ಉಪ ಚುನಾವಣೆಯಲ್ಲಿ 50,000 ಮತಗಳ ಅಂತರದಲ್ಲಿ ಗೆಲುವು


Team Udayavani, Oct 31, 2020, 11:51 AM IST

ಉಪ ಚುನಾವಣೆಯಲ್ಲಿ 50,000 ಮತಗಳ ಅಂತರದಲ್ಲಿ ಗೆಲುವು

ಬೆಂಗಳೂರು: ಉಪಚುನಾವಣೆ ನಡೆದಿರುವ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ 50,000 ಹಾಗೂ ಶಿರಾ ಕ್ಷೇತ್ರದಲ್ಲಿ 15,000ದಿಂದ 20,000 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭವಿಷ್ಯ ನುಡಿದರು.

ಬಿಜೆಪಿ ನಗರ ಕಚೇರಿಯಿಂದ ಶುಕ್ರವಾರ ವರ್ಚ್ಯುವಲ್‌ ಕಾರ್ಯಕ್ರಮದ ಮೂಲಕ ಕ್ಷೇತ್ರದ ಮತದಾರರು, ಪ್ರಮುಖರೊಂದಿಗೆ ಸಂವಾದ ನಡೆಸಿದ ಅವರು, ಕೋವಿಡ್‌ ಹಿನ್ನೆಲೆಯಲ್ಲಿ ಎಲ್ಲಾ ಮತದಾರರನ್ನು ನೇರವಾಗಿ ಸಂಪರ್ಕಿಸಲು ಸಾಧ್ಯವಾಗದ ಕಾರಣ ವಿಡಿಯೋ ಸಂವಾದದಮೂಲಕ ಪ್ರಚಾರ ನಡೆಸಿ ಮತಯಾಚಿಸಲಾಗುತ್ತಿದೆ. ಕಾಂಗ್ರೆಸ್‌ ಸೋಲಿನ ಭೀತಿಯಲ್ಲಿ ಜಾತಿ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಎಂದಿಗೂ ಜಾತಿ ರಾಜಕಾರಣ ಮಾಡುವುದಿಲ್ಲ. ಅಭಿವೃದ್ಧಿ ಮೂಲಕ ಮತ ಕೇಳುತ್ತೇವೆ. ಅಪಪ್ರಚಾರ ಮಾಡುವ, ಗಲಭೆ ಸೃಷ್ಟಿಸುವ ನೀಚ ರಾಜಕಾರಣಕ್ಕೆ ಅಂತ್ಯ ಹಾಡಬೇಕಿದೆ ಎಂದು ಹೇಳಿದರು.

ಡಿ.ಜೆ.ಹಳ್ಳಿ ಗಲಭೆ ಕಾಂಗ್ರೆಸ್‌ ಸೃಷ್ಟಿ: ಈ ಉಪಚುನಾವಣೆಯಲ್ಲಿ ಪಕ್ಷ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಪ್ರಶ್ನೆಗಿಂತ ನಗರದ ಜನರ ಭವಿಷ್ಯದ ಪ್ರಶ್ನೆ ಮುಖ್ಯ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ಗಲಭೆ ಸೃಷ್ಟಿಸಿ ದಲಿತ ಶಾಸಕನ ಮನೆಗೆ ಬೆಂಕಿ ಹಚ್ಚಲಾಯಿತು. ಈ ಗಲಭೆ ಸೃಷ್ಟಿ ಮಾಡಿದ್ದೇ ಕಾಂಗ್ರೆಸ್‌. ಕಾಂಗ್ರೆಸ್‌ ಸಂಪತ್‌ರಾಜ್‌ ಮೂಲಕ ಬೆಂಕಿ ಹಾಕಿಸಿತು. ಸಂಪತ್‌ರಾಜ್‌ ಆಸ್ಪತ್ರೆಯಿಂದ ಪರಾರಿಯಾಗಲು ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್‌ ಮೂಲ ಕಾರಣ ಎಂದು ಆರೋಪಿಸಿದರು.

ಈ ರೀತಿಯ ಗಲಭೆಗಳು ನಡೆಯಲಾರಂಭಿಸಿದರೆ ಜನರ ಸ್ಥಿತಿ ಏನಾಗಬಹುದು? ಬಿಜೆಪಿ ಸರ್ಕಾರ 2 ಗಂಟೆಯಲ್ಲಿ ಗಲಭೆಯನ್ನು ನಿಯಂತ್ರಿಸಿತು. ಒಂದೊಮ್ಮೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಿದ್ದರೆ ಇಡೀ ರಾಜ್ಯಕ್ಕೆ ಬೆಂಕಿ ಬೀಳುತ್ತಿತ್ತು. ತನ್ನ ಶಾಸಕನನ್ನೇ ರಕ್ಷಿಸಿಕೊಳ್ಳಲಾಗದ ಕಾಂಗ್ರೆಸ್‌ನಿಂದ ರಾಜರಾಜೇಶ್ವರಿ  ನಗರ ಕ್ಷೇತ್ರದ ಜನರ ರಕ್ಷಣೆ ಸಾಧ್ಯವೇ. ಮೂಲ ಸೌಕರ್ಯದ ಜತೆಗೆ ಕಾನೂನು ಮತ್ತು ಸುವ್ಯವಸ್ಥೆಯೂ ಮುಖ್ಯ. ಹೀಗಾಗಿ ಯೋಚಿಸಿ ಮತಹಾಕಿ ಎಂದು ಮನವಿ ಮಾಡಿದರು.

ಸಿದ್ದರಾಮಣ್ಣ ಮುಖ್ಯಮಂತ್ರಿಯಾಗಿದ್ದಾಗ ಶಾಸಕರೊಬ್ಬರು ಸದನದಲ್ಲಿ ಮಕ್ಕಳು ಮಾದಕ ವಸ್ತುಗಳಿಗೆ ದಾಸರಾಗುತ್ತಿರುವುದಾಗಿ ಕಣ್ಣೀರಿಟ್ಟರು. ಆಗ ಸಮಾಜವಾದಿ ಚಿಂತನೆಯ ಮಜಾವಾದಿ ಸಿದ್ದರಾಮಣ್ಣ ಮಾದಕ ವಸ್ತು ಮಾಫಿಯಾದೊಂದಿಗೆ ಕೈಜೋಡಿಸಿ ಒಬ್ಬರನ್ನೂ ಬಂಧಿಸಲಿಲ್ಲ. ಮಾದಕ ವಸ್ತು ಮಾರಾಟಗಾರರ ಹಣದಲ್ಲಿ ಕಾಂಗ್ರೆಸ್‌ ರಾಜಕಾರಣ ಮಾಡಿತ್ತು. ಆದರೆ ನಮ್ಮ ಯಡಿಯೂರಪ್ಪ ಸರ್ಕಾರ ಇಡೀ ರಾಜ್ಯದಲ್ಲಿ ಮಾದಕ ವಸ್ತು ಜಾಲಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಡ್ರಗ್ಸ್‌ ಮುಕ್ತ ಕರ್ನಾಟಕ ನಮ್ಮ ಗುರಿ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷ ಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.