Theft: ಸಾಲ ತೀರಿಸಲು ತಾಯಿ ಸ್ನೇಹಿತೆ ಮನೆಗೆ ಕನ್ನ


Team Udayavani, Jan 31, 2024, 11:32 AM IST

Theft: ಸಾಲ ತೀರಿಸಲು ತಾಯಿ ಸ್ನೇಹಿತೆ ಮನೆಗೆ ಕನ್ನ

ಬೆಂಗಳೂರು: ಸಾಲ ತೀರಿಸಲು ತಾಯಿಯ ಸ್ನೇಹಿತೆ ಮನೆ ಬಾಗಿಲು ಒಡೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾ ಭರಣ ಕಳವು ಮಾಡಿದ್ದ ಮೆಕಾನಿಕಲ್‌ ಎಂಜಿನಿಯರ್‌ನನ್ನು ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಕೆ.ಪಿ.ಅಗ್ರಹಾರದ ಟೆಲಿಕಾಂ ಲೇಔಟ್‌ ನಿವಾಸಿ ಮದನ್‌ಕುಮಾರ್‌(34) ಬಂಧಿತ ಎಂಜಿನಿಯರ್‌. ಈತನಿಂದ 6.57 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನಾಭರಣ, 30 ಸಾವಿರ ರೂ. ಮೌಲ್ಯದ 458 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 1.35 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ.

ಆರೋಪಿ ಜ.17ರಂದು ಟೆಲಿ ಕಾಂ ಲೇಔಟ್‌ನಲ್ಲಿರುವ ವೃದ್ಧ ದಂಪತಿ ಮನೆಯಲ್ಲಿ ಕಳವು ಮಾಡಿದ್ದ. ಕೃತ್ಯಕ್ಕೂ ಮೊದಲು ಯುಟ್ಯೂಬ್‌, ವೆಬ್‌ ಸೀರಿಸ್‌ನಲ್ಲಿ ಕೃತ್ಯದ ಬಗ್ಗೆ ತಿಳಿದುಕೊಂಡಿದ್ದ ಎಂದು ಪೊಲೀಸರು ಹೇಳಿದರು.

ಮೆಕಾನಿಕಲ್‌ ಎಂಜಿನಿಯರ್‌ ಆಗಿರುವ ಮದನ್‌, ಕುಂಬಳಗೋಡಿನಲ್ಲಿ ಅಲ್ಯೂಮಿನಿಯಂ ಸಂಬಂಧಿತ ಕಾರ್ಖಾನೆ ನಡೆಸುತ್ತಿದ್ದ. ಕಳೆದ ವರ್ಷ ವಿದ್ಯುತ್‌ ಅವಘಡದಿಂದ ಇಡೀ ಕಾರ್ಖಾನೆ ಸುಟ್ಟು ಲಕ್ಷಾ ಂತರ ರೂ. ನಷ್ಟವಾಗಿತ್ತು. ನಷ್ಟ ಭರಿಸಲು ಹಲವರಿಂದ ಸಾಲ ಮಾಡಿದ್ದು, ತೀರಿಸಲು ಸಾಧ್ಯವಾಗಿಲ್ಲ. ಈತ ಕೂಡ ಬೇರೆ ಕೆಲಸಕ್ಕೆ ಹೋಗುತ್ತಿರಲಿಲ್ಲ. ಹೀಗಾಗಿ ಯುಟ್ಯೂಬ್‌, ವೆಬ್‌ಸೀರಿಸ್‌ಗಳನ್ನು ನೋಡಿ ಕಳ್ಳತನ ಮಾಡಲು ತೀರ್ಮಾನಿಸಿದ್ದ ಎಂದು ಪೊಲೀಸರು ಹೇಳಿದರು.

ತಾಯಿ ಸ್ನೇಹಿತೆ ಮನೆಯಲ್ಲಿ ಕಳವು: ಆರೋಪಿ ಮದನ್‌ ತಾಯಿಯ ಸ್ನೇಹಿತೆ ಟೆಲಿಕಾಂ ಲೇಔಟ್‌ನಲ್ಲಿ ಪತಿ ಜತೆ ವಾಸವಾಗಿದ್ದಾರೆ. ದಂಪತಿ ನಿತ್ಯ ಬೆಳಗ್ಗೆ 8 ಗಂ ಟೆಗೆ ವಾಯುವಿಹಾರಕ್ಕೆ ಹೋದರೆ, 10 ಗಂಟೆಗೆ ವಾಪಸ್‌ ಬರುತ್ತಿದ್ದರು. ಈ ವಿಚಾರ ತಿಳಿದಿದ್ದ ಆರೋಪಿ, ಕೈಗೆ ಗ್ಲೌಸ್‌ ಹಾಕಿ ಕೊಂಡು, ವುಡ್‌ ಕಟರ್‌ ಸಮೇತ ದಂಪತಿ ಮನೆಗೆ ಹೋಗಿದ್ದಾನೆ. ಬಳಿಕ ಬಾಗಿಲನ್ನು ವುಡ್‌ ಕಟರ್‌ನಿಂದ ಕತ್ತರಿಸಿ, ಒಳ ಹೋಗಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾ ಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಕಳವು ಮಾಡಿದ್ದಾನೆ.

ಜತೆಗೆ ಸಾಕ್ಷ್ಯನಾಶ ಪಡಿಸುವ ಉದ್ದೇಶ ದಿಂದ ಮನೆಯಲ್ಲಿ ಖಾರದ ಪುಡಿ ಎರಚಿ. ಸಿಸಿ ಕ್ಯಾಮೆರಾದ ಡಿವಿಆರ್‌ ಕದ್ದು ಸ್ಥಳ ದಿಂದ ಪರಾರಿಯಾಗಿದ್ದ. ಕೆಲ ಹೊತ್ತಿನ ಬಳಿಕ ವೃದ್ಧ ದಂಪತಿ ಮನೆಗೆ ಬಂದಾಗ ಕಳವು ಕೃತ್ಯ ಬೆಳಕಿಗೆ ಬಂದಿತ್ತು. ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆ ಸಿದ ಕೆ.ಪಿ.ಅಗ್ರಹಾರ ಠಾಣಾಧಿಕಾರಿ ರವಿ ಪ್ರಕಾಶ್‌ ನೇತೃತ್ವದ ತಂಡ  ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು.

 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.