ಪ್ರಧಾನಮಂತ್ರಿ ಕೌಶಲ್ಯ ಕೇಂದ್ರಕ್ಕೆ ಸಂಸದ ತೇಜಸ್ವಿ ಸೂರ್ಯ ಚಾಲನೆ
Team Udayavani, Jan 9, 2020, 3:05 AM IST
ಬೆಂಗಳೂರು: ಯುವಕರಿಗೆ ಹೆಚ್ಚಿನ ಉದ್ಯೋಗ ನೀಡುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಶೀಘ್ರವೇ “ಬೃಹತ್ ಉದ್ಯೋಗ ಮೇಳ’ ಹಮ್ಮಿಕೊಳ್ಳುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಬಸವನಗುಡಿಯ ಅಬಲಾಶ್ರಮದಲ್ಲಿ ಬುಧವಾರ “ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ’ ಉದ್ಘಾಟಿಸಿ ಮಾತನಾಡಿ, ಹತ್ತರಿಂದ ಹದಿನೈದು ಸಾವಿರ ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಜನಸಂಖ್ಯೆಯ ಶೇ.45ರಷ್ಟು 15ರಿಂದ 30 ವರ್ಷದ ಯುವಜನರನ್ನು ಹೊಂದಿರುವ ಬೆಂಗಳೂರು ಯುವ ಸಿಟಿ ಎಂದು ಕರೆಸಿಕೊಂಡಿದೆ. ಆ ಹಿನ್ನೆಲೆಯಲ್ಲಿ ಯುವಕರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ಹಲವು ಕ್ಷೇತ್ರಗಳಲ್ಲಿ ಉದ್ಯೋಗಗಳು ಖಾಲಿ ಇವೆ. ಆದರೆ ಆ ಉದ್ಯೋಗಗಳಿಗೆ ಬೇಕಾದ ಕೌಶಲ್ಯ ಹಲವರಲ್ಲಿ ಇಲ್ಲ ಎಂಬ ಮಾತು ಕೇಳಿ ಬರುತ್ತಿವೆ.
ಆ ದೃಷ್ಟಿಯಿಂದ ಪದವಿ ಕೋರ್ಸ್ಗಳ ಜತೆಗೆ ಕೌಶಲ್ಯ ತರಬೇತಿಗಳಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು. ಅಬಲಾಶ್ರಮದಲ್ಲಿ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ಆಗಲು ಮಾಜಿ ಕೇಂದ್ರ ಸಚಿವ, ದಿವಂಗತ ಅನಂತಕುಮಾರ್ ಕಾರಣರಾಗಿದ್ದಾರೆ. ಅವರ ಆಸೆಯಂತೆ ಅಬಲಾಶ್ರಮದಲ್ಲಿ ಕೇಂದ್ರ ತೆರೆಯಲಾಗಿದ್ದು, ಯುವಕರು ಇದರ ಉಪಯೋಗ ಪಡೆಯುವಂತೆ ಸಲಹೆ ನೀಡಿದರು.
ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾತನಾಡಿ, ತಂತ್ರಜ್ಞಾನ ಕ್ಷೇತ್ರ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಪ್ರಗತಿಕಂಡಿದೆ. ಆ ಹಿನ್ನೆಲೆಯಲ್ಲಿ ಯುವ ಸಮುದಾಯ ಪದವಿ ಪಡೆದರಷ್ಟೇ ಸಾಲದು. ಕೌಶಲ್ಯ ತರಬೇತಿಗೂ ಆದ್ಯತೆ ನೀಡಬೇಕು. ಅನಂತಕುಮಾರ್ ಅವರು ಅಬಲಾಶ್ರಮದಲ್ಲಿಯೇ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಸ್ಥಾಪಿಸಬೇಕು ಎಂಬ ಕನಸು ಕಂಡಿದ್ದರು.
ಅಲ್ಲದೆ ಸಂಬಂಧಪಟ್ಟ ಸಚಿವರ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದರು ಎಂದರು. ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ನಿಗಮದ ಮೇಲ್ವಿಚಾರಣಾಧಿಕಾರಿ ಕ್ಯಾಪ್ಟನ್ ಕೌಸ್ತವ್ ನಾಥ್ ಮಾತನಾಡಿದರು. ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ, ಉದಯ್ ಬಿ. ಗರುಡಾಚಾರ್, ಮಾಜಿ ಮಹಾಪೌರ ಕಟ್ಟೆ ಸತ್ಯನಾರಾಯಣ, ಅಬಲಾಶ್ರಮದ ಅಧ್ಯಕ್ಷೆ ಡಾ. ವಿಜಯಲಕ್ಷ್ಮೀ ದೇಶ್ಮಾನೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ