“ಜೀವನವು ಕೊಳಕುಗಳಿಂದ ತುಂಬಿದೆ”.. ಮೂರುವರೆ ವರ್ಷದ ಮಗುವನ್ನು ಕೊಂದು ನೇಣಿಗೆ ಶರಣಾದ ತಾಯಿ
Team Udayavani, Jul 2, 2022, 1:02 PM IST
ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೇಸತ್ತ ತಾಯಿ, ತನ್ನ ಮೂರು ವರ್ಷದ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ಇಲ್ಲಿನ ಚೆನ್ನಸಂದ್ರದ ಮಂತ್ರಿ ಅಲ್ಫಿಯನ್ ಅಪಾರ್ಟ್ಮೆಂಟ್ ವಾಸಿ ದೀಪಾ (31), ರಿಯಾ(3) ಮೃತರು. ದೀಪಾ ತನ್ನ ಮೂರುವರೆ ವರ್ಷದ ರಿಯಾಳನ್ನು ವೇಲಿನಿಂದ ಸೀಲಿಂಗ್ ಫ್ಯಾನಿಗೆ ನೇಣು ಹಾಕಿ ಕೊಲೆ ಮಾಡಿ ನಂತರ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೀಪಾ ಅವರು ಕಳೆದ ಒಂದು ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಯ ನೋವನ್ನು ಅನುಭವಿಸದೇ ಅವರು ಈ ಕೃತ್ಯ ನಡೆಸಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದರು.
ದೀಪಾ ಅವರು ಆತ್ಮಹತ್ಯೆಗೆ ಮುನ್ನ ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ, ಜೀವನವು ಕೊಳಕುಗಳಿಂದ ತುಂಬಿದೆ ಎಂದು ನಾನು ಭಾವಿಸಿದೆ, ಕ್ಷಮಿಸಿ ತಾಯಿ ಮತ್ತು ದಿವ್ಯಾ ಲವ್ ಯು ಸೋನಾ ಎಂದು ಪತ್ರ ಬರೆದಿದ್ದಾರೆ.
ಈ ಸಂಬಂಧ ದೀಪಾ ಅವರ ಪತಿ ಆದರ್ಶ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿ ಕೊಂಡಿರುವ ರಾಜರಾಜೇಶ್ವರಿನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರ್ಸಿಂಗ್ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್
ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್ ಗುಂಡೂರಾವ್
ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು
ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ
ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್