ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರ್ತೇವೆ …


Team Udayavani, Apr 27, 2018, 6:00 AM IST

Mur.jpg

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಬೇರು ಭದ್ರವಾಗಿ ಬೇರೂರಿದ್ದು ಪ್ರಧಾನಿ ನರೇಂದ್ರಮೋದಿ ಅಲೆ ಹಾಗೂ ಬಿ.ಎಸ್‌.ಯಡಿಯೂರಪ್ಪ ವರ್ಚಸ್ಸು ಕಾರ್ಯಕರ್ತರು- ಮುಖಂಡರ ಶ್ರಮದಿಂದ ಈ ಬಾರಿ ನಿಶ್ಚಿಚಿತವಾಗಿಯೂ ಗುರಿ ತಲಪಲಿದ್ದೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್‌ರಾವ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷದ ಹಿಂದೆಯೇ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡು ಚುನಾವಣಾ ಸಿದ್ಧತೆ, ಕಾರ್ಯತಂತ್ರ, 224 ಕ್ಷೇತ್ರಗಳ ಟಿಕೆಟ್‌ ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಮುರಳೀಧರ್‌ರಾವ್‌ “ಉದಯವಾಣಿ’ಗೆ ನೀಡಿರುವ ಸಂದರ್ಶನದಲ್ಲಿ, ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ ತೀವ್ರವಾಗಿದ್ದು ಸಮೀಕ್ಷೆಗಳು ಏನೇ ಹೇಳಿದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಟಿಕೆಟ್‌ ಹಂಚಿಕೆಯ ನಂತರ ಬಿಜೆಪಿ ಸ್ಥಿತಿ ಹೇಗಿದೆ?
        ತುಂಬಾ ಚೆನ್ನಾಗಿದೆ. ಆದೇ ವಿಶ್ವಾಸದಲ್ಲೇ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಹೇಳುತ್ತಿದ್ದೇನೆ.

ಟಿಕೆಟ್‌ ಹಂಚಿಕೆಯಲ್ಲಿ ಬಂಡಾಯ ಹೆಚ್ಚಾಯಿತಲ್ಲಾ?
        ಕಾಂಗ್ರೆಸ್‌ಗೆ ಹೋಲಿಸಿದರೆ ನಮ್ಮ ಬಂಡಾಯ ಹೆಚ್ಚೇನಲ್ಲ.  ಈಗಾಗಲೇ ಬಹುತೇಕ ಕಡೆ ಟಿಕೆಟ್‌ ಸಿಗದೆ ಅಸಮಾಧಾನ
ಗೊಂಡಿರುವವರನ್ನು ಸಮಾಧಾನ ಮಾಡಿದ್ದೇವೆ.

ರೇವುನಾಯಕ್‌ ಬೆಳಮಗಿ, ಎಸ್‌.ಕೆ.ಬೆಳ್ಳುಬ್ಬಿಯಂತಹ ನಾಯಕರು ಪಕ್ಷ ಬಿಟ್ಟರಲ್ಲ?
        ಮಾಲೀಕಯ್ಯ ಗುತ್ತೇದಾರ್‌, ಮಲ್ಲಿಕಾರ್ಜುನ ಖೂಬಾ, ಮಾನಪ್ಪ ವಜ್ಜಲ್‌, ಶಿವರಾಜ್‌ ಪಾಟೀಲ್‌, ಎ.ಎಸ್‌.ಪಾಟೀಲ್‌ ನಡಹಳ್ಳಿ ಇವರೆಲ್ಲಾ ಬಂದಿದ್ದು ಯಾಕೆ ನೀವು ಹೇಳಲ್ಲ

ಹಾಗಾದರೆ ನಿಮ್ಮ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಇತ್ತಾ?
        ಇಲ್ಲಿ ಕೊರತೆ ಎಂಬ ಪ್ರಶ್ನೆ ಬರುವುದಿಲ್ಲ. ಚುನಾವಣೆ ಎಂದರೆ ಕಾರ್ಯತಂತ್ರ. ಎಲ್ಲರೂ ಗೆಲ್ಲುವ ಮಾನದಂಡ ಇಟ್ಟುಕೊಂಡೇ ಇರುತ್ತಾರೆ. ಹಾಗೆಂದು ಸಾರಾಸಗಟಾಗಿ ಬಂದವರಿಗೆಲ್ಲಾ ಸ್ವಾಗತ ಕೋರಿಲ್ಲ. ಒಂದು ಮಾತು ನೆನಪಿಡಿ ಬಿಜೆಪಿ ಸೇರಲು ಬಯಸಿದ್ದವರ ಪಟ್ಟಿ ದೊಡ್ಡದಿತ್ತು.

ಬಂಡಾಯದಿಂದ ಬಿಜೆಪಿಗೆ ನಷ್ಟವೇ ಆಗಿಲ್ಲವಾ?
         ಆಗಿದೆ. ಆದರೆ ಗುರಿ ತಲುಪಲು ಅಡ್ಡಿಯಾಗುವಷ್ಟಲ್ಲ, ನಮ್ಮಿಂದ ಬೇರೆ ಪಕ್ಷಕ್ಕೆ ಹೋದವರಿಗಿಂತ ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಸಿದ್ಧಾಂತ, ಮೋದಿ ಹಾಗೂ ಯಡಿಯೂರಪ್ಪ ನಾಯಕತ್ವ ಒಪ್ಪಿ ಬಂದಿರುವವರು ಹೆಚ್ಚಾಗಿದ್ದಾರೆ. ಹೀಗಾಗಿ, ಬಂಡಾಯ ತಾತ್ಕಾಲಿಕ. ನಮ್ಮದು ಕೇಡರ್‌ ಬೇಸ್ಡ್ ಪಕ್ಷ. ಪಕ್ಷ ಬಿಟ್ಟವರೊಂದಿಗೆ ಬಿಜೆಪಿಯ ಕಾರ್ಯಕರ್ತರು ಹಾಗೂ ಮತಗಳು ವರ್ಗಾವಣೆಯಾಗುವುದಿಲ್ಲ.

ಕರ್ನಾಟಕದಲ್ಲಿ ನಿಮ್ಮ ನೇರ ಸ್ಪರ್ಧಿ ಯಾರು?
         ಶೇಕಡ 100 ಕ್ಕೆ 100 ರಷ್ಟು ಕಾಂಗ್ರೆಸ್‌.

ಹಾಗಾದರೆ ಜೆಡಿಎಸ್‌ ಬಗ್ಗೆ ಮೃಧು ಧೋರಣೆಯೇ?
         ಹಾಗೇನಿಲ್ಲ. ಕಾಂಗ್ರೆಸ್‌ ಇಲ್ಲಿ ಐದು ವರ್ಷ ಆಡಳಿತ ನಡೆಸಿ ಭ್ರಷ್ಟಾಚಾರ, ಹಗರಣ, ಕಾನೂನು ಸುವ್ಯವಸ್ಥೆಯಲ್ಲಿ ವೈಫ‌ಲ್ಯ, ಅತ್ಯಾಚಾರ, ಕೊಲೆ, ಗೂಂಡಾಗಿರಿ ಸೇರಿ ಅಪರಾಧ ಪ್ರಕರಣಗಳ ಹೆಚ್ಚಳವಾಗುವಂತೆ ಮಾಡಿದೆ. ನಾವು ಇನ್ಯಾರ ವಿರುದ್ಧ ಹೋರಾಟ ಮಾಡಬೇಕು. ದೇಶವ್ಯಾಪಿ ನಾವು ಕಾಂಗ್ರೆಸ್‌ ಮುಕ್ತ ಭಾರತಕ್ಕಾಗಿ ಹೋರಾಟ ಮಾಡುತ್ತಿದ್ದೇವೆ.

ನೀವು ಭ್ರಷ್ಟಾಚಾರದ ಬಗ್ಗೆ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದ್ದೀರಿ. ಆದರೆ, ಅವೆಲ್ಲವೂ ನಿರಾಧಾರ ಎಂದು ಕಾಂಗ್ರೆಸ್‌ ಹೇಳುತ್ತಿದೆಯಲ್ಲಾ?
         ಹೇಳಲಿ. ನಾವು ದಾಖಲೆ ಸಮೇತ ಇವರ ವೈಫ‌ಲ್ಯ ಜನರ ಮುಂದಿಡುತ್ತಿದ್ದೇವೆ. ಇವರು ಅದು ಸುಳ್ಳು ಎಂಬುದನ್ನು ಸಾಬೀತುಪಡಿಸಲಿ. ಅದು ಬಿಟ್ಟು ಪ್ರಧಾನಿ ನರೇಂದ್ರಮೋದಿ ಉತ್ತರದಿಂದ ಆಮದು ಮಾಡಿಕೊಂಡಿದ್ದೀರಿ, ಗುಜರಾತ್‌ನಲ್ಲೇನಾಗಿದೆ, ಉತ್ತರಪ್ರದೇಶದಲ್ಲೇನಾಗಿದೆ ಎಂದು ವಿಷಯಾಂತರ ಮಾಡುವುದು ಯಾಕೆ? ಕಾಂಗ್ರೆಸ್‌ನವರಿಗೆ ಬಿಜೆಪಿ ವಿರುದ್ಧ ಮಾತನಾಡಲು ವಿಷಯಗಳೇ ಇಲ್ಲ.

ನೀವು ಕಾಂಗ್ರೆಸ್‌ಗಿಂತ ಹೆಚ್ಚಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿದ್ದೀರಲ್ಲಾ?
          ಸಹಜ. ಕಾಂಗ್ರೆಸ್‌ ನೇತೃತ್ವದ ಸರ್ಕಾರದ ನಾಯಕತ್ವ ವಹಿಸಿರುವವವರು ಸಿದ್ದರಾಮಯ್ಯ. ಅವರೇ ಉತ್ತರಿಸಬೇಕಲ್ಲವೇ? ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಪ್ರತಿಯೊಂದಕ್ಕೂ ನರೇಂದ್ರಮೋದಿ ಹೆಸರು ಪ್ರಸ್ತಾಪಿಸುವುದಿಲ್ಲವೇ?

ಗಣಿ ಹಗರಣದ  ಆರೋಪ ಹೊತ್ತ ಜನಾರ್ಧನರೆಡ್ಡಿ ಅವರು ಬಿಜೆಪಿ ಪರ ಪ್ರಚಾರ ಮಾಡುವುದರಿಂದ ಮುಜುಗರ ಆಗುವುದಿಲ್ಲವೇ?
          ನೋಡಿ, ಪದೇ ಪದೇ ನೀವು ಅದೇ ಪ್ರಶ್ನೆ ಕೇಳುತ್ತೀರಿ. ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ರೆಡ್ಡಿ ಇದ್ದಾರಾ? ಶ್ರೀರಾಮುಲು ಅವರ ಸ್ನೇಹಿತ, ಆ ಕಾರಣಕ್ಕೆ ಅವರ ಪರ ಪ್ರಚಾರ ಮಾಡಬಹುದು. ಅದಕ್ಕೂ ನಮಗೂ ಏನು ಸಂಬಂಧ.

ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್‌ ಯಾಕೆ ನಿರಾಕರಿಸಲಾಯಿತು?
          ಈಗಾಗಲೇ ಯಡಿಯೂರಪ್ಪ ಅವರು  ಈ ಬಗ್ಗೆ ಹೇಳಿದ್ದಾರಲ್ಲಾ. ವಿಜಯೇಂದ್ರ ಅವರು ಹೇಳಿದ್ದಾರೆ. ನಮ್ಮದು ಕುಟುಂಬ ರಾಜಕಾರಣ ವಿರೋಧಿಸುವ ಪಕ್ಷ. ಹೀಗಾಗಿ, ಕೆಲವೊಂದು ತೀರ್ಮಾನ ಕೈಗೊಂಡಿದ್ದೇವೆ.

ಯಡಿಯೂರಪ್ಪ ಅವರನ್ನು ಬಿಜೆಪಿ ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ಹೇಳುತ್ತಿದೆಯಲ್ಲಾ?
          ನಾವು ಕಾಂಗ್ರೆಸ್‌ ಅನ್ನು ಕೇಳಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ, ಯಡಿಯೂರಪ್ಪ ಐದು ವರ್ಷ ಪೂರ್ತಿ ಮುಖ್ಯಮಂತ್ರಿಯಾಗುವುದು ಅಷ್ಟೇ ಸತ್ಯ.

ಮಿಷನ್‌ 150 ಗುರಿ ತಲುಪುತ್ತೀರಾ?
          ಕರ್ನಾಟಕದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕಂತೂ ಬರುತ್ತೇವೆ. ಸ್ವಂತ ಕ್ಷೇತ್ರ ಗೆಲ್ಲಲಾಗದ ಸಿದ್ದರಾಮಯ್ಯ ಬಾದಾಮಿಗೆ ಹೋಗಿದ್ದಾರೆ. ಇನ್ನು ಕಾಂಗ್ರೆಸ್‌ ಅಧಿಕಾರಕ್ಕೆ ಎಲ್ಲಿ ಬರುತ್ತೆ.

ಶ್ರೀರಾಮುಲು ಸಹ ಬಳ್ಳಾರಿ ಗ್ರಾಮಾಂತರ ಬಿಟ್ಟು ಮೊಳಕಾಳೂ¾ರಿಗೆ ಹೋದರಲ್ಲ?
          ಶ್ರೀರಾಮುಲು ಜನನಾಯಕ. ಅವರು  ಅಲ್ಲಿ ಸ್ಪರ್ಧೆ ಮಾಡಬೇಕು ಎಂಬುದು ಪಕ್ಷದ ನಿರ್ಧಾರ. ಅದಕ್ಕೆ ಅವರು ತಲೆಬಾಗಿದ್ದಾರೆ.

ಬಾದಾಮಿಯಲ್ಲಿ ಶ್ರೀರಾಮುಲು “ಹರಕೆಯ ಕುರಿ’ಯಾ?
          ಒಬ್ಬ ಮುಖ್ಯಮಂತ್ರಿ ವಿರುದ್ಧ ನಾವು ಶ್ರೀರಾಮುಲು ಅವರನ್ನು ಕಣಕ್ಕಿಳಿಸಿದ್ದೇವೆ ಎಂದರೆ ಅವರ ಸಾಮರ್ಥ್ಯ ಅರ್ಥಮಾಡಿಕೊಳ್ಳಿ. ಶ್ರೀರಾಮುಲು ಬಿಜೆಪಿಯ ವರ್ಚಸ್ವಿ ನಾಯಕ. 

ಸಿದ್ದರಾಮಯ್ಯ ಅವರದು ಟೂ ಪ್ಲಸ್‌ ಒನ್‌ ಫಾರ್ಮುಲಾ
ವಿಜಯೇಂದ್ರಗೆ ಟಿಕೆಟ್‌ ವಿಚಾರದಲ್ಲಿ ನೀವು ಹತ್ತು ದಿನಗಳ ಹಿಂದೆಯೇ ಕಾದು ನೋಡಿ ಎಂದು ಹೇಳಿದ್ದಿರಿ?

          ಹೌದು, ಯಾಕೆಂದರೆ ಪಕ್ಷದ ತೀರ್ಮಾನ ನನಗೆ ಗೊತ್ತಿತ್ತು. ನಮ್ಮದು ಒನ್ಲಿ ಒನ್‌ ಫಾರ್ಮುಲಾ, ಸಿದ್ದರಾಮಯ್ಯ ಅವರದು ಟೂ ಪ್ಲಸ್‌ ಒನ್‌ ಫಾರ್ಮುಲಾ. ನಮಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಅತಿ ಮುಖ್ಯ ವಿಚಾರ.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.