ತಂದೆ ಪರ ಮಾತಾಡಿದ ಮಗುವನ್ನು ಕೊಂದ ತಾಯಿ: ಗೋಬಿ ಮಂಚೂರಿ ಕೊಡಿಸಲು ಕರೆದೊಯ್ದು ಕೊಲೆ!


Team Udayavani, Apr 8, 2021, 10:04 AM IST

ತಂದೆ ಪರ ಮಾತಾಡಿದ ಮಗುವನ್ನು ಕೊಂದ ತಾಯಿ: ಸುಳಿವು ನೀಡಿದ ವೇಲ್‌!

ಬೆಂಗಳೂರು: ತಾನು ಯಾರೊಂದಿಗೇ ಮಾತನಾಡಿದರೂ ತಂದೆಗೆ ಹೇಳುತ್ತಿದ್ದ ಮೂರು ವರ್ಷದ ಮಗಳನ್ನು ತಾಯಿಯೇ ವೇಲ್‌ನಿಂದ ಕುತ್ತಿಗೆ ಬಿಗಿದು ಹತ್ಯೆಗೈದಿರುವ ದಾರುಣ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಲ್ಲತ್ತಹಳ್ಳಿ ನಿವಾಸಿ ವೀರಣ್ಣ ಅವರ 3 ವರ್ಷದ ಪುತ್ರಿ ವಿನುತಾ ಕೊಲೆಯಾದ ಮಗು. ಕೃತ್ಯ ಎಸಗಿದ ತಾಯಿ ಸುಧಾ (28)ಗಳನ್ನು ಬಂಧಿಸಲಾಗಿದೆ.

ಚಿತ್ರದುರ್ಗ ಮೂಲದ ವೀರಣ್ಣಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳು ಇದ್ದಾರೆ. ಕೌಟುಂಬಿಕ ಕಾರಣಕ್ಕೆ ಮೊದಲ ಪತ್ನಿಯಿಂದ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಈ ಮಧ್ಯೆ ಟೋಲ್‌ಗೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸುಧಾಳನ್ನು ನಾಲ್ಕು ವರ್ಷಗಳ ಹಿಂದೆ ವೀರಣ್ಣ ಪ್ರೀತಿಸಿ ಮದುವೆಯಾಗಿದ್ದು, ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ದಂಪತಿಗೆ ಮೂರೂವರೆ ವರ್ಷದ ಹೆಣ್ಣು ಮಗು ಇತ್ತು. ವೀರಣ್ಣ ಕೂಲಿ ಕಾರ್ಮಿಕನಾಗಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ದುಡಿಯುತ್ತಿದ್ದರು. ತಿಂಡಿ ಮತ್ತು ಮಧ್ಯಾಹ್ನ ಊಟಕ್ಕೆ ಮನೆಗೆ ಬರುತ್ತಿದ್ದರು. ಸುಧಾ ಟೈಲ್ಸ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಕೆಲಸಕ್ಕೆ ಹೋಗುವಾಗ ಮಗಳನ್ನು ಕರೆದೊಯ್ಯುತ್ತಿದ್ದಳು.

ಇದನ್ನೂ ಓದಿ:ಮದುವೆಯಾಗಲು ಮನೆ ಬಿಟ್ಟು ಬರಲು ಕೇಳದ ಹಿನ್ನೆಲೆ: ಮನೆಗೆ ನುಗ್ಗಿ ಪ್ರೇಯಸಿಗೆ ಚೂರಿಯಿಂದ ಇರಿದ

ಈ ಮಧ್ಯೆ ವಿನುತಾ, ತಾಯಿ ಸುಧಾ ಯಾರೊಂದಿಗೆ ಮಾತನಾಡಿದರೂ, ಮನೆಗೆ ಯಾರೇ ಬಂದರೂ ಆಕೆಯ ಪ್ರತಿ ಚಟುವಟಿಕೆಗಳನ್ನು ತಂದೆ ವೀರಣ್ಣಗೆ ಹೇಳುತ್ತಿದ್ದಳು. ಅದೇ ವಿಚಾರವಾಗಿ ಸುಧಾ ಮಗಳ ಮೇಲೆ ದ್ವೇಷ ಸಾಧಿಸುತ್ತಿದ್ದಳು. ಜತೆಗೆ ಯಾವಾಗಲೂ ತಂದೆ ಪರವಾಗಿಯೇ ಮಾತನಾಡುತ್ತಿಯಾ ಎಂದು ಹೊಡೆಯುತ್ತಿದ್ದಳು. ಅದೇ ವಿಚಾರಕ್ಕೆ ವೀರಣ್ಣ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದರು.

ಗೋಬಿ ಮಂಚೂರಿ ಕೊಡಿಸಲು ಕರೆದೊಯ್ದು ಕೊಲೆ: ಮಂಗಳವಾರ ಮಧ್ಯಾಹ್ನ ತಂದೆ ವೀರಣ್ಣ ಮನೆಗೆ ಬಂದಾಗ ಮಗಳು ಟಿವಿ ನೋಡುತ್ತಿದ್ದಳು. ಆಕೆಯಿಂದ ರಿಮೋಟ್‌ ಪಡೆದುಕೊಂಡು ಟಿವಿ ಚಾನೆಲ್‌ ಬದಲಿಸಿದ್ದಾರೆ. ಅಲ್ಲೇ ಇದ್ದ ಆರೋಪಿ ಏಕೆ ಚಾನೆಲ್‌ ಬದಲಿಸುತ್ತಿಯಾ? ಯಾವಾಗಲೂ ನ್ಯೂಸ್‌ ಚಾನೆಲ್‌ ಅನ್ನೇ ನೋಡುತ್ತಿಯಾ. ಅದನ್ನು ನೋಡುವುದಾದರೆ ಮನೆಗೆ ಬರಬೇಡ ಎಂದು ಜಗಳ ಮಾಡಿದ್ದಾಳೆ. ಆಗ ಪುತ್ರಿ ವಿನುತಾ, ತಂದೆ ಪರವಾಗಿ ಮಾತಾಡಿ, ಅಪ್ಪ ಏನು ಬೇಕಾದರೂ ನೋಡಲಿ, ನೀನು ಯಾಕೆ ಬೈಯುತ್ತಿಯಾ ಎಂದು ಹೇಳಿದ್ದಾಳೆ. ಅದರಿಂದ ಸಿಟ್ಟಿಗೆದ್ದ ಆರೋಪಿ, ಮಗಳಿಗೆ ನಿಂದಿಸಿದ್ದಾರೆ.

ಇದನ್ನೂ ಓದಿ: ಪ್ರೀತಿ ಅಮರ …ಪ್ರೇಮಿಯ ಎರಡೂ ಕೈ, ಒಂದು ಕಾಲು ತುಂಡಾದರೂ ಪ್ರೀತಿಸಿ ಮದುವೆಯಾದಳು!

ನಂತರ ಸಂಜೆ ಪುತ್ರಿಯನ್ನು ಗೋಬಿ ಮಂಚೂರಿ ತಿನ್ನಿಸುವುದಾಗಿ ಮನೆಯಿಂದ ಹೊರಗಡೆ ಕರೆದೊಯ್ದ ಸುಧಾ, ಮಲ್ಲತ್ತಹಳ್ಳಿಯ ಕೆಲವೆಡೆ ಸುತ್ತಾಡಿಸಿದ್ದಾಳೆ. ಈ ನಡುವೆ ರಾತ್ರಿ 8 ಗಂಟೆಗೆ ವೀರಣ್ಣ ಮನೆಗೆ ಬಂದಿದ್ದು, ಮನೆ ಬೀಗ ಹಾಕಿದ್ದನ್ನು ಗಮನಿಸಿ ಸುಧಾಗೆ ಕರೆ ಮಾಡಿದ್ದಾರೆ. ಫೋನ್‌ ಸ್ವೀಕರಿಸಿದ ಸುಧಾ, ವಿನುತಾಳನ್ನು ಗೋಬಿ ಮಂಚೂರಿ ತಿನ್ನಿಸಲು ಕರೆದುಕೊಂಡು ಬಂದಿದ್ದು, ಹಣ ಕೊಡುವ ಸಂದರ್ಭದಲ್ಲಿ ಆಕೆ ಕಾಣಿಯಾಗಿದ್ದಾಳೆ ಎಂದು ಹೇಳಿದ್ದಾಳೆ. ಬಳಿಕ ಆಕೆ ಫೋನ್‌ ಸ್ವಿಚ್‌ ಆಫ್ ಆಗಿತ್ತು. ಬಳಿಕ 9.30ಕ್ಕೆ ಫೋನ್‌ ಆನ್‌ ಆದಾಗ ಮತ್ತೆ ಫೋನ್‌ ಮಾಡಿ ದಾಗ, ಮನೆ ಬಳಿ ಬರುತ್ತಿದ್ದೇನೆ ಎಂದು ಹೇಳಿದ್ದಾಳೆ. ಅನಂತರ ವೀರಣ್ಣ, ತನ್ನ ಸ್ನೇಹಿತ ಹಾಗೂ ಪತ್ನಿ ಸುಧಾಳ ಜತೆ ಜ್ಞಾನ ಭಾರತಿ ಠಾಣೆಯಲ್ಲಿ ಪುತ್ರಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ಸುಳಿವು ಕೊಟ್ಟ ವೇಲ್‌: ಬುಧವಾರ ಬೆಳಗ್ಗೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿತ್ತು. ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಅದು ವಿನುತಾಳ ಶವ ಎಂಬುದನ್ನು ಖಾತ್ರಿ ಪಡಿಸಿಕೊಂಡರು. ಅನಂತರ ವೀರಣ್ಣ ದಂಪತಿಯನ್ನು ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸುವಾಗ ಸುಧಾ ಅನುಮಾನಾಸ್ಪದ ರೀತಿಯಲ್ಲಿ ನಡೆದುಕೊಂಡಿದ್ದಾಳೆ. ಸ್ಥಳೀಯರು ಹಾಗೂ ಗೋಬಿ ಮಂಚೂರಿ ಅಂಗಡಿ ಮಾಲೀಕನ ಬಳಿ ವಿಚಾರಿಸಿದಾಗ ಆಕೆ ಪುತ್ರಿಯನ್ನು ಗೋಬಿ ಮಂಚೂರಿ ಅಂಗಡಿಗೆ ಕರೆದೊಯ್ದಿಲ್ಲ ಎಂಬುದು ಗೊತ್ತಾಗಿತ್ತು.

ಇದನ್ನೂ ಓದಿ: ನಾನೊಬ್ಬ ಬಡವ, ಬೆದರಿಕೆ ಹಾಕಿ ಕೆಲ್ಸ ಮಾಡ್ಸಿದ್ರು ಕಣ್ಣೀರು ಹಾಕಿದ KSRTC ಮೆಕಾನಿಕ್

ಬಳಿಕ ಮನೆಯಲ್ಲಿ ತಪಾಸಣೆ ನಡೆಸಿದಾಗ ಕೃತ್ಯಕ್ಕೆ ಬಳಸಿದ್ದ ವೇಲ್‌ನಲ್ಲಿ ರಕ್ತ ಅಂಟಿಕೊಂಡಿರುವುದು ಪತ್ತೆಯಾಗಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನೇ ಕೃತ್ಯ ಎಸಗಿದ್ದೇನೆ ಎಂದು ಒಪ್ಪಿಕೊಂಡಿದ್ದಾಳೆ.

“ಪುತ್ರಿ ವಿನುತಾ ಯಾವಾಗಲೂ ತಂದೆ ಪರವಾಗಿ ಮಾತಾಡುತ್ತಿದ್ದಳು. ತಂದೆ ಇಲ್ಲದ ವೇಳೆ ನಾನು ಏನೇ ಕೆಲಸ ಮಾಡಿದರೂ, ಯಾರೊಂದಿಗೇ ಮಾತನಾಡುತ್ತಿದ್ದರೂ ಅದನ್ನು ಆಕೆಯ ಅಪ್ಪನಿಗೆ ಹೇಳುತ್ತಿದ್ದಳು. ತಂದೆ ಹಾಗೂ ಬೇರೆಯವರ ಮುಂದೆ ನಿಂದಿಸುತ್ತಿದ್ದಳು. ಅದರಿಂದ ಕೋಪಗೊಂಡು ಕೊಲೆ ಮಾಡಿದ್ದೇನೆ’ ಎಂದು ಹೇಳಿಕೆ ನೀಡಿದ್ದಾಳೆ. ಆದರೂ ಕೃತ್ಯಕ್ಕೆ ಬೇರೆಯಾದರೂ ಸಹಕಾರ ನೀಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.