ಉತ್ತರ ಕರ್ನಾಟಕದಲ್ಲಿ ಮೈಸೂರು ಚಿತ್ರಕಲೆ ಪ್ರಚಾರ


Team Udayavani, Jun 29, 2019, 3:09 AM IST

chitrakal;e

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಸಾಂಪ್ರದಾಯಿಕ ಮೈಸೂರು ಚಿತ್ರಕಲೆ ಪ್ರಚುರಪಡಿಸಲು ಕರ್ನಾಟಕ ಲಲಿತಕಲಾ ಅಕಾಡೆಮಿ ಮುಂದಾಗಿದೆ. ತಂಜಾವೂರು ಮತ್ತು ಸಾಂಪ್ರದಾಯಿಕ ಮೈಸೂರು ಚಿತ್ರಕಲೆ ಎರಡು ಒಂದೇ ಎಂದು ಇಂದಿನ ಯುವ ಪೀಳಿಗೆ ಭಾವಿಸಿದೆ.

ಆದರೆ, ಈ ತಪ್ಪು ತಿಳಿವಳಿಕೆ ಹೋಗಲಾಡಿಸಿ ಎರಡು ಚಿತ್ರಕಲೆಗಳ ನಡುವೆ ಇರುವ ವ್ಯತ್ಯಾಸ ಹಾಗೂ ಸಾಂಪ್ರದಾಯಿಕ ಮೈಸೂರು ಚಿತ್ರಕಲೆಯ ಶ್ರೀಮಂತಿಕೆ ಕುರಿತು ಅರಿವು ಮೂಡಿಸಲು ಅಕಾಡೆಮಿ ಜುಲೈನಲ್ಲಿ ಮೂರು ದಿನಗಳ ಶಿಬಿರ ಏರ್ಪಡಿಸಿದೆ.

ಬಳ್ಳಾರಿಯಲ್ಲಿ ನಡೆಯುವ ಈ ಶಿಬಿರಕ್ಕೆ ಈಗಾಗಲೇ ಪದವಿ ಪಡೆದ ಹಾಗೂ ಬೇರೆ ಬೇರೆ ಮಾಧ್ಯಮದ ಕಲಾಕೃತಿಗಳಲ್ಲಿ ನುರಿತ 20 ಯುವ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಸಾಂಪ್ರದಾಯಿಕ ಮೈಸೂರು ಚಿತ್ರಕಲೆಯ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ ಮತ್ತು ಆ ಶೈಲಿಯ ಕಲಾಕೃತಿಗಳ ರಚನೆಯಲ್ಲಿ ಪರಿಣಿತರಾದವರ ಮೂಲಕ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುವುದು.

ತರಬೇತಿಗೆ ಆಯ್ಕೆ ಸಮಿತಿ ಈಗಾಗಲೇ 20 ಶಿಬಿರಾರ್ಥಿಗಳನ್ನು ಆಯ್ಕೆ ಮಾಡಿದ್ದು, ಅವರ ವಿವರಗಳನ್ನು ಮತ್ತು ಖರ್ಚು ವೆಚ್ಚಗಳ ಅಂದಾಜು ಪಟ್ಟಿಯನ್ನು ಅಕಾಡೆಮಿಗೆ ಸಲ್ಲಿಸಬೇಕಿದೆ. ಶಿಬಿರಾರ್ಥಿಗಳಿಗೆ 15 ಸಾವಿರ ರೂ. ಗೌರವ ಸಂಭಾವನೆ ನೀಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಪ್ರೊ.ಎಂ.ಜೆ.ಕಮಲಾಕ್ಷಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಮೈಸೂರು ಅರಸರು ಪೋಷಿಸಿದ ಕಲೆ: ಸಾಂಪ್ರದಾಯಿಕ ಮೈಸೂರು ಚಿತ್ರಕಲೆಯು ದಕ್ಷಿಣ ಭಾರತದ ಶಾಸ್ತ್ರೀಯ ಚಿತ್ರಕಲೆಯಲ್ಲಿ ಪ್ರಮುಖವಾದುದು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಹುಟ್ಟಿಕೊಂಡ ಈ ಕಲೆಯನ್ನು ಮೈಸೂರು ರಾಜರು ಪೋಷಿಸಿ ಬೆಳೆಸಿದರು. ಒಡೆಯರ್‌ ಆಡಳಿತ ಕಾಲದಲ್ಲಿ ದೇವಾಲಯಗಳು ಮತ್ತು ಅರಮನೆಗಳಲ್ಲಿ ಪೌರಾಣಿಕ ದೃಶ್ಯಗಳನ್ನು ರಚಿಸಲು ಕಲಾವಿದರಿಗೆ ಅವಕಾಶ ನೀಡಿ ಪ್ರೋತ್ಸಾಹಿಸಿದರು.

ಮೈಸೂರಿನ ಪ್ರಾಚೀನ ವರ್ಣಚಿತ್ರಕಾರರು ನೈಸರ್ಗಿಕ ಮೂಲಗಳಿಂದ ಅಂದರೆ ಎಲೆಗಳು, ಹೂಗಳು, ಕಲ್ಲುಗಳು ಮತ್ತು ತರಕಾರಿಗಳಿಂದ ಬಣ್ಣಗಳನ್ನು ತಯಾರಿಸುತ್ತಿದ್ದರು. ತರಕಾರಿಗಳಿಂದ ತಯಾರಿಸಿದ ಬಣ್ಣ ದೀರ್ಘ‌ಕಾಲ ಇರುವುದರಿಂದ ಇಂದಿಗೂ ಒಡೆಯರ್‌ ಕಾಲದ ಚಿತ್ರಗಳು ತಮ್ಮ ಹಿಂದಿನ ಹೊಳಪನ್ನು ಇಂದಿಗೂ ಉಳಿಸಿಕೊಂಡಿವೆ.

ಮೈಸೂರು ಚಿತ್ರಕಲೆಯಲ್ಲಿ ಒಡವೆಗಳಿಗೆ ಬಳಸುವ ಬಣ್ಣ ಶುದ್ಧ ಬಂಗಾರದಿಂದ ಕೂಡಿರುತ್ತದೆ. 24 ಕ್ಯಾರೇಟ್‌ ಚಿನ್ನದಿಂದ ತಯಾರಿಸಲಾದ ಬಣ್ಣವನ್ನೇ ಬಳಸಲಾಗುವುದು. ಇದಕ್ಕೆ ಬಂಗಾರದ ರೇಖು ಎಂದು ಕರೆಯಲಾಗುವುದು. ಇದು ಕೋಟ್ಯಾಂತರ ರೂಪಾಯಿಗಳ ಮೌಲ್ಯವನ್ನು ಒಳಗೊಂಡಿರುತ್ತವೆ. ಇದರ ಮಹತ್ವದ ಬಗ್ಗೆ ಉತ್ತರ ಕರ್ನಾಟಕ ಭಾಗದವರಿಗೆ ತಿಳಿಸುವುದು ಒಟ್ಟಾರೆ ಯೋಜನೆಯ ಉದ್ದೇಶವಾಗಿದೆ.

ಮೈಸೂರು ಚಿತ್ರಕಲೆ ವಿಶೇಷತೆಗಳು
* ಎಲೆ, ಹೂವು, ಕಲ್ಲು ಮತ್ತು ತರಕಾರಿಗಳಿಂದ ತಯಾರಿಸಿದ ಬಣ್ಣಗಳ ಬಳಕೆ.
* ನೈಸರ್ಗಿಕ ಬಣ್ಣದ ದೀರ್ಘ‌ಕಾಲದ ಬಾಳಿಕೆ ಬಗ್ಗೆ ಅರಿತಿದ್ದ ವರ್ಣಚಿತ್ರಕಾರರು.
* ಒಡವೆಗಳಿಗೆ 24 ಕ್ಯಾರೇಟ್‌ ಚಿನ್ನದಿಂದ ತಯಾರಿಸಲಾದ ಬಣ್ಣದ ಬಳಕೆ.
* ಚಿನ್ನದ ಬಣ್ಣಕ್ಕೆ ಬಂಗಾರದ ರೇಖು ಎಂದು ಕರೆಯುವ ಕಲಾವಿದರು.
* ಒಂದೊಂದು ಚಿತ್ರ ಆಕೃತಿಯ ಬೆಲೆಯೂ ಕೋಟಿ ಕೋಟಿ.

* ಶ್ರುತಿ ಮಲೆನಾಡತಿ

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.