ನಗರದ 107 ಪಬ್‌ಗಳಲ್ಲಿ ಮ್ಯೂಸಿಕ್‌ ಪಾರ್ಟಿ ಬಂದ್‌


Team Udayavani, Aug 30, 2019, 3:00 AM IST

Udayavani Kannada Newspaper

ಬೆಂಗಳೂರು: ಕೋರಮಂಗಲ, ಇಂದಿರಾನಗರ, ಮೆಜೆಸ್ಟಿಕ್‌ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿರುವ ಪಬ್‌, ಡ್ಯಾನ್ಸ್‌ ಬಾರ್‌ಗಳಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಮ್ಯೂಸಿಕ್‌ ಪಾರ್ಟಿಗಳನ್ನು ಸ್ಥಗಿತಗೊಳಿಸಲು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮುಂದಾಗಿದೆ. ಪಬ್‌ನಲ್ಲಿ ಡಿಸ್ಕೋಥೆಕ್‌ ಮ್ಯೂಸಿಕ್‌ ಪಾರ್ಟಿಗಳನ್ನು ನಡೆಸಲು 107 ಪಬ್‌ ಮಾಲೀಕರು ಸಲ್ಲಿಸಿದ್ದ ಪರವಾನಗಿಗಳನ್ನು ನಗರ ಪೊಲೀಸ್‌ ಆಯುಕ್ತರು ತಿರಷ್ಕೃತಗೊಳಿಸಿದ್ದಾರೆ.

ಈ ಬೆನ್ನಲ್ಲೇ ನಗರದಲ್ಲಿ ಅನಧಿಕೃತವಾಗಿ ಮ್ಯೂಸಿಕ್‌ ಪಾರ್ಟಿ, ಡಿಸ್ಕೋಥೆಕ್‌ ನಡೆಸುವ 107 ಪಬ್‌ಗಳಿಗೆ ಬೀಗ ಜಡಿಯಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಆದರೆ, ಹೋಟೆಲ್‌ ವ್ಯವಹಾರ ಮಾತ್ರವೇ ನಡೆಯಲು ಅನುಮತಿಯಿದೆ. ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌, 107 ಪಬ್‌ಗಳಿಗಳಲ್ಲಿ ಮ್ಯೂಸಿಕ್‌ ಪಾರ್ಟಿ, ಡಿಸ್ಕೋಥೆಕ್‌, ನಡೆಸಲು ಇದ್ದ ಪರವಾನಗಿ ರದ್ದುಗೊಂಡಿದೆ.

ಹೀಗಾಗಿ, ಪರವಾನಗಿ ರದ್ದುಗೊಂಡ ಪಬ್‌ಗಳಲ್ಲಿ ಇನ್ನೂ ಚಟುವಟಿಕೆಗಳು ನಡೆಯುತ್ತಿದ್ದರೆ ಸಿಸಿಬಿ ಹಾಗೂ ಸ್ಥಳೀಯ ಠಾಣಾ ಇನ್ಸ್‌ಪೆಕ್ಟರ್‌ಗಳು ಕ್ರಮವಹಿಸಿ ಸ್ಥಗಿತಗೊಳಿಸಲಿದ್ದಾರೆ ಎಂದು ತಿಳಿಸಿದರು. ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಮ್ಯೂಸಿಕ್‌ ಪಾರ್ಟಿ, ನಡೆಸಲು ಕಡ್ಡಾಯವಾಗಿ ನಗರ ಪೊಲೀಸ್‌ ಆಯುಕ್ತರಿಂದ ಪರವಾನಗಿ ಪಡೆಯಬೇಕು ಎಂದು ಸುಪ್ರೀಂಕೋರ್ಟ್‌ 2018ರಲ್ಲಿ ಸ್ಪಷ್ಟ ನಿರ್ದೇಶನ ನೀಡಿತ್ತು. ಜತೆಗೆ, ಸಾರ್ವಜನಿಕ ಮನರಂಜನೆ ಕಾರ್ಯಕ್ರಮಗಳಿಗೆ ಪರವಾನಗಿ ಕಾಯಿದೆ 2005ರಲ್ಲಿಯೂ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖವಿದೆ.

ಹೀಗಾಗಿ, ಹಲವು ಪಬ್‌ಗಳು ಪರವಾನಗಿ ಕೋರಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದವು. ಆದರೆ, 107 ಪಬ್‌ಗಳು ನಿಯಮಾವಳಿಗಳನ್ನು ಉಲ್ಲಂ ಸಿ ಮ್ಯೂಸಿಕ್‌ ಪಾರ್ಟಿ ಸೇರಿದಂತೆ ಇನ್ನಿತರೆ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದವು. ಹೀಗಾಗಿ, ಪರವಾನಗಿ ರದ್ದುಗೊಳಿಸಿ ಮುಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕೋರಮಂಗಲ, ಇಂದಿರಾನಗರ ನೂರು ಅಡಿ ರಸ್ತೆಯ ಸುತ್ತಮುತ್ತಲ ಭಾಗಗಳಲ್ಲಿನ ಪಬ್‌ಗಳಲ್ಲಿ ಮ್ಯೂಸಿಕ್‌ ಪಾರ್ಟಿಗಳಿಂದ ನಿಯಮ ಮೀರಿ ಶಬ್ಧಮಾಲಿನ್ಯ ಉಂಟಾಗುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣೆ ವೇಳೆ, ಪೊಲೀಸರ ಕಾರ್ಯವೈಖರಿ ಮೇಲೆ ಹೈಕೋರ್ಟ್‌ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.