, ಕೆಜಿಎಫ್, ಕೋಲಾರ, ಯಶವಂತಪುರ, ರಾಜರಾಜೇಶ್ವರಿನಗರ, ಹೆಬ್ಟಾಳ, ಬಸವನಗುಡಿ, ದೊಡ್ಡಬಳ್ಳಾಪುರ, ಚನ್ನಪಟ್ಟಣ,  ಮೇಲುಕೋಟೆ, ಮಳವಳ್ಳಿ,ಬೇಲೂರು ವಿರಾಜಪೇಟೆ, ಹುಣಸೂರು, ಕೃಷ್ಣರಾಜ, ಟಿ.ನರಸೀಪುರ, ಸೇರಿ 40 ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು ಅಲ್ಲಿ ಗೆಲ್ಲುವ ಲೆಕ್ಕಾಚಾರದೊಂದಿಗೆ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು  ಫೈನಲ್‌ ಮಾಡಿದ್ದಾರೆ.

2013 ರ ಚುನಾವಣೆಯಲ್ಲಿ  323 ಮತಗಳ ಅಂತರದಿಂದ ಹದಿನೈದು ಸಾವಿರ ಅಂತರದವರೆಗೆ ಸೋಲು ಆನುಭವಿಸಿದ 48 ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಿದ 12 ಕ್ಷೇತ್ರಗಳು ಇದರಲ್ಲಿ ಸೇರಿವೆ.

ಪ್ರಮುಖ ಕ್ಷೇತ್ರಗಳಲ್ಲಿ ಫೈನಲ್‌ ಮಾಡಿರುವ ಅಭ್ಯರ್ಥಿಗಳು ಹಾಗೂ ಹಾಲಿ ಶಾಸಕರಿಗೆ ಕೆಲಸ  ಪ್ರಾರಂಭಿಸಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ  ಕೆಲಸ ಪ್ರಾರಂಭಿಸಲು ಹೇಳಿರುವ ಅಭ್ಯರ್ಥಿಗಳು ಸೇರಿದಂತೆ 100 ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.

ಫೈನಲ್‌ಗೊಂಡಿರುವ ಅಭ್ಯರ್ಥಿಗಳು ?
*ಬಸವಕಲ್ಯಾಣ- ಮಲ್ಲಿಕಾರ್ಜುನ ಖೂಬಾ
*ರಾಯಚೂರು-ಡಾ.ಶಿವರಾಜ್‌ ಪಾಟೀಲ್‌
*ಲಿಂಗಸಗೂರು-ಮಾನಪ್ಪ ವಜ್ಜಲ್‌
*ಹರಿಹರ- ಎಚ್‌.ಎಸ್‌.ಶಿವಶಂಕರ್‌
*ಶಿವಮೊಗ್ಗ ಗ್ರಾಮಾಂತರ- ಶಾರಧಾ ಪೂರ್ಯ ನಾಯಕ್‌
*ಭದ್ರಾವತಿ-ಅಪ್ಪಾಜಿ
*ಸೊರಬ-ಮಧು ಬಂಗಾರಪ್ಪ
*ಮೂಡಿಗೆರೆ- ಬಿ.ಬಿ.ನಿಂಗಯ್ಯ
*ಕಡೂರು-ವೈಎಸ್‌ವಿ ದತ್ತ
*ಚಿಕ್ಕನಾಯಕನಹಳ್ಳಿ-ಸುರೇಶ್‌ಬಾಬು
*ತುರುವೇಕೆರೆ- ಎಂ.ಟಿ.ಕೃಷ್ಣಪ್ಪ
*ಕುಣಿಗಲ್‌-ಡಿ.ನಾಗರಾಜಯ್ಯ
*ಕೊರಟಗೆರೆ-ಸುಧಾಕರ್‌ ಲಾಲ್‌
*ಗುಬ್ಬಿ-ವಾಸು
*ಪಾವಗಡ-ತಿಮ್ಮರಾಯಪ್ಪ
*ಶಿಡ್ಲಘಟ್ಟ-ರಾಜಣ್ಣ
*ಚಿಂತಾಮಣಿ-ಜಿ.ಕೆ.ಕೃಷ್ಣಾರೆಡ್ಡಿ
*ಮಾಲೂರು-ಮಂಜುನಾಥಗೌಡ
*ಮಹಾಲಕ್ಷ್ಮಿ ಲೇ ಔಟ್‌- ಗೋಪಾಲಯ್ಯ
*ದೇವನಹಳ್ಳಿ-ಪಿಳ್ಳಮುನಿಶಾಮಪ್ಪ
*ನೆಲಮಂಗಲ-ಡಾ.ಶ್ರೀನಿವಾಸಮೂರ್ತಿ
*ರಾಮನಗರ-ಎಚ್‌.ಡಿ.ಕುಮಾರಸ್ವಾಮಿ
*ಮದ್ದೂರು-ಡಿ.ಸಿ.ತಮ್ಮಣ್ಣ
*ಕೃಷ್ಣರಾಜಪೇಟೆ-ನಾರಾಯಣಗೌಡ
*ಶ್ರವಣಬೆಳಗೊಳ-ಸಿ.ಎನ್‌.ಬಾಲಕೃಷ್ಣ
*ಅರಸೀಕೆರೆ-ಶಿವಲಿಂಗೇಗೌಡ
*ಹಾಸನ-ಪ್ರಕಾಶ್‌
*ಹೊಳೇನರಸೀಪುರ-ಎಚ್‌.ಡಿ.ರೇವಣ್ಣ
*ಸಕಲೇಶಪುರ-ಎಚ್‌.ಕೆ.ಕುಮಾರಸ್ವಾಮಿ
*ಕೃಷ್ಣರಾಜನಗರ-ಸಾ.ರಾ.ಮಹೇಶ್‌
*ಹೆಗ್ಗಡದೇವನಗೋಟೆ- ಚಿಕ್ಕಮಾದು
*ಚಾಮುಂಡೇಶ್ವರಿ-ಜಿ.ಟಿ.ದೇವೇಗೌಡ
*ನವಲಗುಂದ- ಕೋನರೆಡ್ಡಿ
*ದೇವರಹಿಪ್ಪರಗಿ-ಎ.ಎಸ್‌.ಪಾಟೀಲ್‌ ನಡಹಳ್ಳಿ
*ಸಿಂಧಗಿ-ಎಂ.ಸಿ.ಮನಗೋಳಿ
*ಬೀದರ್‌ ದಕ್ಷಿಣ-ಬಂಡೆಪ್ಪ ಕಾಶಂಪುರ್‌
*ಶಿವಮೊಗ್ಗ-ಶ್ರೀಕಾಂತ್‌
*ಶ್ರೀಂಗೇರಿ-ಎಚ್‌.ಜಿ. ವೆಂಕಟೇಶ್‌
*ತಿಪಟೂರು-ಲೋಕೇಶ್ವರ್‌
*ತುಮಕೂರು-ಗೋವಿಂದರಾಜ್‌
*ತುಮಕೂರು ಗ್ರಾಮಾಂತರ-ಗೌರಿಶಂಕರ
*ಸಿರಾ-ಸತ್ಯನಾರಾಯಣ
*ಶ್ರೀನಿವಾಸಪುರ-ವೆಂಕಟಶಿವಾರೆಡ್ಡಿ
*ಯಶವಂತಪುರ-ಟಿ.ಎನ್‌.ಜವರಾಯಿಗೌಡ
*ಹೆಬ್ಟಾಳ-ಹನುಮಂತೇಗೌಡ
*ದೊಡ್ಡಬಳ್ಳಾಪುರ-ಮುನೇಗೌಡ
*ಚೆನ್ನಪಟ್ಟಣ- ಅನಿತಾ ಕುಮಾರಸ್ವಾಮಿ
*ಕನಕಪುರ-ವಿಶ್ವನಾಥ್‌
*ಮಾಗಡಿ- ಎ.ಮಂಜು
*ಮಳವಳ್ಳಿ-ಡಾ.ಅನ್ನಾದಾನಿ
*ಮಂಡ್ಯ-ಎಂ.ಶ್ರೀನಿವಾಸ್‌
*ಅರಕಲಗೂಡು-ಎ.ಟಿ.ರಾಮಸ್ವಾಮಿ
*ಪಿರಿಯಾಪಟ್ಟಣ-ಮಹದೇವ್‌
*ನರಸಿಂಹರಾಜ-ಸಂದೇಶಸ್ವಾಮಿ
*ಹುಬ್ಬಳ್ಳಿ-ಧಾರವಾಡ ಪೂರ್ವ-ಹಲ್ಕೋಡ್‌ ಹನುಮಂತಪ್ಪ
*ಸಿರಸಿ-ಶಶಿಭೂಷಣ ಹೆಗಡೆ
*ಗುರುಮಿಟ್ಕಲ್‌-ನಾಗನಗೌಡ
*ಚಿಂಚೋಳಿ-ಸುಶೀಲಾಬಾಯಿ
*ಚಾಮರಾಜ-ಪ್ರೊ.ರಂಗಪ್ಪ
*ಪದ್ಮನಾಭನಗರ-ಗೋಪಾಲ್‌
*ಶ್ರೀರಂಗಪಟ್ಟಣ-ರವೀಂದ್ರ ಶ್ರೀಕಂಠಯ್ಯ
*ಮೇಲುಕೋಟೆ- ಸಿ.ಎಸ್‌.ಪುಟ್ಟರಾಜು
*ಸರ್ವಜ್ಞ ನಗರ- ಅನ್ವರ್‌ ಅಲಿ
*ಮಧುಗಿರಿ- ವೀರಭದ್ರಯ್ಯ
*ಗಾಂಧಿನಗರ- ನಾರಾಯಣಸ್ವಾಮಿ

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.