ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಖಚಿತ: ಕಟೀಲು
Team Udayavani, Apr 17, 2022, 7:15 AM IST
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸ್ಥಾನಗಳಿಸಲಿದೆ. ಯಡಿಯೂರಪ್ಪ ಅವರು ರೈತಬಂಧುವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಹೇಳಿದರು.
ಭಾರತದ ಕುರಿತು ವಿಶ್ವದೆಲ್ಲೆಡೆ ಗೌರವ ಪ್ರಾಪ್ತಿಯಾಗುತ್ತಿದೆ. ಇದಕ್ಕೆ ಮಹಾನ್ ಪುರುಷ ಮೋದಿ ಕಾರಣಕರ್ತರು. ಉಕ್ರೇನ್ನಿಂದ ಸಾವಿರಾರು ಭಾರತೀಯರನ್ನು ಕರೆತಂದು ನಮ್ಮ ಗೌರವ ಹೆಚ್ಚಿಸಿಕೊಂಡಿದ್ದೇವೆ. ತೆರೆಮರೆಯ ಸಾಧಕರಾದ ಮಹಾಲಿಂಗ ನಾಯ್ಕ, ಹಾಜಬ್ಬ ರಂಥವರಿಗೆ ಪದ್ಮಶ್ರೀ ನೀಡಲಾಗುತ್ತಿದೆ. ಜಗ ದ್ವಂದ್ಯ ಭಾರತ ನಿರ್ಮಾಣಕ್ಕೆ ಮೋದಿ ನೇತೃತ್ವದ ಸರಕಾರ ಮುಂದಾಗಿದೆ ಎಂದು ತಿಳಿಸಿದರು.
ಮೋದಿ ಸರಕಾರದ ಏಳೂವರೆ ವರ್ಷಗಳ ಆಡಳಿತದಲ್ಲಿ ಭ್ರಷ್ಟಾಚಾರದ ಒಂದೇ ಒಂದು ಕಳಂಕವಿಲ್ಲ. ಮುದ್ರಾ, ಜನಧನ್ ಸೇರಿದಂತೆ ಎಲ್ಲಿಯೂ ಭ್ರಷ್ಟಾಚಾರ ಇಲ್ಲ. ಒಂದೇ ಒಂದು ರೂಪಾಯಿ ಸೋರಿಕೆ ಆಗಿಲ್ಲ. ಕಿಸಾನ್ ಸಮ್ಮಾನ್ ಯೋಜನೆ ರೈತರನ್ನು ನೇರವಾಗಿ ತಲುಪುತ್ತಿದೆ. ಆಡಳಿತದಲ್ಲಿ ಪರಿವರ್ತನೆ ಸಾಧ್ಯವಾಗುತ್ತಿದೆ ಎಂದರು.
ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕರ್ನಾಟಕವು ಸ್ವಾಭಿಮಾನಿ ಕರ್ನಾಟಕವಾಗಿ ಪರಿವರ್ತನೆ ಹೊಂದುತ್ತಿದೆ. ರೈತವಿದ್ಯಾ ನಿಧಿ ಪರಿಕಲ್ಪನೆ ಜಾರಿ ಆಗಿದೆ. ವಿವಿಧ ಮಾಸಾಶನ ಹೆಚ್ಚಳ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷ ಯೋಜನೆಗಳು ಜಾರಿಗೊಳ್ಳುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು..
ಕರ್ನಾಟಕ ಸರಕಾರವು ಅಭಿವೃದ್ಧಿ ಪಥದಲ್ಲಿದೆ. ಭ್ರಷ್ಟಾಚಾರದ ಆರೋಪ ಮಾಡುವ ಕಾಂಗ್ರೆಸಿಗರಿಗೆ ಉತ್ತರ ಕೊಡಬೇಕು. ಅರ್ಕಾವತಿ ಯೋಜನೆ ಪರಿಶೀಲಿಸಿ ಕ್ರಮ ಕೈಗೊಂಡರೆ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಅಧ್ಯಕ್ಷರು ಜಾಮೀನಿನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಸಂಬಂಧಿಸಿದ ಕಾರ್ಯಗಳಿಗೆ ಕಾರ್ಯಕರ್ತರೇ ಸಿಗುತ್ತಿಲ್ಲ ಎಂದು ಲೇವಡಿ ಮಾಡಿದರು.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಸಹ ಉಸ್ತುವಾರಿಗಳಾದ ಡಿ.ಕೆ. ಅರುಣಾ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಆನಂದ್ ಸಿಂಗ್, ಜಿಲ್ಲಾಧ್ಯಕ್ಷರಾದ ಚನ್ನಬಸವನಗೌಡ ಪಾಟೀಲ್ ಉಪಸ್ಥಿತರಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ