ಅಶ್ಲೀಲ ದೃಶ್ಯಕ್ಕೆ ಮಾತ್ರ ನನ್ನ ವಿರೋಧ: ಹುಚ್ಚ ವೆಂಕಟ್
Team Udayavani, Jun 27, 2019, 3:05 AM IST
ಬೆಂಗಳೂರು: ಐ ಲವ್ ಯೂ ಸಿನಿಮಾದ ಅಶ್ಲೀಲ ದೃಶ್ಯಗಳಿಗೆ ಮಾತ್ರ ನನ್ನ ವಿರೋಧವಿದೆ. ಅದರ ಹೊರತು ಚಿತ್ರವನ್ನು ನಾನು ಬೆಂಬಲಿಸುತ್ತೇನೆ. ನಿರ್ದೇಶಕ ಚಂದ್ರು ನನಗೆ ಸಹೋದರ ಸಮಾನರು ಎಂದು ನಟ ಹುಚ್ಚ ವೆಂಕಟ್ ಸ್ಪಷ್ಟಪಡಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೆಂಕಟ್, ಸಿನಿಮಾ ಕುರಿತ ನನ್ನ ಅಭಿಪ್ರಾಯವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದಕ್ಕೆ ನಾನು ಹೊಣೆಯಲ್ಲ. ಆದರೆ ಚಿತ್ರದಲ್ಲಿನ ಅಶ್ಲೀಲ ದೃಶ್ಯಗಳು ಮಹಿಳಾ ಸಮುದಾಯವನ್ನು ಅವಮಾನಿಸುವಂತಿವೆ ಎಂದರು.
ಕೆಲವು ದೃಶ್ಯಗಳ ಹೊರತಾಗಿ ಇಡೀ ಸಿನಿಮಾ ಚೆನ್ನಾಗಿರಬಹುದು. ಜನರಿಗೆ ಇಷ್ಟವಾದರೆ ಸಿನಿಮಾ ಯಶಸ್ವಿಯಾಗುತ್ತದೆ. ಟ್ರೇಲರ್ನ ದೃಶ್ಯಗಳನ್ನು ನಂಬದೆ ಇಡೀ ಸಿನಿಮಾ ಕಥೆ, ನಿರೂಪಣೆಯಿಂದಾಗಿ ಚಿತ್ರ ಯಶಸ್ವಿಯಾಗುತ್ತದೆ.
ಚಂದ್ರು ಅವರು ನನ್ನ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಳ್ಳಬಾರದು. ಹೆಣ್ಣು ಮಕ್ಕಳ ಮೇಲಿನ ಕಾಳಜಿಯಿಂದಷ್ಟೇ ನಾನು ಹಿಂದೆ ಸಿನಿಮಾಕ್ಕೆ ವಿರೋಧ ಮಾಡಿದ್ದೇನೆ. ಸಿನಿಮಾದಲ್ಲಿನ ಕೆಲವು ದೃಶ್ಯಗಳನ್ನು ತೆಗೆದು ಪ್ರದರ್ಶಿಸಲಿ ಎಂದು ಈಗಲೂ ಹೇಳುತ್ತೇನೆ ಎಂದರು.
ಸಿನಿಮಾಗಳಲ್ಲಿ ಹೆಣ್ಣು ಮಕ್ಕಳಿಗೆ ಅಶ್ಲೀಲವಾಗಿ ತೋರಿಸುವ ಬಗ್ಗೆ ಸೆನ್ಸಾರ್ ಮಂಡಳಿ ಹಾಗೂ ಮಹಿಳಾ ಆಯೋಗ ಎಚ್ಚರಿಕೆ ವಹಿಸಬೇಕು. ಆಶ್ಲೀಲತೆ ಇಲ್ಲದೆಯೇ ಸಿನಿಮಾ ಗೆಲ್ಲಿಸುವಂತಹ ಪ್ರತಿಭಾನ್ವಿತರು ನಮ್ಮ ಚಿತ್ರರಂಗದಲ್ಲಿದ್ದಾರೆ.
ಹಾಗಾಗಿ ಚಿತ್ರರಂಗದ ಎಲ್ಲರಲ್ಲೂ ಮನವಿ ಮಾಡುತ್ತೇನೆ. ಮುಂದಿನ ಸಿನಿಮಾಗಳಲ್ಲಿ ಹೆಣ್ಣು ಮಕ್ಕಳನ್ನು ಆಶ್ಲೀಲವಾಗಿ ತೋರಿಸಬೇಡಿ. ನಾನು ಉಪೇಂದ್ರ ಅವರ ಬಗ್ಗೆ ಎಲ್ಲಿಯೂ ಏನನ್ನೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು: ಕಳೆದ ವರ್ಷ ಪ್ರವಾಹಕ್ಕೆ ತುತ್ತಾಗಿದ್ದ ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವಂತೆ ಅಲ್ಲಿನ ಜನರು ಒತ್ತಾಯ ಮಾಡುತ್ತಿದ್ದಾರೆ.
ಆಭಾಗದಲ್ಲಿ ಯಾರಿಗಾದರೂ ಆರೋಗ್ಯದಲ್ಲಿ ಏರುಪೇರಾದರೆ ಮೈಸೂರು ಅಥವಾ ಮಂಗಳೂರಿಗೆ ಹೋಗಬೇಕು. ಈ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗಮನಹರಿಸಿ ಆ ಜನರ ಬೇಡಿಕೆ ಈಡೇರಿಸಬೇಕೆಂದು ವೆಂಕಟ್ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…