ಸಮ್ಮಿಶ್ರ ಸರ್ಕಾರ ನಿಭಾಯಿಸಿದ್ದ “ಚಾಣಾಕ್ಷ


Team Udayavani, Jul 28, 2017, 7:30 AM IST

Ban28071707Medn.jpg

ಬೆಂಗಳೂರು: ರಾಜ್ಯ ರಾಜಕಾರಣದ “ಅಜಾತಶತ್ರು’ ಸದಾ ನಗುಮುಖದ ಧರಂಸಿಂಗ್‌ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಇಪ್ಪತ್ತು ತಿಂಗಳ ಕಾಲ ಚಾಣಾಕ್ಷತನದಿಂದ ನಿಭಾಯಿಸಿದ್ದರು.

ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ಜೆಡಿಎಸ್‌ ಹೈಕಮಾಂಡ್‌ ಎರಡರ ಜತೆಯೂ ಸಮನ್ವಯತೆ ಸಾಧಿಸಿ ಆಡಳಿತ ನಡೆಸುವುದು ಒಂದು ರೀತಿಯಲ್ಲಿ ಧರಂಸಿಂಗ್‌ ಅವರಿಗೆ ಸವಾಲೇ ಆಗಿತ್ತು. ಆ ಸವಾಲನ್ನು ಇಪ್ಪತ್ತು ತಿಂಗಳ ಕಾಲ ಧರಂಸಿಂಗ್‌ ಸಮರ್ಥವಾಗಿ ನಿರ್ವಹಿಸಿದ್ದರು. ಎಂತಹುದೇ ಸಮಸ್ಯೆ ಎದುರಾದರೂ ಮುಗುಳ್ನಗೆ ಬೀರಿ ಚಾಣಾಕ್ಷತನದಿಂದ ನಿರ್ವಹಣೆ ಮಾಡುತ್ತಿದ್ದರು.

2004ರಲ್ಲಿ ಎಸ್‌.ಎಂ.ಕೃಷ್ಣ ಅವರು ಅವಧಿಗೆ ಮುನ್ನ ವಿಧಾನಸಭೆ ಚುನಾವಣೆಗೆ ಹೋದಾಗ ಯಾವ ಪಕ್ಷಕ್ಕೂ ಬಹುಮತ ಬಾರದೆ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಆಗ, ಮತ್ತೆ ಚುನಾವಣೆಗೆ ಹೋಗುವುದನ್ನು ತಡೆಯಲು ಮಹಾರಾಷ್ಟ್ರ, ಜಮ್ಮು-ಕಾಶ್ಮೀರ ಮಾದರಿ ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಯಿತು. ಅದರ ಭಾಗವಾಗಿ ರಾಜ್ಯದಲ್ಲಿ ಜೆಡಿಎಸ್‌ ಜತೆ ಸೇರಿ ಸಮ್ಮಿಶ್ರ ಸರ್ಕಾರ ರಚನೆ ತೀರ್ಮಾನವಾಯಿತು.

ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್‌ಗೊ, ಜೆಡಿಎಸ್‌ಗೊ ಎಂಬ ಬಗ್ಗೆಯೇ ಎರಡು ದಿನ ದೆಹಲಿಯಲ್ಲಿ ಕಸರತ್ತು ಅಂತಿಮವಾಗಿ ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನ ಎಂಬ ಒಪ್ಪಂದವಾದಾಗ ಆ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ಎರಡೂ ಪಕ್ಷ ಒಪ್ಪುವ ಸರ್ವಸಮ್ಮತ ಅಭ್ಯರ್ಥಿ ಆಗಬೇಕೆಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಷರತ್ತು ವಿಧಿಸಿದ್ದರು. ಆಗ, ಮುಖ್ಯಮಂತ್ರಿ ಹುದ್ದೆಗೆ ಎಸ್‌.ಎಂ.ಕೃಷ್ಣ, ಮಲ್ಲಿಕಾರ್ಜುನ ಖರ್ಗೆ, ಎಚ್‌.ಕೆ.ಪಾಟೀಲ್‌ ಹೆಸರು ಕೇಳಿ ಬಂದಿತ್ತು. ಅಂತಿಮವಾಗಿ ಎಲ್ಲರಿಗೂ ಒಪ್ಪುವ ಯಾರೊಂದಿಗೂ ದ್ವೇಷ ಸಾಧಿಸದ ಧರಂಸಿಂಗ್‌ ಸರ್ವಸಮ್ಮತ ಅಭ್ಯರ್ಥಿಯಾಗಿ ಹೊರ ಹೊಮ್ಮಿದರು.

ಕಾಂಗ್ರೆಸ್‌ ಶಾಸಕಾಂಗ ‌ಪಕ್ಷದ ಸಭೆಯಲ್ಲಿ ಮತಕ್ಕೆ ಹಾಕಿದಾಗಲೂ ಧರಂಸಿಂಗ್‌ಗೆ ಅತಿ ಕಡಿಮೆ ಮತ ಬಿದ್ದರೂ ದೇವೇಗೌಡರ ಕೃಪೆಯಿಂದ ಮುಖ್ಯಮಂತ್ರಿಯಾದರು.

ಆಶ್ಚರ್ಯ ಎಂದರೆ, ಈಗ ಜೆಡಿಎಸ್‌ನಲ್ಲಿರುವ ಆಗಿನ ಕಾಂಗ್ರೆಸ್‌ ನಾಯಕ ಎಚ್‌. ವಿಶ್ವನಾಥ್‌ ಅವರು ಧರಂಸಿಂಗ್‌ ಮುಖ್ಯಮಂತ್ರಿಯಾಗಲು ಪ್ರಮುಖ ಪಾತ್ರ ವಹಿಸಿದ್ದರು. ಎಸ್‌.ಎಂ.ಕೃಷ್ಣ ಅವರನ್ನು ಒಪ್ಪದಿದ್ದಾಗ ಧರಂಸಿಂಗ್‌ ಹೆಸರು ಪ್ರಸ್ತಾಪಿಸಿ ಹೊಂದಾಣಿಕೆಗೆ ಸಮಸ್ಯೆಯಾಗದು ಎಂದು ಹೇಳಿ ಒಪ್ಪಿಸಿದ್ದು ಇದೇ ವಿಶ್ವನಾಥ್‌ ಹಾಗೂ ವಿಠಲ್‌ ಹೆರೂರ್‌. ದೇವರಾಜ ಅರಸು ಗರಡಿಯಲ್ಲಿ ಪಳಗಿದ ಧರಂಸಿಂಗ್‌-ವಿಶ್ವನಾಥ್‌ ಪರಸ್ಪರ ಆತ್ಮೀಯತೆಯನ್ನೂ ಹೊಂದಿದ್ದವರು.
ಅದೇ ಆತ್ಮೀಯತೆಯಿಂದ ವಿಶ್ವನಾಥ್‌ ಅವರು ಧರಂಸಿಂಗ್‌ ಮುಖ್ಯಮಂತ್ರಿಯಾಗಲು ತೆರೆ ಮರೆಯಲ್ಲಿ ಶ್ರಮಿಸಿದ್ದರು.

ಧರಂಸಿಂಗ್‌ ಪಕ್ಷ ನಿಷ್ಠೆಯೂ ಆಗ ಕೈ ಹಿಡಿಯಿತು. ನಂತರ 20 ತಿಂಗಳ ಕಾಲ ಚಾಕಚಕ್ಯತೆಯಿಂದ ಮುಖ್ಯಮಂತ್ರಿಯಾಗಿ ಆಡಳಿತ ನಡೆದ ಧರಂಸಿಂಗ್‌, ಕೆಲವು ಪ್ರಮುಖ ನಿರ್ಧಾರ ಕೈಗೊಳ್ಳುವಾಗ ಎಚ್‌.ಡಿ. ದೇವೇಗೌಡರ ಜತೆ ಬಾಲಬ್ರೂಯಿಯಲ್ಲಿ ಸಮಾಲೋಚನೆ ನಡೆಸುತ್ತಿದ್ದರು. ಸಂಪುಟದ ಮಹತ್ವದ ತೀರ್ಮಾನಗಳ ಬಗ್ಗೆ ದೂರವಾಣಿ ಮೂಲಕ ಸಲಹೆ-ಸೂಚನೆ ಪಡೆಯುತ್ತಿದ್ದರು.

ಹಾಗೆ ನೋಡಿದರೆ ಧರಂಸಿಂಗ್‌ ಜೆಡಿಎಸ್‌ ನಡುವೆ ಎಂದೂ ಸಮಸ್ಯೆಯೇ ಇರಲಿಲ್ಲ. ಆದರೆ, ಒಮ್ಮೆಲೆ ಸಿದ್ದರಾಮಯ್ಯ ಅಹಿಂದದತ್ತ ಹೊರಳಿದ್ದರಿಂದ ಆಗಿನ ಪರಿಸ್ಥಿತಿಯಲ್ಲಿ ರಾಜಕೀಯ ಧ್ರುವೀಕರಣ ನಡೆದು ಸಮ್ಮಿಶ್ರ ಸರ್ಕಾರ ಪತನವಾಗಿ
ಧರಂಸಿಂಗ್‌ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಯಿತು. ಧರಂಸಿಂಗ್‌ ಜೆಡಿಎಸ್‌ ಬಗ್ಗೆ ಯಾವುದೇ ಶಂಕೆ ಇಟ್ಟುಕೊಂಡಿರಲಿಲ್ಲ. ಎಲ್ಲದಕ್ಕೂ ಎಚ್‌.ಡಿ. ದೇವೇಗೌಡರ ಮಾತೇ ಅಂತಿಮ, ಅವರು ಹಾಕಿದ ಗೆರೆ ಯಾರೂ ದಾಟುವುದಿಲ್ಲ ಎಂದೇ ನಂಬಿದ್ದರು.

ಆದರೆ, ಎಚ್‌.ಡಿ.ಕುಮಾರಸ್ವಾಮಿ-ಬಿ.ಎಸ್‌.ಯಡಿಯೂರಪ್ಪ ನಡುವಿನ ರಹಸ್ಯ ಮಾತುಕತೆ ಫ‌ಲವಾಗಿ ಜೆಡಿಎಸ್‌ ಹಾಗೂ ಬಿಜೆಪಿ ಶಾಸಕರು ರಾಜ್ಯಪಾಲರ ಮುಂದೆ ಪರೇಡ್‌ ನಡೆಸಲು ರಾಜಭವನದ ದ್ವಾರ ಪ್ರವೇಶಿಸಿದಾಗಲೇ ಧರಂಸಿಂಗ್‌ ಅವರಿಗೆ ರಾಜಕೀಯವಾಗಿ ಏನೋ ಆಗುತ್ತಿದೆ ಎಂಬುದು ಗೊತ್ತಾಗಿದ್ದು. ಅಷ್ಟರಲ್ಲಾಗಲೇ ಹೊಂದಾಣಿಕೆ ಮಾತುಕತೆ, ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ಸ್ಥಾನದ ಹಂಚಿಕೆ, ಸಚಿವ ಸ್ಥಾನಗಳ ಹಂಚಿಕೆ ಎಲ್ಲವೂ ಮುಗಿದು ಹೋಗಿತ್ತು. ದೇವೇಗೌಡರು ಅಸಹಾಯಕರಾಗಿ ಕೈ ಚೆಲ್ಲಿದರು.

ಅಜಾತಶತ್ರು ಧರಂಸಿಂಗ್‌ ಏನೂ ತಪ್ಪು ಮಾಡದೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಯಿತು. ಆದರೆ, ಧರಂಸಿಂಗ್‌ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವಾಗ ಎಷ್ಟು ನಿರ್ಲಿಪ್ತತೆಯಿಂದ ಇದ್ದರೋ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ದಿನವೂ ಅದೇ ನಿರ್ಲಿಪ್ತತೆ ಅವರಲ್ಲಿ ಕಾಣುತ್ತಿತ್ತು.

– ಎಸ್‌.ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.