ಸಂಗೀತ, ನೃತ್ಯ ಮನೋರಂಜನೆಗೆ ಸೀಮಿತವಲ್ಲ


Team Udayavani, Aug 7, 2018, 12:03 PM IST

sangeeta.jpg

ಬೆಂಗಳೂರು: ಸಂಗೀತ ಹಾಗೂ ನೃತ್ಯ ಪ್ರಕಾರಗಳು ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಬದಲಾಗಿ ಸಮಾಜಕ್ಕೆ ಸಂದೇಶ ಸಾರುವಂತಹ ವೇದಿಕೆಗಳಾಗಿವೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಫ‌ಯಾಜ್‌ ಖಾನ್‌ ಅಭಿಪ್ರಾಯಪಟ್ಟರು.

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಸೋಮವಾರ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಗೀತ ಹಾಗೂ ನೃತ್ಯಗಳು ಸಮಾಜದ ಒಂದು ಭಾಗವಾಗಿದ್ದು, ಪ್ರತಿಯೊಬ್ಬರ ವ್ಯಕ್ತಿಯನ್ನು ತನ್ನತ್ತ ಸೆಳೆಯುವಂತಹ ಶಕ್ತಿಯನ್ನು ಹೊಂದಿವೆ. ಕಲೆ ಹಾಗೂ ಸಾಹಿತ್ಯವಿಲ್ಲದ ಸಮಾಜ ನರಕದಂತಾಗುತ್ತದೆ ಎಂದು ಹೇಳಿದರು.

ದೇಶದಲ್ಲಿ ಸಂಗೀತ, ನೃತ್ಯ ಸೇರಿದಂತೆ ಎಲ್ಲ ರೀತಿಯ ಕಲಾ ಪ್ರಕಾರಗಳು ಸಮೃದ್ಧವಾಗಿ ಬೆಳವಣಿಗೆಯಾಗಿದ್ದು, ಪ್ರತಿಯೊಬ್ಬರೂ ಕಲಾ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಕಲಾ ಪ್ರಕಾರಗಳನ್ನು ಸವಿಯುವ ಮೂಲಕ ಅವುಗಳನ್ನು ಗೌರವಿಸಬೇಕು ಎಂದು ಹೇಳಿದರು.

ಅಕಾಡೆಮಿಯ ವತಿಯಿಂದ ಕಳೆದ ಎರಡು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ವಿದ್ವಾಂಸರ ಮೂಲಕ ಪುಸ್ತಕಗಳನ್ನು ಹೊರತಂದಿದ್ದು, ಇವು ಕೇವಲ ಪಠ್ಯಗಳಿಗೆ ಸೀಮಿತವಾಗಿಲ್ಲ. ಬದಲಾಗಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುವವರಿಗೆ ಮಾರ್ಗದರ್ಶಕ ಕೃತಿಗಳಾಗಿದ್ದು, ಕೃತಿಗಳಿಂದ ಜನರು ಸಂಗೀತದ ಕುರಿತು ಹಲವಾರು ವಿಷಯಗಳನ್ನು ತಿಳಿಯಬಹುದಾಗಿದೆ ಎಂದು ಹೇಳಿದರು.

ವಿಮರ್ಶಕ ಡಾ.ಎಂ.ಸೂರ್ಯ ಪ್ರಸಾದ್‌ ಮಾತನಾಡಿ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಹಾಗೂ ನೃತ್ಯ ಪ್ರಕಾರಗಳು ಸಮಾನವಾಗಿ ಬೆಳೆಯುತ್ತಿದ್ದು, ದೇಶ-ವಿದೇಶಗಳಲ್ಲಿ ಅಪಾರವಾದ ಗೌರವ ಮನ್ನಣೆಗೆ ಪಾತ್ರವಾಗಿವೆ. ನಮ್ಮ ಸಂಗೀತ ಗಟ್ಟಿತನದಿಂದ ಕೂಡಿದ್ದು, ಗಟ್ಟಿತನದಿಂದ ಕೂಡಿದ ಕಲೆ ಎಲ್ಲವನ್ನೂ ಮೀರಿ ಬೆಳೆಯುವ ಶಕ್ತಿಯನ್ನು ಹೊಂದಿರುತ್ತವೆ ಎಂದರು. 

ಕಾರ್ಯಕ್ರಮದಲ್ಲಿ ರಾಗವಲ್ಲಿರಸಾಲ, ಸಂಗೀತ ಶಾಸ್ತ್ರಗ್ರಂಥ ಚಂದ್ರಿಕೆ, ಸಂಗೀತ ಶಾಸ್ತ್ರ ಮಂದಾಕಿನಿ (ಭಾಗ 1 ಮತ್ತು ಭಾಗ 2), ತೌಲನಿಕ ಸಂಗೀತ ಸಮೀಕ್ಷೆ ಹಾಗೂ ಕಲಾನ್ವೇಷಣೆ ಕೃತಿಗಳು ಬಿಡುಗಡೆಗೊಂಡವು. ಈ ವೇಳೆ ಹಿರಿಯ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್‌, ಲೇಖಕರಾದ ಡಾ.ನಾಗವಲ್ಲಿ ನಾಗರಾಜ್‌, ಶತಾವಧಾನಿ ಆರ್‌.ಗಣೇಶ್‌, ವಸಂತ ಮಾಧವಿ, ಡಾ.ಡಿ.ಎ.ಉಪಾಧ್ಯ, ಡಾ.ಎಸ್‌.ಕಾರ್ತಿಕ್‌ ಹಾಜರಿದ್ದರು. 

ಕೈಕೊಟ್ಟ ವಿದ್ಯುತ್‌ – ಸೊಳ್ಳೆ ಕಾಟ: ಕಾರ್ಯಕ್ರಮದ ಆರಂಭದಲ್ಲಿಯೇ ಸಭಾಂಗಣದಲ್ಲಿ ವಿದ್ಯುತ್‌ ಕೈಕೊಟ್ಟ ಪರಿಣಾಮ ಅತಿಥಿಗಳು ಹಾಗೂ ಸಭಿಕರು ತೊಂದರೆ ಅನುಭವಿಸುವಂತಾಯಿತು. ಸುಮಾರು ಒಂದು ಗಂಟೆ ಕಾಲ ವಿದ್ಯುತ್‌ ವ್ಯತ್ಯಯ ಉಂಟಾಗಿದ್ದರಿಂದ ಅತಿಥಿಗಳು ಮೈಕ್‌ ಇಲ್ಲದೆ ಮಾತನಾಡಬೇಕಾಯಿತು. ಆಯೋಜಕರು ಕೈಯಲ್ಲಿ ಮೊಬೈಲ್‌ ಟಾರ್ಚ್‌ ಹಿಡಿದು ಅತಿಥಿಗಳನ್ನು ತೋರಿಸಬೇಕಾಯಿತು. ಇದರ ನಡುವೆ ಸಭಾಂಗಣದಲ್ಲಿ ಸೊಳ್ಳೆಗಳ ಕಾಟ ತೀವ್ರವಾಗಿದ್ದರಿಂದ ಸಭಿಕರು ಕಾರ್ಯಕ್ರಮದಿಂದ ಎದ್ದು ಹೋಗಿದ್ದು ಕಂಡುಬಂತು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.