ಅಪಾರ್ಟ್ಮೆಂಟ್ನಿಂದ ಬಿದ್ದು ತಾಯಿ ಮಗ ಅನುಮಾನಾಸ್ಪದ ಸಾವು
Team Udayavani, Mar 6, 2018, 9:49 AM IST
ಬೆಂಗಳೂರು: ತಾಯಿ ಮತ್ತು ಮಗ ಅಪಾರ್ಟ್ಮೆಂಟ್ನಿಂದ ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿಯ ಬೆಳ್ತೂರು ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತರು ಯಾದಗಿರಿ ಮೂಲದವರಾಗಿದ್ದು, 55 ವರ್ಷದ ಸುಂದರಮ್ಮ ಮತ್ತು ಮಗ ಕೆಎಸ್ಆರ್ಟಿಸಿ ಬಸ್ ಚಾಲಕರಾಗಿರುವ 33 ವರ್ಷದ ಮೌನೇಶ್ ಎನ್ನುವವರಾಗಿದ್ದಾರೆ.
ಪ್ರೇಮ ಪ್ರಕರಣ ದುರಂತಕ್ಕೆ ಕಾರಣ?
ಇದೇ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಕಾಡುಕೋಡಿ ಠಾಣೆಯ ಇನ್ಸ್ಪೆಕ್ಟರ್ ಚಂದ್ರಪ್ಪ ಎನ್ನುವವರ ಸಹೋದರಿಗೆ ಪ್ರೇಮಾಂಕುರವಾಗಿ ಇಬ್ಬರೂ ಮನೆ ಬಿಟ್ಟು ತೆರಳಿದ್ದರು ಎನ್ನಲಾಗಿದೆ. ಇದೇ ವಿಚಾರದಲ್ಲಿ ಚಂದ್ರಪ್ಪ ಅವರು ಮೌನೇಶ್ ಮತ್ತು ತಾಯಿನನ್ನು ಕೂಡಿ ಹಾಕಿ ಬೆದರಿಸಿದ್ದರು ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಚಂದ್ರಪ್ಪ ಅವರ ವರ್ಗಾವಣೆಯೂ ಆಗಿತ್ತು ಎಂದು ವರದಿಯಾಗಿದೆ.
ಕಾಡುಗೋಡಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ