ಪಿಲ್ಲರ್‌ ದುರಂತ: ಮಾರ್ಗದಲ್ಲಿವೆ 100ಕ್ಕೂ ಹೆಚ್ಚು ಉದ್ದದ ಕಂಬಗಳು!


Team Udayavani, Jan 11, 2023, 9:21 AM IST

tdy-3

ಬೆಂಗಳೂರು: ನಿರ್ಮಾಣ ಹಂತದ ಕಂಬ ಮಗುಚಿ ಎರಡು ಜೀವಗಳು ಬಲಿಯಾದ ಬೆನ್ನಲ್ಲೇ “ನಮ್ಮ ಮೆಟ್ರೋ’ ಕಾಮಗಾರಿ ನಡೆಯುತ್ತಿರುವ ಮಾರ್ಗದುದ್ದಕ್ಕೂ ತಲೆಯೆತ್ತಿರುವ ಅತಿ ಉದ್ದದ ಕಂಬಗಳ ಮೇಲೆ ವಿಶೇಷ ನಿಗಾ ಇಟ್ಟಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌), ಅವೆಲ್ಲವುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ “ಸಪೋರ್ಟ್‌’ (ಆಸರೆ) ನೀಡಲು ಮುಂದಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗ ಅದರಲ್ಲೂ ವಿಶೇಷವಾಗಿ ಹೆಬ್ಬಾಳ- ಸೆಂಟ್ರಲ್‌ ಸಿಲ್ಕ್ ಬೋರ್ಡ್‌ ನಡುವೆ ನಡೆಯುತ್ತಿರುವ ಕಾಮಗಾರಿಯಲ್ಲಿ 10 ಮೀಟರ್‌ ಮತ್ತು ಅದಕ್ಕಿಂತ ಎತ್ತರ ಇರುವ ಕಂಬಗಳನ್ನು ಗುರುತಿಸಿ, ಅವುಗಳಿಗೆ ಹೆಚ್ಚುವರಿ ಕಬ್ಬಿಣದ ಹಗ್ಗಗಳನ್ನು ಆಸರೆಯಾಗಿ ನೀಡಲಾಗುತ್ತಿದೆ. ಈ ಮೂಲಕ ಘಟನೆ ಪುನರಾವರ್ತನೆ ಆಗದಿರಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಿಗಮದ ಎಂಜಿನಿಯರ್‌ಗಳ ಪ್ರಾಥಮಿಕ ಲೆಕ್ಕಾಚಾರದ ಪ್ರಕಾರ ಸೆಂಟ್ರಲ್‌ ಸಿಲ್ಕ್ಬೋರ್ಡ್‌- ಕೆ.ಆರ್‌. ಪುರ-ಹೆಬ್ಬಾಳ ನಡುವೆ 10-12 ಮೀಟರ್‌ ಗಿಂತಲೂ ಎತ್ತರವಾಗಿರುವ 100-120 ನಿರ್ಮಾಣ ಹಂತದ ಕಂಬಗಳಿವೆ.

ಅವುಗಳಿಗೆ ಹೆಚ್ಚುವರಿ ಸಪೋರ್ಟ್‌ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಗೆ ಈಗಾಗಲೇ ಘಟನೆ ತನಿಖೆಗೆ ಮನವಿ ಮಾಡಿದೆ. ಜತೆಗೆ ರೈಟ್ಸ್‌ ಸಂಸ್ಥೆಗೂ ಘಟನೆಗೆ ಕಾರಣ ಏನಿರಬಹುದು ಎಂದು ತಿಳಿಸುವಂತೆ ಕೋರಲಾಗಿದೆ. ತಜ್ಞರು ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಮಧ್ಯೆ ಇಡೀ ಮಾರ್ಗದ ಅಂದರೆ ವಿಮಾನ ನಿಲ್ದಾಣ ಮಾರ್ಗದ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಕೆ.ಆರ್‌.ಪುರ- ಸೆಂಟ್ರಲ್‌ ಸಿಲ್ಕ್ಬೋರ್ಡ್‌ ಮಾರ್ಗದಲ್ಲಿ ಮೇಲ್ಸೇತುವೆಗಳು ಬರುತ್ತವೆ. ಕೆಲವು ಕಡೆಗಳಲ್ಲಿ ಆ ಸೇತುವೆಗಳ ಮೇಲಿನಿಂದ ಮೆಟ್ರೋ ಮಾರ್ಗ ಹಾದುಹೋಗಬೇಕಾಗುತ್ತದೆ. ಹಾಗಾಗಿ, ಕಂಬಗಳು ಹೆಚ್ಚು ಎತ್ತರದಲ್ಲಿವೆ. ಏರ್‌ ಪೋರ್ಟ್‌ ಮಾರ್ಗದಲ್ಲಿನ ಎತ್ತರದ ಕಂಬಗಳನ್ನೂ ಗುರುತಿಸಲು ಆ ಮಾರ್ಗದ ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದರು. ಮತ್ತೂಂದೆಡೆ ಕಂಬಗಳ ನಿರ್ಮಾಣ ವ್ಯವಸ್ಥೆಯಲ್ಲಿ ತಾಂತ್ರಿಕ ಬದಲಾವಣೆಗೂ ಚಿಂತನೆ ನಡೆಸಿದೆ.

ಸಾಮಾನ್ಯವಾಗಿ ಮೆಟ್ರೋ ಯೋಜನೆಗಳಲ್ಲಿ 1ರಿಂದ 2 ಮೀಟರ್‌ಗಳಲ್ಲಿ ಜೋಡಿಸುತ್ತ ವಿವಿಧ ಹಂತಗಳಲ್ಲಿ ಕಂಬಗಳನ್ನು ನಿರ್ಮಿಸಲಾಗುತ್ತದೆ. ಈ ಪದ್ಧತಿಯಲ್ಲಿ ಕಂಬಗಳ ಉದ್ದಕ್ಕೂ ಗೆರೆಗಳು ಬರುತ್ತವೆ. ಅಲ್ಲದೆ, ಪ್ರತಿ ಹಂತದಲ್ಲೂ ಕಾಂಕ್ರೀಟ್‌ ತಯಾರಿಸಬೇಕಾಗುತ್ತದೆ. ರಸ್ತೆ ಮಧ್ಯೆ ಕಾಮಗಾರಿ ನಡೆಯುವುದರಿಂದ ಇದರ ನಿರ್ವಹಣೆ ಕಷ್ಟ ಎಂಬ ಕಾರಣಕ್ಕೆ 10-12 ಮೀಟರ್‌ ಎತ್ತರದ ಕಂಬವನ್ನು ಒಂದೇ ಹಂತದಲ್ಲಿ “ನಮ್ಮ ಮೆಟ್ರೋ’ ಯೋಜನೆಯಲ್ಲಿ ನಿರ್ಮಿಸಲಾಗುತ್ತಿದೆ.

ನಾಗವಾರ ಬಳಿ ಮಂಗಳವಾರ ನಡೆದ ಘಟನೆಯು ಬಿಎಂಆರ್‌ಸಿಎಲ್‌ ಅನುಸರಿಸುತ್ತಿರುವ ಕ್ರಮವನ್ನು ಮರುಚಿಂತನೆಗೆ ಹಚ್ಚಿದ್ದು, ಇದೇ ಕಂಬಗಳನ್ನು ಎರಡು ಹಂತಗಳಲ್ಲಿ ಮಾಡಬಹುದೇ ಎಂಬುದರ ಬಗ್ಗೆ ಯೋಚಿಸಲಾಗುತ್ತಿದೆ. ಉದಾಹರಣೆಗೆ 12 ಮೀಟರ್‌ ಉದ್ದದ ಕಂಬ ಇದ್ದರೆ, ಎರಡು ಹಂತಗಳಲ್ಲಿ ಅಂದರೆ ಮೊದಲಿಗೆ 6 ಮೀಟರ್‌ ಕಟ್ಟುವುದು. ಮತ್ತೂಮ್ಮೆ 6 ಮೀಟರ್‌ ನಿರ್ಮಿಸುವ ಬಗ್ಗೆ ಆಲೋಚನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೆಯೂ ಕಂಬಗಳು ವಾಲಿದ್ದವು: ಹೀಗೆ ನಿರ್ಮಾಣ ಹಂತದಲ್ಲಿರುವ ಉದ್ದದ ಮೆಟ್ರೋ ಕಂಬಗಳು ರಸ್ತೆಗಳಿಗೆ ವಾಲುವುದು ಇದೇ ಮೊದಲಲ್ಲ; 2008-09ರಲ್ಲಿ ಮೊದಲ ಹಂತದ ರೀಚ್‌- 1ರ ಎಂ.ಜಿ. ರಸ್ತೆ- ಬೈಯಪ್ಪನಹಳ್ಳಿ ನಡುವೆ ಕಾಂಕ್ರೀಟ್‌ ಪೂರ್ವ ಹಂತದಲ್ಲಿದ್ದ ಕಂಬ ವಾಲಿತ್ತು. ಎರಡನೇ ಹಂತದಲ್ಲಿ ಕೆ.ಆರ್‌. ಪುರ ಬಳಿ ಕೂಡ ಕಂಬವು ವಾಲಿತ್ತು. ಅದೃಷ್ಟವಶಾತ್‌ ಈ ಎರಡೂ ಘಟನೆಗಳಲ್ಲಿ ಯಾವುದೇ ಅನಾಹುತಗಳು ಸಂಭವಿಸಿರಲಿಲ್ಲ. ಆದರೆ, ಸಂಚಾರದಟ್ಟಣೆಯಿಂದ ಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗಿತ್ತು. ಉದ್ದನೆಯ ಕಂಬಗಳು ವಾಲುವ ವಿಷಯವು ಗುಣಮಟ್ಟದ ವಿಚಾರಕ್ಕೆ ಸಂಬಂಧಿಸಿದ ಸಭೆಗಳಲ್ಲಿ ಹಲವು ಬಾರಿ ಪ್ರಸ್ತಾಪವೂ ಆಗಿದೆ ಎಂದು ಮೂಲಗಳು ತಿಳಿಸಿವೆ.  ಕಾಂಕ್ರೀಟ್‌ ಪೂರ್ವದ ಸುಮಾರು 12 ಮೀಟರ್‌ ಎತ್ತರದ ಒಂದು ಕಂಬವು ಹೆಚ್ಚು- ಕಡಿಮೆ 2.5ರಿಂದ 3 ಟನ್‌ ತೂಕ ಇರುತ್ತದೆ. ಅಂದಾಜು 28-32 ಎಂಎಂ ಗಾತ್ರದ ಕಬ್ಬಿಣದ ಸರಳುಗಳಿಂದಾಗಿ ಅದು ಹೆಚ್ಚು ಭಾರವಾಗಿರುತ್ತದೆ. ಒಂದು ಕಂಬಕ್ಕೆ 6 ಕ್ಯುಬಿಕ್‌ ಮೀಟರ್‌ ಅಂದರೆ ಎರಡು ಟ್ರ್ಯಾಕ್ಟರ್‌ ಲೋಡ್‌ ನಷ್ಟು ಕಾಂಕ್ರೀಟ್‌ ಬೇಕಾಗುತ್ತದೆ.

-ವಿಜಯ ಕುಮಾರ್‌ ಚಂದರಗಿ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.