ಮುನಿರತ್ನ ಬಹಳ ಕಿಲಾಡಿ, ಗೋಪಾಲಯ್ಯ ನ್ಯಾಷನಲ್ ಹೈವೇ ಇದ್ದಂಗೆ: ಸಿಎಂ ಬೊಮ್ಮಾಯಿ

ಸಚಿವ ದ್ವಯ ರನ್ನು ಹಾಡಿ ಹೊಗಳಿದ ಸಿಎಂ

Team Udayavani, Jul 17, 2022, 2:50 PM IST

1-ss-sa

ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭೆ ಕ್ಷೇತ್ರದ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಬಳಿ ಬಸವಧಾಮ ಉದ್ಯಾನವನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸವೇಶ್ವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ‌, ಇಂದಿನ ಈ ಎಲ್ಲಾ ಕಾರ್ಯಕ್ರಮ ಈ ಕ್ಷೇತ್ರದ ಅಭಿವೃದ್ಧಿಗೆ ಸಾಕ್ಷಿ.ಇಂದು ಅತ್ಯಂತ ಪುಣ್ಯದ ದಿನ. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಬಸವಣ್ಣ ಮೂರ್ತಿ ಅನಾವರಣ, ಶಿವಕುಮಾರ ಸ್ವಾಮೀಜಿ ಪೂರ್ತಿ ಅನಾವರಣ ಮಾಡಲಾಗಿದೆ. ಮೇರು ನಟ ನನ್ನ ಪುನೀತ್ ರಾಜ್‍ಕುಮಾರ್ ಹೆಸರು ವಾರ್ಡ್ ಗೆ ಇಟ್ಟು ಕಾರ್ಯಕ್ರಮ ಮಾಡಿದ್ದು, ಪುಣ್ಯದ ದಿನ. ಎಲ್ಲಾ ರಂಗದಲ್ಲಿ ಬೆಂಗಳೂರು ಬೆಳೆಯುತ್ತಿದೆ. ಜನಸಂಖ್ಯೆ ಬೆಳೆಯುತ್ತಿದ್ದಂತೆ ಸೌಲಭ್ಯ ಕೊಡಬೇಕಾಗಿದ್ದು ಮುಖ್ಯ. ಸಿಎಂ ಆದ ತಕ್ಷಣ ಬೆಂಗಳೂರು ಅಭಿವೃದ್ಧಿಗೆ 6 ಸಾವಿರ ಕೋಟಿ ಕೊಟ್ಟಿದ್ದೇನೆ. ಬೆಂಗಳೂರು ರಾಜಕಾಲುವೆ ಸ್ಥಿತಿಗೆ 1600 ಕೋಟಿ ಅನುದಾನ ನೀಡಿದ್ದೇನೆ.15 ಸಾವಿರ ಕೋಟಿ ಅನುದಾನಲ್ಲಿ ಸಬರ್ ಬನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ ಎಂದರು.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಅಭಿವೃದ್ಧಿ ಹೇಗಿದೆ ಅಂದರೆ ಅವರ ದೇಹ ಎಷ್ಟು ದೊಡ್ಡದಿದೆ, ಈ ಕ್ಷೇತ್ರದ ಜನರ ಬಗ್ಗೆಯೂ ಅಷ್ಟೇ ಕಾಳಜಿ ಇದೆ. ಕೋವಿಡ್ ವೇಳೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ.ಬಡವರ ಪಾಲಿಗೆ ಆಧಾರವಾಗಿ ನಿಂತಿರುವ ಹೃದಯವಂತ ಗೋಪಾಲಯ್ಯ.ಸಣ್ಣ ಸಣ್ಣ ವಿಚಾರಕ್ಕೆ ಗೋಪಾಲಯ್ಯ ಗಮನಿಸುತ್ತಾರೆ. ದೋಭಿಘಾಟ್ ಸ್ಥಾಪನೆ ಆಗಿದೆ.ಬಡವರ ಬಗ್ಗೆಯೂ ಬಹಳ ಕಾಳಜಿ ಇದೆ. ಮುನಿರತ್ನ ಕೂಡ ಗೋಪಾಲಯ್ಯಗೆ ಸಾಥ್ ಕೊಡುತ್ತಾರೆ ಎಂದರು.

ಮುನಿರತ್ನ ಬಹಳ ಕಿಲಾಡಿ, ಗೋಪಾಲಯ್ಯ ನ್ಯಾಷನಲ್ ಹೈವೇ ಇದ್ದಂಗೆ : ಸಿಎಂ ಬೊಮ್ಮಾಯಿ

ಮುನಿರತ್ನ ಬಹಳ ಕಿಲಾಡಿ, ಗೋಪಾಲಯ್ಯ ನ್ಯಾಷನಲ್ ಹೈವೇ ಇದ್ದಂಗೆ. ಈ ಹೈವೇಗೆ ಯಾವೇಲ್ಲಾ ರೋಡ್ ಸಂಪರ್ಕ ಆಗುತ್ತದೋ, ಅದೆಲ್ಲಾ ಮುನಿರತ್ನ ರಸ್ತೆಗಳು. ಬೆಂಗಳೂರು ಅಭಿವೃದ್ಧಿಯಲ್ಲಿ ಶಿಕ್ಷಣ, ಆರೋಗ್ಯ ಅಷ್ಟೇ ಅಲ್ಲ, ಕೆರೆ ಅಭಿವೃದ್ಧಿಗೂ ಹಣ ನೀಡಿದ್ದೇವೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತಿದ್ದೇವೆ.ಬೆಂಗಳೂರು ಪ್ರತಿ ವಾರ್ಡ್ ನಿಮ್ಮ ಪ್ರತಿನಿಧಿ ಇರಬೇಕು. ಅಭಿವೃದ್ಧಿ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಸಿಎಂ ಹೇಳಿದರು.

ಸಮಾರಂಭದಲ್ಲಿ ತುಮಕೂರಿನ ಸಿದ್ದಗಂಗಾಮಠದ ಸಿದ್ದಲಿಂಗ ಸ್ವಾಮಿಗಳು ಉಪಸ್ಥಿತರಿದ್ದರು.

ಬಾಲಗಂಗಾಧರ ನಾಥ ಸ್ವಾಮೀಜಿ ಗಳ ಉದ್ಯಾನವನಕ್ಕೆ ಸಿಎಂ ಗುದ್ದಲಿ ಪೂಜೆ ನೆರವೇರಿಸಿದರು. ಮೇಲು ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿಗಳ ನಗರೋತ್ಥನ ಯೋಜನೆ ಯಡಿ ನಿರ್ಮಿಸಿರುವ ಉದ್ದೇಶಿಸಿರುವ ಸೇತುವೆ, ಹೊರ ವರ್ತುಲ ರಸ್ತೆಯಿಂದ ಪಶ್ಚಿಮ ಕಾರ್ಡ್ ರಸ್ತೆಗೆ ( ಕುರುಬರಹಳ್ಳಿ ಪೈಪ್ ಲೈನ್ ರಸ್ತೆ ಮಾರ್ಗವಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಲ್ಸುತುವೆ) ಜತೆಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಲಿಯಿಂದ ನಿರ್ಮಿಸಿರುವ ಮನೆಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಸಲಾಯಿತು.

ಕೇಳಿದಷ್ಟು ಅನುದಾನ

ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರಿದ ನಂತರ ನನಗೆ ಮುಖ್ಯಮಂತ್ರಿಗಳು ಕೇಳಿದಷ್ಟು ಅನುದಾನ ಕೊಟ್ಟಿದ್ದಾರೆ. ಅತಿ ಹೆಚ್ಚು ಬಹುಮತದೊಂದಿಗೆ ನನ್ನ ಗೆಲ್ಲಿಸಿ ಕಳುಹಿಸಿದ್ದೀರಿ. ಮುಂದೆ ಬರುವ ಬಿಬಿಎಂಪಿ ಚುನಾವಣೆ ಯಲ್ಲಿ9 ಜನರನ್ನು ಗೆಲ್ಲಿಸುವ ಜವಬ್ದಾರಿ ತೆಗೆದುಕೊಳ್ಳುತ್ತೇನೆ. ನನ್ನ ನಂಬಿ, ಮುಖ್ಯಮಂತ್ರಿ ಗಳು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಉಸ್ತುವಾರಿ ಕೊಟ್ಟಿದ್ದಾರೆ. ನಿಮ್ಮ‌ನಂಬಿಕೆಗೆ ತಕ್ಕಂತೆ ನಾನು ಕೆಲಸ ಮಾಡುತ್ತೇನೆ. ಜತೆಗೆ ಮುಂದಿನ ಚುನಾವಣೆ ಯಲ್ಲಿ ಅತಿಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.