ನಾಗನದ್ದು ದಿನಕ್ಕೊಂದು ರಾಜ್ಯ, ಕ್ಷಣಕ್ಕೊಂದು ಸಿಮ್
Team Udayavani, Apr 21, 2017, 11:35 AM IST
ಬೆಂಗಳೂರು: ಅಪಹರಣ ಹಾಗೂ ಸುಲಿಗೆ ಪ್ರಕರಣದ ಆರೋಪಿ ಬಾಂಬ್ ನಾಗನ ಪತ್ತೆಗೆ ರಚಿಸಲಾಗಿರುವ ಪೊಲೀಸ್ ತಂಡ, ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಹುಡುಕಾಟ ಮುಂದುವರಿಸಿದೆ.
ಪೊಲೀಸರಿಗೆ ಸಿಕ್ಕಿ ಬೀಳುವ ಭಯದಿಂದ ನಾಗ ತಮಿಳುನಾಡು, ಕೇರಳ, ಆಂಧ್ರಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾನೆ. ದಿನಕ್ಕೊಂದು ಸಿಮ್ ಕಾರ್ಡ್ ಉಪಯೋಗಿಸಿ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳುತ್ತಿದ್ದಾನೆ. ಸಿಮ್ ಕಾರ್ಡ್ ಬದಲಾಗುತ್ತಿರುವುದರಿಂದ ಆತ ಇರುವ ಸ್ಥಳದ ಪತ್ತೆ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.
ನಿತ್ಯ ಬಂದು ಊಟ ಮಾಡ್ತಿದಾರೆ!: ನಾಗನ ಪತ್ನಿ ಪೊಲೀಸರಿಗೆ ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ತನ್ನ ಪತಿ ಪ್ರತಿನಿತ್ಯ ಮನೆಗೆ ಬಂದು ಊಟ ಮಾಡಿಕೊಂಡು ಹೋಗುತ್ತಿದ್ದಾರೆ. ಅವರ ಕೆಲಸಗಳಲ್ಲಿ ಮಗ್ನರಾಗಿದ್ದಾರೆಯೇ ಹೊರತು ಎಲ್ಲೂ ಹೋಗಿಲ್ಲ ಎಂದು ಹೇಳುತ್ತಿದ್ದಾರೆ.
ಏಪ್ರಿಲ್ 24ಕ್ಕೆ ಮುಂದೂಡಿಕೆ: ಪ್ರಕರಣ ಸಂಬಂಧ ನಾಗರಾಜ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿರುವ ಸೆಷನ್ಸ್ ಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ. ನಾನು ಹಲವು ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದು,
-ನನ್ನ ವಿರುದ್ಧ ಅಪಹರಣ ಹಾಗೂ ಕೊಲೆಬೆದರಿಕೆ ದೂರು ದಾಖಲಿಸಿರುವ ವ್ಯಕ್ತಿ ಬ್ಲ್ಯಾಕ್ ಅಂಡ್ ವೈಟ್ ದಂಧೆಯಲ್ಲಿ ತೊಡಗಿ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದು, ಆತನ ದೂರು ಆಧರಿಸಿ ನನ್ನನ್ನು ಬಂಧಿಸುವುದು ಸರಿಯಿಲ್ಲ. ಹೀಗಾಗಿ, ನನಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ನಾಗರಾಜ್ ಅರ್ಜಿಯಲ್ಲಿ ಕೋರಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ