ವರ್ಚುವಲ್‌ ಕೆಂಪೇಗೌಡ ಜಯಂತಿಗೆ ಪಾಲಿಕೆ ಸಜ್ಜು

ಸೆ.10ಕ್ಕೆ ಜಯಂತಿ ಆಚರಿಸಲು ಬಿಬಿಎಂಪಿ ನಿರ್ಧಾರ

Team Udayavani, Sep 4, 2020, 11:28 AM IST

ವರ್ಚುವಲ್‌ ಕೆಂಪೇಗೌಡ ಜಯಂತಿಗೆ ಪಾಲಿಕೆ ಸಜ್ಜು

ಬೆಂಗಳೂರು: ಪಾಲಿಕೆ ಪ್ರತಿ ವರ್ಷ ನಡೆಸುವ ನಾಡಪ್ರಭು ಕೆಂಪೇಗೌಡ ಜಯಂತಿ ಈ ಬಾರಿ ವರ್ಚುವಲ್‌ ಮೂಲಕ ನಡೆಯುವ ಸಾಧ್ಯತೆ ಇದೆ. ಸೆ.2ಕ್ಕೆ ಕೆಂಪೇಗೌಡ ಜಯಂತಿ ಆಚರಣೆ ಮಾಡುವುದು ಎಂದು ನಿರ್ಧರಿಸಲಾಗಿತ್ತು. ಆದರೆ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಹೀಗಾಗಿ, ಕೆಂಪೇಗೌಡ ಜಯಂತಿಯನ್ನು ಸೆ.10ಕ್ಕೆ ಪಾಲಿಕೆ ಮುಂದೂಡಿದೆ.

ಸೆ.10ಕ್ಕೆ ಮೇಯರ್‌ ಎಂ.ಗೌತಮ್‌ಕುಮಾರ್‌ ಸೇರಿದಂತೆ ಪಾಲಿಕೆಯ ಎಲ್ಲ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿದೆ. ಇದರ ಒಳಗಾಗಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಪಾಲಿಕೆಯ ಸದಸ್ಯರು ಒತ್ತಡ ಹೇರಿದ ಹಿನ್ನೆಲೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಮೇಯರ್‌ ಎಂ.ಗೌತಮ್‌ಕುಮಾರ್‌ ಅವರ ನೇತೃತ್ವದ ಸಮಿತಿ ನಿರ್ಣಯ ತೆಗೆದುಕೊಂಡು 20 ಜನ ಕೋವಿಡ್ ವಾರಿಯರ್ಸ್‌ಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಆನ್‌ಲೈನ್‌ ಮೂಲಕ ಕಾರ್ಯಕ್ರಮ: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಹೆಚ್ಚು ಜನ ಸೇರಿ ಸಭೆ- ಸಮಾರಂಭ ನಡೆಸುವಂತಿಲ್ಲ. ಆನ್‌ಲಾಕ್‌ -4 ಸೆ.21ರ ನಂತರ ಸಡಿಲಿಕೆಯಾಗಲಿದೆ. ಆದರೆ, ಈ ವೇಳೆಗೆ ಪಾಲಿಕೆ ಸದಸ್ಯರ ಅಧಿಕಾರ ಇರುವುದಿಲ್ಲ. ಹೀಗಾಗಿ, ಹೆಚ್ಚು ಜನ ಸೇರದಂತೆ ಮೇಯರ್‌, ಉಪಮೇಯರ್‌, ಆಡಳಿತ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಸಮಿತಿ ಅಧ್ಯಕ್ಷರು ಹಾಗೂ ಪ್ರಶಸ್ತಿ ಪುರಸ್ಕೃತರು ಮಾತ್ರ ಸಭೆಯಲ್ಲಿ ಹಾಜರಿದ್ದು, ಉಳಿದವರು ವರ್ಚವಲ್‌ ಮೂಲಕ ಹಾಜರಾಗಲಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಮೇಯರ್‌ ಎಂ. ಗೌತಮ್‌ಕುಮಾರ್‌, ಕೋವಿಡ್ ಭೀತಿಯಿಂದಾಗಿ ಹೆಚ್ಚು ಜನ ಸೇರದಂತೆ ಕೆಂಪೇಗೌಡ ಜಂಯತಿ ಸಮಾರಂಭ ಹಾಗೂ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯರು ಆಯಾ ವಾರ್ಡ್‌ನಲ್ಲಿಯೇ ಉಪಸ್ಥಿತರಿದ್ದು, ವರ್ಚುವಲ್‌ ಮೂಲಕ ಸಹಭಾಗಿತ್ವ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಕೋವಿಡ್‌ ಕಾರಣದಿಂದ ಇದೇ ಮೊದಲ ಬಾರಿಗೆ ಪಾಲಿಕೆಯ ಬಜೆಟ್‌ಅನ್ನು ಆನ್‌ಲೈನ್‌ನ ಮೂಲಕ ಮಂಡನೆ ಮಾಡಲಾಗಿತ್ತು. ಅಲ್ಲದೆ, ಹಲವು ಪಾಲಿಕೆ ಸಭೆಯನ್ನೂ ಆನ್‌ಲೈನ್‌ನ ಮೂಲಕ ಮಾಡಲಾಗಿತ್ತು. ಇದೀಗ ಕೆಂಪೇಗೌಡ ಜಯಂತಿಯೂ ಆನ್‌ಲೈನ್‌(ವರ್ಚುವಲ್‌)ನ ಮೂಲಕವಾದರೆ ಹೊಸ ದಾಖಲೆ ಸೃಷ್ಟಿಯಾಗಲಿದೆ.

8ಕ್ಕೆ ಪಾಲಿಕೆಯ ಕೊನೆಯ ಕೌನ್ಸಿಲ್‌ : ಪಾಲಿಕೆಯ ಕೊನೆಯ ಕೌನ್ಸಿಲ್‌ ಸಭೆ ನಡೆಸಲು ಪಾಲಿಕೆ ನಿರ್ಧರಿಸಿದೆ. ಬಹುತೇಕ ಈ ಅವಧಿಯಲ್ಲಿ ಪ್ರಮುಖ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇಲ್ಲ. ಪಾಲಿಕೆ ಸದಸ್ಯರ ಅಧಿಕಾರ ಅವಧಿಯೇ ಸೆ.10ಕ್ಕೆ ಮುಗಿಯಲಿದೆ. ಕೊನೆಯ ಸಭೆಯಲ್ಲಿ ಪ್ರಮುಖ ನಿರ್ಣಯ ತೆಗೆದುಕೊಂಡರೂ, ಅದನ್ನು ಅನುಷ್ಠಾನ ಮಾಡಲು ಪಾಲಿಕೆ ಸದಸ್ಯರಿಗೆ ಅಧಿಕಾರ ಇರುವುದಿಲ್ಲ. ಹೀಗಾಗಿ, ಪ್ರಮುಖ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.