ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯ ಬರ್ಬರ ಹತ್ಯೆ
Team Udayavani, Oct 16, 2019, 8:18 AM IST
ಬೆಂಗಳೂರು: ವಾಕಿಂಗ್ ಹೋಗಿದ್ದ ವೇಳೆಯಲ್ಲಿ ಅಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಐಯಪ್ಪ ದೊರೆ ಅನೆಕಲ್ ಬಳಿಯಿರುವ ಆಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯಾಗಿದ್ದರು . ನಿನ್ನೆ ರಾತ್ರಿ ವಾಕಿಂಗ್ ಹೋಗಿದ್ದ ವೇಳೆ ಅವರನ್ನು ಹತ್ಯೆ ಮಾಡಲಾಗಿದೆ. ಮನೆಗೆ ವಾಪಾಸ್ಸಾಗದ ಹಿನ್ನಲೆಯಲ್ಲಿ ಕಟುಂಬಸ್ಥರು ತೀವ್ರ ಹುಡುಕಾಟ ನಡೆಸಿದ್ಧ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.