ನಮ ಮೆಟ್ರೋ ಸಿಬ್ಬಂದಿ ಭತ್ಯೆ “ಬರೆ’?

24ರ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ಸಾಧ್ಯತೆ; ಈವರೆಗೆ ಭತ್ಯೆ ಬಗ್ಗೆ ಚರ್ಚಿಸಿಲ್ಲ ಎಂದ ಎಂಡಿ

Team Udayavani, Aug 21, 2020, 12:39 PM IST

ನಮ ಮೆಟ್ರೋ ಸಿಬ್ಬಂದಿ ಭತ್ಯೆ “ಬರೆ’?

ಬೆಂಗಳೂರು: ದೆಹಲಿ ಮೆಟ್ರೋ ರೈಲು ನಿಗಮ ತನ್ನ ಸಿಬ್ಬಂದಿ ಭತ್ಯೆ ಮತ್ತಿತರ ಸೌಲಭ್ಯಗಳಿಗೆ ಕತ್ತರಿ ಹಾಕಿದ ಬೆನ್ನಲ್ಲೇ “ನಮ್ಮ ಮೆಟ್ರೋ’ದಲ್ಲೂ ಕಾರ್ಯನಿರ್ವಹಿಸುವ ಸಿಬ್ಬಂದಿ ಭತ್ಯೆಗೆ “ಬರೆ’ ಎಳೆಯಲು ಚಿಂತನೆ ನಡೆದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಆ.24ರಂದು ಆಡಳಿತ ಮಂಡಳಿ ಸಭೆ ಕರೆದಿದ್ದು, ಅಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.

ಕೋವಿಡ್ ಹಾವಳಿಯಿಂದ ಸರಿಸುಮಾರು 5 ತಿಂಗಳಿಂದ ಮೆಟ್ರೋ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ವಿವಿಧ ಮೂಲಗಳಿಂದ ಬರುವ ಆದಾಯವೇ ನಿಂತಿದೆ. ಈ ಮಧ್ಯೆ ಸರ್ಕಾರಗಳಿಂದಲೂ ಇದುವರೆಗೆ ಯಾವುದೇ ನೆರವು ದೊರಕಿಲ್ಲ. ಈ ಹಿನ್ನೆಲೆಯಲ್ಲಿ ನಿಗಮ ಸೌಲಭ್ಯ ಮತ್ತು ಭತ್ಯೆಗಳಿಗೆ ಕತ್ತರಿ ಚಿಂತನೆ ನಡೆಸಿದೆ.

ನಿಗಮದ ನಿರ್ವಹಣೆ ಮತ್ತು ಕಾರ್ಯಾಚರಣೆ, ಯೋಜನೆ, ಅಕೌಂಟ್ಸ್‌ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರ ವೇತನ ಮಾಸಿಕ 15ರಿಂದ 16 ಕೋಟಿ ರೂ. ಆಗುತ್ತದೆ. ಈ ಪೈಕಿ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿಕಾರ್ಯನಿರ್ವಹಿಸುವ ಸುಮಾರು 1,200-1,300 ಸಿಬ್ಬಂದಿಗೆ  ಭತ್ಯೆ ಮತ್ತು ಇತರೆ ಸೌಲಭ್ಯಗಳ ಮೊತ್ತ ಶೇ.15ರಷ್ಟಿದೆ. ಇದುವರೆಗೆ ಹರಸಾಹಸಪಟ್ಟು ವೇತನ ಪಾವತಿಸಲಾಗುತ್ತಿದೆ. ಆದರೆ ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿಎಲ್‌) ಬಿಎಂಆರ್‌ಸಿಎಲ್‌ನಲ್ಲಿ “ಭತ್ಯೆಗೆ ಕತ್ತರಿ’ ಚಿಂತನೆ ಮೊಳಕೆಯೊಡೆಯುವಂತೆ ಮಾಡಿದೆ.

ಚಿಂತನೆಗೆ ಅಪಸ್ವರ: ಈ ಬೆನ್ನಲ್ಲೇ ನಿಗಮದ ಸಿಬ್ಬಂದಿಯಲ್ಲಿ ಅಪಸ್ವರ ಕೇಳಿಬರುತ್ತಿದೆ. ಭತ್ಯೆ ಕಡಿತದ ವಿಚಾರದಲ್ಲಿ ಮಾತ್ರ ಡಿಎಂಆರ್‌ಸಿಎಲ್‌ ಅನ್ನು ಅನುಸರಿಸುವುದು ಸರಿ ಅಲ್ಲ. “ನಮ್ಮ ಮೆಟ್ರೋ’ ಸಿಬ್ಬಂದಿ ವೇತನಕ್ಕಿಂತ ಶೇ.40 ಹೆಚ್ಚು ವೇತನ ದೆಹಲಿ ಮೆಟ್ರೋದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಿದೆ. ಅಷ್ಟೇ ಅಲ್ಲ, ಅಲ್ಲಿ ಭತ್ಯೆ ಮತ್ತಿತರ ಸೌಲಭ್ಯ ಶೇ. 31ರಷ್ಟಿದೆ. 62 ವರ್ಷ ಮೇಲ್ಪಟ್ಟವರೆಲ್ಲರನ್ನೂ ಅಲ್ಲಿ ಮನೆಗೆ ಕಳುಹಿಸಲಾಗಿದೆ. ಈ ಎಲ್ಲ ವಿಚಾರಗಳಲ್ಲಿ ಏಕಿಲ್ಲ ಅನುಕರಣೆ ಎಂಬ ವಾದವನ್ನು ನಿಗಮದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದ ಸಿಬ್ಬಂದಿ ಮುಂದಿಡುತ್ತಾರೆ.

ಅಷ್ಟಕ್ಕೂ ಭತ್ಯೆಯನ್ನು ಶೇ. 50ರಷ್ಟು ಕಡಿತಗೊಳಿಸುವುದರಿಂದ ನಿಗಮಕ್ಕೆ ಆಗುವ ಉಳಿತಾಯ ಹೆಚ್ಚೆಂದರೆ 60ರಿಂದ 70 ಲಕ್ಷ ರೂ. ಆದರೆ, ಇದಕ್ಕಿಂತ 3-4 ಪಟ್ಟು ಹಣ ಅನಗತ್ಯವಾಗಿ ಪೋಲಾಗುತ್ತಿದೆ. ಹೇಗೆಂದರೆ, 65-75 ವರ್ಷದ ನಡುವಿನ 60-70 ಜನ ನಿಗಮದಲ್ಲಿ ಕೆಲಸ ಮಾಡುತ್ತಿದ್ದಾರೆ. 60 ವರ್ಷ ಮೇಲ್ಪಟ್ಟವರ ಸಂಖ್ಯೆ ಸುಮಾರು 150-200 ಇದೆ. ಎಲ್ಲರನ್ನೂ ತೆಗೆದುಹಾಕುವುದು ಅಸಾಧ್ಯ. ಪ್ರಸ್ತುತ ಆರ್ಥಿಕ ಸಂಕಷ್ಟದಲ್ಲಿ ಈ ಹೆಚ್ಚುವರಿ ಸರಿದೂಗಿಸುವ ಚಿಂತನೆ ಅವಶ್ಯಕತೆ ಇದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸುತ್ತಾರೆ. ಹೆಚ್ಚುವರಿ ಸಿಬ್ಬಂದಿ ಬಗ್ಗೆ ಕೇಳಿದ ಪ್ರಶ್ನೆಗೆ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್ “ಉದಯವಾಣಿ’ಗೆ ಸ್ಪಷ್ಟಪಡಿಸಿ, ಅನಗತ್ಯ ಅಥವಾ ಹೆಚ್ಚುವರಿ ಸಿಬ್ಬಂದಿ ಇಲ್ಲ. ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದಲ್ಲಿ 60 ವರ್ಷ ಮೇಲ್ಪಟ್ಟವರು 50-60 ಜನ ಇರಬಹುದು. ಅಗತ್ಯ ಇರುವುದರಿಂದ ಅವರು ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಮೆಟ್ರೋ ನಿರ್ಮಾಣಕ್ಕೆ ಅವರೆಲ್ಲರೂ ಕೈಜೋಡಿಸಿದ್ದಾರೆ’ ಎಂದು ಹೇಳಿದರು.

ಇದೆಲ್ಲಕ್ಕಿಂತ ಹೆಚ್ಚಾಗಿ ಕಡಿತಗೊಳಿಸಿದ್ದರ ಪರಿಣಾಮ ಏನು ಎಂಬ ಪ್ರಶ್ನೆ ಆರ್ಥಿಕ ತಜ್ಞರಿಂದ ಕೇಳಿಬರುತ್ತಿದೆ. ಸಿಬ್ಬಂದಿ ಕಡಿತದಿಂದ ಎರಡು ಕೋಟಿ ಉಳಿಯಲಿದೆ ಎಂದು ಕೊಂಡರೂ, 30 ಸಾವಿರ ಕೋಟಿ ವೆಚ್ಚದ “ನಮ್ಮ ಮೆಟ್ರೋ’ ಯೋಜನೆಗೆ ಹೋಲಿಸಿದರೆ, ಈ ಮೊತ್ತ ನಗಣ್ಯ. ಅಷ್ಟಕ್ಕೂ ಸೋಂಕು ಹಾವಳಿಯಿಂದ ಅಲ್ಪಾವಧಿಯಲ್ಲೇ ಯೋಜನಾ ವೆಚ್ಚ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ವಿಶ್ಲೇಷಿಸುತ್ತಾರೆ.

ಸಿಬ್ಬಂದಿ ಭತ್ಯೆ ಮತ್ತಿತರ ಸೌಲಭ್ಯ ಕಡಿತಕ್ಕೆ ಸಂ ಬಂಧಿಸಿದಂತೆ ಈಗಲೇ ಏನೂ ಹೇಳಲು ಆಗಲ್ಲ. ಇದುವರೆಗೆ ಯಾವುದೂ ನಿರ್ಧಾರ ಆಗಿಲ್ಲ’. ಅಜಯ್‌ ಸೇಠ್ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ

 

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.