ನನ್ನ ಪತ್ನಿ, ಮಗಳ ಮೇಲೆ ಅತ್ಯಾಚಾರ ನಡೆದಿದೆ; ಪ್ಲೀಸ್‌ ಕಾಪಾಡಿ!


Team Udayavani, Jan 22, 2018, 11:54 AM IST

husi-kare.jpg

ಬೆಂಗಳೂರು: “ಸಾರ್‌ ನನ್ನ ಹೆಂಡತಿ ಮತ್ತು ಮಗಳ ಮೇಲೆ ಯಾರೋ ಪಾಪಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ನನಗೆ ದಿಕ್ಕೇ ತೋಚುತ್ತಿಲ್ಲ. ತುಂಬಾ ಭಯ ಆಗ್ತಿದೆ ದಯವಿಟ್ಟು ಬಂದು ನನ್ನನ್ನು ಕಾಪಾಡಿ’ ಎಂದು ವ್ಯಕ್ತಿಯೊಬ್ಬ ದೂರವಾಣಿ ಮೂಲಕ ಆಡಿದ ಮಾತು ಕೇಳಿ ಎದ್ದೆವೋ ಬಿದ್ದೆವೋ ಎಂದು ಸ್ಥಳಕ್ಕೆ ಹೋದ ಪೊಲೀಸರಿಗೆ ಕಾದಿದ್ದುದು ನಿರಾಸೆ.

ಆ ಕ್ಷಣಕ್ಕೆ ಪೊಲೀಸರು ತಾಳ್ಮೆ ತಂದುಕೊಳ್ಳದಿದ್ದರೆ ಅದೇನಾಗುತ್ತಿತ್ತೋ ದೇವರೇ ಬಲ್ಲ! ಹುಸಿ ಬಾಂಬ್‌ ಬೆದರಿಕೆ ಕರೆ ಹಾಗೂ ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಪೊಲೀಸ್‌ ಠಾಣೆಗೆ ಹುಸಿ ಕರೆಗಳು ಬರುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ವ್ಯಕ್ತಿ “ಯಾರೋ ತನ್ನ ಪತ್ನಿ ಮತ್ತು ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ’ ಎಂದು ಪೊಲೀಸರಿಗೆ ಹುಸಿ ಕರೆ ಮಾಡಿದ ವಿಲಕ್ಷಣ ಘಟನೆ ಯಲಹಂಕದಲ್ಲಿ ಭಾನುವಾರ ನಡೆದಿದೆ.

ಕರೆ ಆಲಿಸಿ ಸ್ಥಳಕ್ಕೆ ತೆರಳಿದಾಗ, ತಮಗೆ ಕರೆ ಮಾಡಿದ್ದು ಒಬ್ಬ ಮಾನಸಿಕ ಅಸ್ವಸ್ಥ ಎಂದು ತಿಳಿದ ಪೊಲೀಸರಿಗೆ ಕೈ ಹಿಸುಕಿಕೊಳ್ಳದೆ ವಿಧಿಯಿರಲಿಲ್ಲ. “ನಮ್ಮ-100′ ಮತ್ತು ಯಲಹಂಕ ಪೊಲೀಸ್‌ ಠಾಣೆಗೆ ಒಂದೇ ಸಮಯಕ್ಕೆ ಬಂದ ಕರೆಯಿಂದ ತಕ್ಷಣ ಸ್ಥಳಕ್ಕೆ ಹೋದ ಪೊಲೀಸರಿಗೆ ಅಚ್ಚರಿ ಕಾದಿತ್ತು. ಕರೆ ಮಾಡಿದ್ದ ವ್ಯಕ್ತಿಯ  ಪತ್ನಿ ಹಾಗೂ ಮಗಳು ಮನೆಯಲ್ಲೇ ಇದ್ದು ಆ ರೀತಿಯ ಘಟನೆಯೇನೂ ನಡೆದಿಲ್ಲ ಎಂದು ಹೇಳಿದರು.

ಯಲಹಂಕದ ಸುರಭಿ ಲೇಔಟ್‌ನ ನಿವಾಸಿ, ಮಾನಸಿಕ ಅಸ್ವಸ್ಥ ರಾಮಕೃಷ್ಣ  (45) ಎಂಬಾತ ಭಾನುವಾರ ಬೆಳಗ್ಗೆ 9 ಗಂಟೆಗೆ “ನಮ್ಮ-100′ ಮತ್ತು ಯಲಹಂಕ ಠಾಣೆಗೆ ಕರೆ ಮಾಡಿ, ನಾನು ಸುರಭಿ ಲೇಔಟ್‌ ನಿವಾಸಿ ಭಾನುವಾರ ಬೆಳಗ್ಗೆ ಅಪರಿಚಿತರು ತನ್ನ ಪತ್ನಿ, ಮಗಳನ್ನು ಅತ್ಯಾಚಾರ ಮಾಡಿ ಕೊಲೆಗೈದು ಪರಾರಿಯಾಗಿದ್ದಾರೆ ಎಂದು ಕರೆ ಸ್ಥಗಿತಗೊಳಿಸಿದ್ದಾನೆ.

“ನಮ್ಮ-100′ ಸಿಬ್ಬಂದಿ ಕೂಡಲೇ ಯಲಹಂಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಠಾಣೆ ಸಿಬ್ಬಂದಿ ಮೊಬೈಲ್‌ ಟ್ರ್ಯಾಪ್‌ ಮಾಡಿಕೊಂಡು ರಾಮಕೃಷ್ಣನ ಪತ್ತೆಗಾಗಿ, ಎರಡು ತಂಡಗಳಾಗಿ ಕಾರ್ಯಾಚರಣೆಗೆ ಇಳಿದಿದ್ದರು. ಒಂದು ತಂಡ ಸುರಭಿ ಲೇಔಟ್‌ನ ತನ್ನ ಜಮೀನಿನಲ್ಲಿ ಕುಳಿತಿದ್ದ ರಾಮಕೃಷ್ಣನನ್ನು ಪತ್ತೆ ಹಚ್ಚಿದರೆ, ಮತ್ತೂಂದು ತಂಡ ಸ್ಥಳೀಯರಿಂದ ರಾಮಕೃಷ್ಣನ ಮನೆ ಪತ್ತೆ ಮಾಡಿ ಸ್ಥಳಕ್ಕೆ ಧಾವಿಸಿತ್ತು.

ಮನೆಯಲ್ಲಿ ಟಿವಿ ವೀಕ್ಷಣೆ ಮಾಡುತ್ತಿದ್ದ ರಾಮಕೃಷ್ಣನ ಪತ್ನಿ ಸಾವಿತ್ರಿ ಹಾಗೂ ಮಗಳಿಗೆ ಪೊಲೀಸರು ಕೇಳಿದ ಪ್ರಶ್ನೆಗೆ ಇಬ್ಬರು ಒಂದು ಕ್ಷಣ ಕಂಗಲಾದರು. ಇದೇ ವೇಳೆ ಮತ್ತೂಂದು ತಂಡ ರಾಮಕೃಷ್ಣನನ್ನು ಮನೆಗೆ ಕರೆತಂದಿತ್ತು. ಬಳಿಕ ಇಬ್ಬರನ್ನು ವಿಚಾರಿಸಿದಾಗ ರಾಮಕೃಷ್ಣ  ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಯಿತು. ಪತಿ ನಮ್ಮ ಸಂಬಂಧಿಕರು ಹಾಗೂ ಪರಿಚಯಸ್ಥರಿಗೂ ಇದೇ ರೀತಿ ಕರೆ ಮಾಡಿ ಸುಳ್ಳು ಹೇಳುತ್ತಾರೆ.

ಅವರ ಪರವಾಗಿ ನಾವು ಕ್ಷಮೆ ಕೇಳುತ್ತೇನೆ. ಅವರು ಕೆಲ ವರ್ಷಗಳಿಂದ ಮಾನಸಿಕ ಖನ್ನತೆಗೊಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನು ಕೂಲಿ ಕೆಲಸ ಮಾಡಿಕೊಂಡು, ಒಬ್ಬಳೇ ಮಗಳನ್ನು ಓದಿಸುತ್ತಿದ್ದೇನೆ. ಮುಂದೆ ಈ ತರಹದ ಘಟನೆ ನಡೆಯದಂತೆ ಎಚ್ಚರ ವಹಿಸುತ್ತೇವೆ ಎಂದು ಪೊಲೀಸರಲ್ಲಿ ಮನವಿ ಮಾಡಿದರು. ವಿಷಯ ತಿಳಿದು ನಿಟ್ಟುಸಿರು ಬಿಟ್ಟ ಪೊಲೀಸರು ರಾಮಕೃಷ್ಣನಿಗೆ ಎಚ್ಚರಿಕೆ ನೀಡಿ ಸ್ಥಳದಿಂದ ತೆರಳಿದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.