“ನಮ್ಮ ಮೆಟ್ರೋ’ ಕೇಂದ್ರ ಕಚೇರಿ ಸೀಲ್ಡೌನ್!
Team Udayavani, Jul 17, 2020, 2:53 PM IST
ಬೆಂಗಳೂರು: “ನಮ್ಮ ಮೆಟ್ರೋ’ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರಿಗೆ ಬಂದಿದ್ದ ಕೋವಿಡ್ ವೈರಸ್, ಈಗ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ ಸಿಎಲ್) ಕೇಂದ್ರ ಕಚೇರಿಗೆ ದಾಳಿ ಮಾಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿತ್ತು.
ಶಾಂತಿನಗರದಲ್ಲಿರುವ ನಿಗಮದ ಕಚೇರಿಯ ಸಾರ್ವಜನಿಕ ಸಂಪರ್ಕ ವಿಭಾಗದ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿರುವುದು ಬುಧವಾರ ಸಂಜೆ ದೃಢಪಟ್ಟಿದೆ. ಬೆನ್ನಲ್ಲೇ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೂರಾರು ಸಿಬ್ಬಂದಿಯನ್ನು ಮನೆಗೆ ಕಳುಹಿಸಲಾಗಿದೆ. ಇಡೀ ದಿನ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಕಚೇರಿಗೆ ಸ್ಯಾನಿಟೈಸರ್ ಸಿಂಪಡಣೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಕಂಡುಬಂತು. ಶುಕ್ರವಾರದಿಂದ ಮತ್ತೆ ಎಂದಿನಂತೆ ಕೆಲಸ ಕಾರ್ಯ ಆರಂಭಗೊಳ್ಳಲಿದೆ. ಕೇಂದ್ರ ಕಚೇರಿಯಲ್ಲಿ ಆಡಳಿತ, ಯೋಜನೆ, ಸಾರ್ವಜನಿಕ ಸಂಪರ್ಕ, ಭೂಸ್ವಾಧೀನ ಸೇರಿದಂತೆ ವಿವಿಧ ವಿಭಾಗಗಳ ಸುಮಾರು 600-700 ಜನ ಕಾರ್ಯನಿರ್ವಹಿಸುತ್ತಾರೆ. ಆದರೆ, ಇದರಲ್ಲಿ ಬಹುತೇಕರು ನಿರ್ಮಾಣ ಕಾಮಗಾರಿ ನಡೆಯುವ ಜಾಗದಲ್ಲೇ ಆಫೀಸ್ ಮಾಡಿಕೊಂಡು, ಸ್ಥಳದಲ್ಲೇ ಕಾರ್ಯನಿರ್ವಹಿಸುತ್ತಾರೆ. ಹಾಗಾಗಿ, ಕೇಂದ್ರ ಕಚೇರಿಯಲ್ಲಿ ಸಾಮಾನ್ಯವಾಗಿ 200 ಜನ ಕೆಲಸ ಮಾಡುತ್ತಾರೆ. ಕೋವಿಡ್ ಹಿನ್ನೆಲೆಯಲ್ಲಿ ರೊಟೇಷನ್ ಪದ್ಧತಿಯಲ್ಲಿ ಶೇ. 50ರಷ್ಟು ಸಿಬ್ಬಂದಿ ಕಚೇರಿಗೆ ಆಗಮಿಸುತ್ತಿದ್ದಾರೆ.
“ಓ ಆಂಡ್ ಎಂ’ ಸ್ತಬ್ಧ: ಈ ಮಧ್ಯೆ ನಿರ್ಮಾಣ ಕಾಮಗಾರಿ ಜಾಗದಲ್ಲಿ ಕಾರ್ಯನಿರ್ವಹಿಸುವ ಎಂಜಿನಿ ಯರ್ಗಳು ಕೂಡ ಆತಂಕದಲ್ಲಿ ಕೆಲಸ ಮಾಡುವಂತಾಗಿದೆ. ಯಾಕೆಂದರೆ, ಇತ್ತೀಚೆಗೆ ಕಾರ್ಮಿಕರ ಶಿಬಿರ ಹಾಗೂ ಸಹೋದ್ಯೋಗಿ ಗಳಲ್ಲಿ ಕೋವಿಡ್ ಸೋಂಕು ಕಂಡುಬರುತ್ತಿದೆ. ಇನ್ನು ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗ ಬಹುತೇಕ ಸ್ತಬ್ಧಗೊಂಡಿದೆ. ಈ ಮೊದಲು ನಿತ್ಯ ನೂರಾರು ಸಿಬ್ಬಂದಿ ಕೆಲಸಕ್ಕೆ ಬರುತ್ತಿದ್ದರು. ಆದರೆ, ಆಗಸ್ಟ್ 2ರವರೆಗೂ ಮನೆಯಲ್ಲೇ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಕಾರ್ಯಾಚರಣೆ ಮತ್ತು ನಿರ್ವಹಣೆಯಲ್ಲಿ 1,200ಕ್ಕೂ ಅಧಿಕ ಸಿಬ್ಬಂದಿ ಇದ್ದಾರೆ. ಅವರೆಲ್ಲರೂ ಹವಾನಿಯಂತ್ರಣ, ಟನಲ್ ವೆಂಟಿಲೇಷನ್ ವ್ಯವಸ್ಥೆ (ಟಿವಿಎಸ್), ರೈಲು, ಯುಪಿಎಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಾರೆ. ಈ ಪೈಕಿ 600ಕ್ಕೂ ಹೆಚ್ಚು ಸಿಬ್ಬಂದಿ ಕೋವಿಡ್ -19 ಕಾರ್ಯಾಚರಣೆಗೆ ತೆರಳಿದ್ದಾರೆ. ಉಳಿದವರು ರೊಟೇಷನ್ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರು. ಈಗ ಪ್ರತಿ ವಿಭಾಗಕ್ಕೆ ಒಬ್ಬರು ಅಥವಾ ಇಬ್ಬರು ಮಾತ್ರ ನಿರ್ವಹಣೆಗಾಗಿ ಬರುತ್ತಿದ್ದಾರೆ ಎಂದು ಅಲ್ಲಿನ ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್