![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮುಖ್ಯಪೇದೆ, ಎಎಸ್ಐಗೆ ಚಾರ್ಜ್ಶೀಟ್ ಹೊಣೆ
Team Udayavani, Apr 11, 2017, 12:25 PM IST
![rupak.jpg](https://www.udayavani.com/wp-content/uploads/2017/04/11/rupak.jpg)
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕ್ ಕುಮಾರ್ ದತ್ತಾ ಅವರು ಸೋಮವಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಎಎಸ್ಐ ಹಾಗೂ ಹೆಡ್ಕಾನ್ಸ್ಟೆಬಲ್ಗಳಿಗೂ ಎಫ್ಐಆರ್ ದಾಖಲಿಸುವದರ ಜತೆಗೆ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸುವ ಹೊಣೆ ನೀಡಿದ್ದಾರೆ.
ಈ ಹಿಂದೆ ಸಬ್ಇನ್ಸ್ಪೆಕ್ಟರ್ ಮತ್ತು ಅವರಿಗೂ ಮೇಲ್ಪಟ್ಟ ಅಧಿಕಾರಿಗಳಿಗೆ ಮಾತ್ರ ಚಾರ್ಜ್ಶೀಟ್ ಸಲ್ಲಿಸುವ ಅಧಿಕಾರವಿತ್ತು. ಸದ್ಯದ ಆದೇಶದ ಪ್ರಕಾರ ಠಾಣೆಯ ಎಎಸ್ಐ ಹಾಗೂ ಹೆಡ್ಕಾನ್ಸ್ಟೆಬಲ್ ಕೂಡ ಸಾಧಾರಣ ರಸ್ತೆ ಅಪಘಾತ ಹಾಗೂ ಸಣ್ಣ-ಪುಟ್ಟ ಹಲ್ಲೆ ಪ್ರಕರಣಗಳ ಪ್ರಾಥಮಿಕ ತನಿಖಾ ವರದಿ ಸಿದ್ಧಪಡಿಸಿ, ಚಾರ್ಜ್ಶೀಟ್ ಸಲ್ಲಿಸಬಹುದು.
ಹಿರಿಯ ಅಧಿಕಾರಿಗಳ ಮೇಲೆನ ಹೊರೆ ಇಳಿಕೆ: ರಾಜ್ಯ ಪೊಲೀಸ್ ಇಲಾಖೆಯ ಇತಿಹಾಸದಲ್ಲೇ ಇದೊಂದು ಮಹತ್ತರ ನಿರ್ಧಾರಾಗಿದ್ದು, ಈ ಕ್ರಮದಿಂದ ಹಿರಿಯ ಅಧಿಕಾರಿಗಳ ಮೇಲಿನ ಕೆಲಸದೊತ್ತಡ ಕಡಿಮೆಯಾಗಲಿದೆ. ಪೊಲೀಸ್ ಇಲಾಖೆಯಲ್ಲಿರುವ ಶೇ.90ರಷ್ಟು ಮಂದಿ ಎಎಸ್ಐ ಮತ್ತು ಹೆಡ್ಕಾನ್ಸ್ಟೆಬಲ್ಗಳು ಪದವಿಧರರಾಗಿದ್ದು, ಅವರಲ್ಲಿರುವ ಜ್ಞಾನವನ್ನು ಈ ಮೂಲಕ ಬಳಸಿಕೊಳ್ಳಲು ಸಾಧ್ಯವಿದೆ.
ಜತೆಗೆ ಹಿರಿಯ ಅಧಿಕಾರಿಗಳ ನಡುವಿನ ಅಧಿಕಾರದ ಅಂತರ ಕಡಿಮೆ ಮಾಡಲು ಮತ್ತು ಪ್ರಕರಣಗಳನ್ನು ನಿರ್ವಹಿಸುವ ಅನುಭವವನ್ನು ಹೆಚ್ಚಿಸುವ ಸಲುವಾಗಿ ಈ ನಿರ್ಧಾರಕೈಗೊಳ್ಳಲಾಗಿದೆ. ಈ ರೀತಿ ಸಿಬ್ಬಂದಿಯಲ್ಲಿ ಉತ್ತೇಜನ ನೀಡುವುದರಿಂದ ಮುಂದಿನ ದಿನಗಳಲ್ಲಿ ಇಲಾಖೆಯಲ್ಲಿ ದಕ್ಷ ಹಾಗೂ ಉತ್ತಮ ಅಧಿಕಾರಿಗಳ ಸೇವೆ ಇಲಾಖೆಗೆ ದೊರೆಯಲಿದೆ ಎಂದು ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಉದಯವಾಣಿಗೆ ತಿಳಿಸಿದರು.
ಯ್ನಾವ್ಯಾವ ಪ್ರಕರಣಗಳು?: ಸಾಧಾರಣ ರಸ್ತೆ ಅಪಘಾತ(ಐಪಿಸಿ 279, 377). ಹಲ್ಲೆ, ದರೋಡೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಅವರೇ ಚಾರ್ಜ್ಶೀಟ್ ಸಲ್ಲಿಸಬಹುದಾಗಿದೆ. ಇದಕ್ಕೆ ಹಿರಿಯ ಅಧಿಕಾರಿಗಳ ಮಾಗದರ್ಶನವು ಇರಲಿದೆ.
ಸಿಬ್ಬಂದಿಯ ಪ್ರೋತ್ಸಾಹಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಎಎಸ್ಐ, ಹೆಡ್ಕಾನ್ಸ್ಟೆಬಲ್ಗಳು ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಬಹುದು. ಇದರಿಂದ ಭವಿಷ್ಯದಲ್ಲಿ ಇಲಾಖೆ ಬಹಳ ಉಪಯೋಗವಾಗಲಿದೆ.
-ಆರ್.ಕೆ.ದತ್ತಾ, ಪೊಲೀಸ್ ಮಹಾನಿರ್ದೇಶಕ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.