ಗಾರೆ ಕಾರ್ಮಿಕನ ಕೊಲೆ ಪ್ರಕರಣ: ಇಬ್ಬರ ಸೆರೆ


Team Udayavani, Mar 19, 2019, 6:29 AM IST

gaare-kar.jpg

ಬೆಂಗಳೂರು: ತಡವಾಗಿ ಬರುವ ವಿಧಿ ವಿಜ್ಞಾನ ಪ್ರಯೋಗಾಲದ ವರದಿಗಳಿಂದ ಅದೆಷ್ಟೋ ಪ್ರಕರಣಗಳಲ್ಲಿ ಆರೋಪಿಗಳು ತಪ್ಪಿಸಿಕೊಳ್ಳುವುದು, ಮೃತಪಟ್ಟಿರುವ ಉದಾಹರಣೆಗಳು ಸಾಕಷ್ಟಿವೆ. ಆದರೆ, ಇಲ್ಲೊಂದು ಪ್ರಕರಣ ತಡವಾಗಿ ಬಂದ ವಿಧಿ ವಿಜ್ಞಾನ ವರದಿಯಿಂದಲೇ ಇತ್ಯರ್ಥವಾಗಿದ್ದು, ಪತಿಯನ್ನೇ ಕೊಲೆಗೈದ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ಜೈಲು ಸೇರುವಂತೆ ಮಾಡಿದೆ.

ಅಕ್ರಮ ಸಂಬಂಧಕ್ಕಾಗಿ ಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ವಿಧಿವಿಜ್ಞಾನ ಪ್ರಯೋಗಾಲಯ(ಎಫ್ಎಸ್‌ಎಲ್‌)ದ ವರದಿ ಆಧರಿಸಿ ಬರೋಬರಿ ಒಂದು ವರ್ಷದ ಬಳಿಕ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೆಸರುಘಟ್ಟದ ದಾಸೇನಹಳ್ಳಿ ಗ್ರಾಮದ ಸುಖೀತಾ(30) ಹಾಗೂ ಆಕೆಯ ಪ್ರಿಯಕರ, ಅವಿವಾಹಿತ ಶ್ರೀನಿವಾಸ (31) ಬಂಧಿತರು. ಆರೋಪಿಗಳು 2018ರ ಫೆ.25ರಂದು ತಡರಾತ್ರಿ 12 ಗಂಟೆ ಸುಮಾರಿಗೆ ಗಾರೆ ಕಾರ್ಮಿಕ ಉಮಾಶಂಕರ್‌‌ನನ್ನು ಕೊಂದಿದ್ದರು.

ಈ ಸಂಬಂಧ ಉಮಾಶಂಕರ್‌ ಸೋದರ ಸಂಬಂಧಿ ಅಶ್ವಥಪ್ಪ ಎಂಬುವರು ಅನುಮಾನಾಸ್ವದ ಸಾವು ಎಂದು ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸೋಲದೇವನಹಳ್ಳಿ ಪೊಲೀಸರು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ, ವೈದ್ಯರ ಸಲಹೆ ಮೇರೆಗೆ ಮೃತನ ಅಂಗಾಂಗ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

ವರ್ಷದ ಬಳಿಕ ಬಂದ ವರದಿಯಲ್ಲಿ ಉಮಾಶಂಕರ್‌ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಉಲ್ಲೇಖೀಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸರು ಉಮಾಶಂಕರ್‌ ಪತ್ನಿಯನ್ನು ವಶಕ್ಕೆ ಪಡೆದು ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ಕೊಲೆ ಸಂಗತಿ ಬಾಯಿಬಿಟ್ಟಿದ್ದು, ಕೃತ್ಯಕ್ಕೆ ತನ್ನ ಪ್ರಿಯಕರ ಶ್ರೀನಿವಾಸನ ಸಹಕರ ಪಡೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದರು.

ಏನಿದು ಘಟನೆ?: ಉಮಾಶಂಕರ್‌ 15 ವರ್ಷಗಳ ಹಿಂದೆ ಸುಖೀತಾಳನ್ನು ಮದುವೆಯಾಗಿದ್ದು, ದಂಪತಿಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ. ಉಮಾಶಂಕರ್‌ ಗಾರೆ ಕಾರ್ಮಿಕನಾಗಿದ್ದ. ಸುಖೀತಾ ಗಾರ್ಮೆಂಟ್ಸ್‌ಗೆ ಹೋಗುತ್ತಿದ್ದಳು. ಕುಟುಂಬ ಹೆಸರುಘಟ್ಟದ ದಾಸೇನಹಳ್ಳಿ ಗ್ರಾಮದಲ್ಲಿ ವಾಸವಾಗಿತ್ತು. ಉಮಾಶಂಕರ್‌ ವಿಪರೀತ ಮದ್ಯ ಸೇವಿಸುತ್ತಿದ್ದು,

ನಿತ್ಯ ಕುಡಿದು ಪತ್ನಿ, ಮಕ್ಕಳಿಗೆ ಹೊಡೆಯುತ್ತಿದ್ದ. ಈ ನಡುವೆ ಎರಡು ವರ್ಷಗಳ ಹಿಂದೆ ಸುಖೀತಾಗೆ ಮನೆ ಸಮೀಪದ ನಿವಾಸಿ, ಖಾಸಗಿ ವಾಹನ ಚಾಲಕ ಶ್ರೀನಿವಾಸ ಪರಿಚಯವಾಗಿದ್ದು, ಇಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಅಷ್ಟೇ ಅಲ್ಲದೆ, ಪತಿ  ಮದ್ಯ ಸೇವಿಸಿ ಮನೆಯಲ್ಲಿ ಮಲಗಿದ ಕೂಡಲೇ ಪ್ರಿಯಕರನಿಗೆ ಕರೆ ಮಾಡಿ ಕರೆಸಿಕೊಳ್ಳುತ್ತಿದ್ದಳು ಎಂದು ಪೊಲೀಸರು ಹೇಳಿದರು.

ಉಸಿರುಗಟ್ಟಿಸಿ ಕೊಂದರು: ಫೆ.25, 2018ರಂದು ರಾತ್ರಿ 10 ಗಂಟೆ ಸುಮಾರಿಗೆ ಉಮಾಶಂಕರ್‌ ಮದ್ಯ ಸೇವಿಸಿ ಮನೆಗೆ ಬಂದು, ಊಟ ಮಾಡಿ ಮಲಗಿದ್ದಾನೆ. 11 ಗಂಟೆ ಸುಮಾರಿಗೆ ಪ್ರಿಯಕರ ಶ್ರೀನಿವಾಸನನ್ನು ಕರೆ ಮಾಡಿ ಕರೆಸಿಕೊಂಡ ಸುಖೀತಾ, ಆತನೊಂದಿಗೆ ಏಕಾಂತದಲ್ಲಿ ಇದ್ದಳು. ಕೆಲ ಹೊತ್ತಿನ ಬಳಿಕ ಎಚ್ಚರಗೊಂಡ ಉಮಾಶಂಕರ್‌ ಕೊಠಡಿಯ ಲೈಟ್‌ ಹಾಕಿದ. ಈ ವೇಳೆ ಪತ್ನಿ ಜತೆ ಶ್ರೀನಿವಾಸ ಮಲಗಿದ್ದ. ಇದರಿಂದ ಆಕ್ರೋಶಗೊಂಡ ಉಮಾಶಂಕರ್‌ ಇಬ್ಬರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಆರೋಪಿಗಳು ಮದ್ಯದ ಅಮಲಿನಲ್ಲಿದ್ದ ಉಮಾಶಂಕರನನ್ನು ಹಾಸಿಗೆ ಮೇಲೆ ಬೀಳಿಸಿ, ದಿಬ್ಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಾರೆ.

ಅನುಮಾನಸ್ಪದ ಸಾವು!: ಮರು ದಿನ ಬೆಳಗ್ಗೆ ಸಂಬಂಧಿಕರು ಹಾಗೂ ನೆರೆ ಹೊರೆಯವರಿಗೆ ವಿಷಯ ತಿಳಿಸಿದ ಸುಖೀತಾ, ಪತಿ ವಿಪರೀತ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ ಎಂದು ಕಥೆ ಕಟ್ಟಿದ್ದಳು. ಸಂಬಂಧಿಕರು ಕೂಡ ನಂಬಿದ್ದರು. ಮತ್ತೂಂದೆಡೆ ಸ್ಥಳಕ್ಕೆ ಬಂದ ಪೊಲೀಸರು ಸಹ, ಮೃತ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಾಗಲಿ, ಇತರೆ ಯಾವುದೇ ಕುರುಹುಗಳಾಗಲಿ ಸಿಗದ ಹಿನ್ನೆಲೆಯಲ್ಲಿ ಅಸ್ವಾಭಾವಿಕ ಸಾವು ಎಂದು ಭಾವಿಸಿದ್ದರು.

ಆದರೆ, ಮೃತನ ಸಂಬಂಧಿ ಘಟನೆ ಬಗ್ಗೆ ಕೊಲೆ ಶಂಕೆ ವ್ಯಕ್ತಪಡಿಸಿದ್ದರು. ಅನುಮಾನಗೊಂಡ ಪೊಲೀಸರು ಸುಖೀತಾಳ ಸಿಡಿಆರ್‌ ಪರಿಶೀಲಿಸಿದಾಗ ಶ್ರೀನಿವಾಸಗೆ ಕರೆ ಮಾಡಿರುವ ವಿಚಾರ ತಿಳಿದು ಬಂದಿತ್ತು. ಆದರೆ, ವಿಚಾರಣೆ ಸಂದರ್ಭದಲ್ಲಿ ಆಕೆ, ಆಗಾಗ ಶ್ರೀನಿವಾಸ ಕರೆ ಮಾಡುತ್ತಿದ್ದ. ಈ ವಿಚಾರ ತನ್ನ ಪತಿಗೂ ಗೊತ್ತಿತ್ತು. ಪತಿ ಹಲ್ಲೆ ನಡೆಸುತ್ತಿದ್ದಾಗ ಶ್ರೀನಿವಾಸ ನೆರವಿಗೆ ಬರುತ್ತಿದ್ದ.

ಘಟನೆ ದಿನ ಪತಿ ಕುಡಿದು ತನ್ನ ಮೇಲೆ ಹಲ್ಲೆ ನಡೆಸಿದರು. ಆಗ ಪ್ರತಿರೋಧ ವ್ಯಕ್ತಪಡಿಸಿ ಹಾಸಿಗೆ ಮೇಲೆ ತಳ್ಳಿದೆ. ಹೀಗಾಗಿ ಮಲಗಿರಬಹುದು ಎಂದು ಭಾವಿಸಿದೆ. ಆದರೆ, ಮರುದಿನ ಮೃತಪಟ್ಟಿರುವುದು ತಿಳಿದು ಬಂತು ಎಂದಿದ್ದಳು. ಶ್ರೀನಿವಾಸ ಕೂಡ ಆಕೆ ಜತೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದ. ಜತೆಗೆ ಸೂಕ್ತ ದಾಖಲೆಗಳು ಇಲ್ಲದರಿಂದ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ ಎಂದು ಪೊಲೀಸರು ಹೇಳಿದರು.

ವರ್ಷದ ಬಳಿಕ ಬಂದ ವರದಿ: ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಪೊಲೀಸರು, ವೈದ್ಯರ ಸಲಹೆ ಮೇರೆಗೆ ಉಮಾಶಂಕರ್‌ನ ವಿಸೆರಾವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಪರೀಕ್ಷೆ ನಡೆಸಿದ ಪ್ರಯೋಗಾಲಯದ ಸಿಬ್ಬಂದಿ ವರ್ಷದ ಬಳಿಕ ಅನುಮಾನಾಸ್ಪದ ಸಾವು ಎಂದು ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸುಖೀತಾ ಮೇಲೆ ಕೆಲ ದಿನಗಳಿಂದ ನಿಗಾವಹಿಸಿದಾಗ, ಶ್ರೀನಿವಾಸ ಜತೆ ಅಕ್ರಮ ಸಂಬಂಧ ಇರುವುದು ದೃಢಪಟ್ಟಿತ್ತು. ಬಳಿಕ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.