ನನ್ನ ಅಂಕಣಗಳೇ ನನಗೆ ಮಹಾಕಾವ್ಯ


Team Udayavani, Aug 5, 2019, 3:05 AM IST

palikeya

ಬೆಂಗಳೂರು: “ನನ್ನ ಅಂಕಣಗಳೇ ನನಗೆ ಮಹಾಕಾವ್ಯಗಳು’ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ನಡೆದ ತಮ್ಮ “ಕರುಳು ಕಟ್ಟಿದ ಬರಹ ‘ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೆಲವರು ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುವುದರಿಂದ ನಿಮ್ಮ ಸೃಜನಶೀಲ ಸಾಹಿತ್ಯಕ್ಕೆ ಅಡ್ಡಿಯುಂಟಾಗುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಇಂತಹ ಬರವಣಿಗೆಯಿಂದ ಯಾವುದೇ ರೀತಿಯ ಧಕ್ಕೆ ಆಗುವುದಿಲ್ಲ. ಆತ್ಮ ಸಂತೋಷಕ್ಕೆ ನಾನು ಅಂಕಣ ಬರೆಯುತ್ತೇನೆ. ಅಂಕಣ ಬರಹದ ಮೂಲಕ ಹೆಚ್ಚು ವಿಚಾರಗಳನ್ನು ಜನರಿಗೆ ತಲುಪಿಸುತ್ತೇನೆ. ಅವು ಜನರಲ್ಲಿ ಚರ್ಚೆ ಹುಟ್ಟುಹಾಕುತ್ತವೆ ಎಂದರು.

ಅಂಕಣ ಬರಹವು ನನಗೆ ಬೃಹತ್‌ ಕಾವ್ಯವಿದ್ದಂತೆ. ಅಂಕಣಕ್ಕೆ ಒಂದು ಚೌಕಟ್ಟು ಇರುತ್ತದೆ. ಆ ಚೌಕಟ್ಟಿನ ಒಳಗೆ ಆತ್ಮವಂಚನೆ ಮಾಡಿಕೊಳ್ಳದೇ ಹೇಳಬೇಕಾದದ್ದನ್ನು ನೇರವಾಗಿ ಜನರ ಮುಂದೆ ಇಡಬೇಕಾಗಿದೆ. ಹೀಗಾಗಿ ಅಂಕಣ ಬರಹ ಖುಷಿ ಕೊಟ್ಟಿದೆ ಎಂದು ತಿಳಿಸಿದರು.

ನಾನು ಕನ್ನಡ ಅಧ್ಯಯನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾಗ ಜಿ.ಎಸ್‌.ಶಿವರುದ್ರಪ್ಪ ಸೇರಿದಂತೆ ದೊಡ್ಡ ವಿದ್ವಾಂಸರಿದ್ದರು. ಸುಮಾರು ಏಳು ವರ್ಷಗಳ ಕಾಲ ಸ್ವಾಗತ ಭಾಷಣ ಮಾಡಲು ಕೂಡ ಅವಕಾಶ ಸಿಕ್ಕಿರಲಿಲ್ಲ. ಕನ್ನಡ ಅಧ್ಯಯನ ಕೇಂದ್ರವು ನನ್ನ ಸಾಹಿತ್ಯ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಯಿತು ಎಂದು ಹೇಳಿದರು.

ಸಾಹಿತಿಗಳು ಅಕ್ಷರ ಬೇಟೆಗಾರರಾಗಬಾರದು. ಅಂತಃಕರಣ ಮತ್ತು ಮನುಷ್ಯತ್ವ ಅವರ ಬರವಣಿಗೆಯಲ್ಲಿ ಅಡಕವಾಗಿರಬೇಕು. ಈ ಹಿಂದೆ ಸಾಹಿತಿಯೊಬ್ಬರು ಬರಗೂರರು ಸಾಹಿತಿಯೇ ಅಲ್ಲ ಎಂದು ಟೀಕಿಸಿದ್ದರು.ಆಗ ನನಗೆ ಬೇಸರವಾಗಲಿಲ್ಲ. ಆದರೆ ಮನುಷ್ಯತ್ವ ಇಲ್ಲ ಎಂದಿದ್ದರೆ ಬೇಸರವಾಗುತ್ತಿತ್ತು ಎಂದು ಹಾಸ್ಯ ಚಟಾಕಿ ಹಾರಿಸಿದರು.

ವಿಮರ್ಶಕ ಎಸ್‌.ಆರ್‌.ವಿಜಯಶಂಕರ ಮಾತನಾಡಿ, ಬರಗೂರರ ಬರಹ ತನ್ಮಯಗೊಳಿಸುತ್ತವೆ ಎಂದು ಹೇಳಿದರು. ಬರಗೂರರ “ಕರುಳು ಕಟ್ಟಿದ ಬರಹ’ ಕೃತಿ ಶೋಧನೆಯ ಭಾಗವಾಗಿ ಮೂಡಿ ಬಂದಿದೆ. ಅಂಕಣ ಸಾಹಿತ್ಯದ ಉತ್ತಮ ಲೇಖನಗಳಿಗೆ ಪುಸ್ತಕ ರೂಪ ನೀಡಲಾಗಿದೆ. ಇವರ ಅಂಕಣ ಬರಹ ಹಲವು ರೀತಿಯ ಚರ್ಚೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಾಧೀಶ, ವಿ.ಗೋಪಾಲಗೌಡ ಮಾತನಾಡಿ, ಎಲ್ಲಾ ಪ್ರಕಾರದ ಸಾಹಿತ್ಯದಲ್ಲಿ ತೊಡಗಿಕೊಂಡಿರುವ ಬರಗೂರು ರಾಮಚಂದ್ರಪ್ಪ ಅವರಿಗೆ ಜ್ಞಾನ ಪೀಠ ಪ್ರಶಸ್ತಿ ದೊರಕಬೇಕು ಎಂದರು. ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ,ಅಂಕಿತ ಪುಸ್ತಕ ಪ್ರಕಾಶನದ ಪ್ರಕಾಶ್‌ ಕಂಬತ್ತಳ್ಳಿ, ಕನ್ನಡ ಜನಶಕ್ತಿ ಕೇಂದ್ರದ ಸಿ.ಕೆ.ರಾಮೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.