ಪ್ರಮಾಣೀಕೃತ ಕಾರ್ಯಾಚರಣೆಗೆ ಮೆಟ್ರೋ ಒತ್ತು


Team Udayavani, Jan 24, 2023, 9:52 AM IST

ಪ್ರಮಾಣೀಕೃತ ಕಾರ್ಯಾಚರಣೆಗೆ ಮೆಟ್ರೋ ಒತ್ತು

ಬೆಂಗಳೂರು: ಈಚೆಗೆ ನಿರ್ಮಾಣ ಹಂತದ ಕಂಬ ಬಿದ್ದು ತಾಯಿ- ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ತನಿಖಾ ವರದಿ ನೀಡಿದ ಬೆನ್ನಲ್ಲೇ ಬೆಂಗಳೂರು ಮೆಟ್ರೋ ರೈಲು ನಿಗಮವು “ನಮ್ಮ ಮೆಟ್ರೋ’ ಎಲ್ಲ ಪ್ರಕಾರದ ಹಂತಗಳಿಗೆ ಪ್ರತ್ಯೇಕ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (ಎಸ್‌ ಒಪಿ) ರೂಪಿಸಲು ಮುಂದಾಗಿದೆ.

ಎಷ್ಟು ಹಂತಗಳಲ್ಲಿ ಕಂಬಗಳನ್ನು ನಿರ್ಮಿಸ ಬೇಕು? ಎತ್ತರದ ಕಂಬಗಳು ಬೀಳದಂತೆ ನೀಡುವ ಆಸರೆ ಹೇಗಿರಬೇಕು? ಆ ಕಬ್ಬಿಣದ ಸರಳುಗಳು ಎಷ್ಟು ದಪ್ಪ ಇರಬೇಕು? ಕಂಬಗಳ ನಿರ್ಮಾಣಕ್ಕೆ ಬಳಸುವ ಕಬ್ಬಿಣದ ಸರಳುಗಳ ಗಾತ್ರ ಎಷ್ಟಿರಬೇಕು ಎನ್ನುವುದು ಸೇರಿದಂತೆ ಅತ್ಯಂತ ವಿವರವಾದ ಎಸ್‌ ಒಪಿ ರೂಪಿಸಲು ನಿರ್ಧರಿಸಿದ್ದು, ವಾರದಲ್ಲಿ ಇದು ಗುತ್ತಿಗೆದಾರರು ಮತ್ತು ನಿಗಮದ ಎಂಜಿನಿಯರ್‌ ಗಳಿಗೆ ನೀಡಲಾಗುತ್ತಿದೆ.

“ಈಗಾಗಲೇ ಗುತ್ತಿಗೆ ಪಡೆದ ಕಂಪನಿಗಳು ಮತ್ತು ನಿಗಮದ ನಡುವೆ ಆಗುವ ಒಪ್ಪಂದದಲ್ಲಿ ಎಸ್‌ಒಪಿಗಳಿರುತ್ತವೆ. ಅದರ ಪಾಲನೆಯೂ ಆಗುತ್ತಿದೆ. ಇಷ್ಟರ ನಡುವೆಯೂ ಅವಘಡ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾದ ಕಾರ್ಯವಿಧಾನಗಳನ್ನು ರೂಪಿಸಲು ಉದ್ದೇಶಿಸಿದ್ದು, ಇದಕ್ಕಾಗಿ ತಜ್ಞರು ಮತ್ತು ಕನ್ಸಲ್ಟಂಟ್‌ಗಳೊಂದಿಗೆ ಚರ್ಚಿಸಲಾಗುವುದು. ಅವರೆಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ, ಅಂತಿಮವಾಗಿ ಐಐಎಸ್ಸಿ ತಜ್ಞರೊಂದಿಗೂ ಮತ್ತೂಮ್ಮೆ ಸಮಾಲೋಚನೆ ನಡೆಸಿ ಅಂತಿಮಗೊಳಿಸಲಾಗುವುದು” ಎಂದು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌ “ಉದಯವಾಣಿ’ಗೆ ತಿಳಿಸಿದರು.

“ಪ್ರತ್ಯೇಕ ಎಸ್‌ಒಪಿಯಲ್ಲಿ ಎತ್ತರದ ಕಂಬಗಳನ್ನು ಎರಡು ಹಂತಗಳಲ್ಲಿ ನಿರ್ಮಿಸಬೇಕು. ಕಬ್ಬಿಣದ ಸರಳುಗಳ ಗಾತ್ರ ಹಾಗೂ ಅದಕ್ಕೆ ನೀಡುವ ಆಸರೆ ಹೇಗಿರಬೇಕು ಎನ್ನುವುದನ್ನು ನಿಖರವಾಗಿ ಹೇಳಲಾಗುವುದು. ಆಸರೆ ತೆಗೆಯುವಾಗ ಕಂಬಗಳಿಗೆ ಕಡ್ಡಾಯವಾಗಿ ಕ್ರೇನ್‌ನಿಂದ “ಸಪೋರ್ಟ್‌’ ನೀಡಿರಬೇಕು. ಇಂತಹ ಹಲವು ಸೂಚನೆಗಳನ್ನು ನೀಡಲಾಗುವುದು’ ಎಂದು ಹೇಳಿದರು.

“ಕ್ರೇನ್‌ ಸಪೋರ್ಟ್‌ ಇದ್ದರೆ ತಪ್ಪುತ್ತಿತ್ತು’: ಐಐಎಸ್ಸಿ ನೀಡಿರುವ ವರದಿ ಪ್ರಕಾರ ಕಂಬಕ್ಕೆ ನಿರ್ಮಿಸಿದ್ದ ಸಾರ್ವೆ (ಹತ್ತಾರು ಅಡಿ ಎತ್ತರಕ್ಕೆ ತಲುಪಲು ರೂಪಿಸಲಾಗುವ ತಾತ್ಕಾಲಿಕ ವ್ಯವಸ್ಥೆ) ಅನ್ನು ಒಂದು ದಿನದ ಹಿಂದೆಯೇ ತೆರವುಗೊಳಿಸಲಾಗಿತ್ತು. ಇದರಿಂದ ಕಂಬಕ್ಕೆ ನೀಡಿದ್ದ ಆಸರೆ ದುರ್ಬ ಲವಾಯಿತು. ಕಟ್ಟಿದ್ದ ಕಬ್ಬಿಣದ ಸರಳುಗಳ ಮೇಲೆ ಒತ್ತಡ ಬಿದ್ದಿತು. ಆಗ ಕಂಬ ವಾಲಿದ್ದು, ಉಳಿದೆರಡು ಸರಳುಗಳ ಮೇಲೆ ಮತ್ತಷ್ಟು ಭಾರವಾಗಿ ತುಂಡಾದವು ಎಂದು ಉಲ್ಲೇಖೀಸಲಾಗಿದೆ.

ಬಿಎಂಆರ್‌ಸಿಎಲ್‌ಗೆ ವರದಿ ಸಲ್ಲಿಕೆ : “ಎರಡು ದಿನಗಳ ಹಿಂದೆಯೇ ವರದಿಯನ್ನು ಇ- ಮೇಲ್‌ ಮೂಲಕ ಕಳುಹಿಸಲಾಗಿತ್ತು. ಸೋಮವಾರ ಖುದ್ದು ಬಿಎಂಆರ್‌ಸಿಎಲ್‌ ಕಚೇರಿಗೆ ಭೇಟಿ ನೀಡಿ ವರದಿ ನೀಡಲಾಗಿದೆ. ಅದರಲ್ಲಿ ಎತ್ತರದ ಕಂಬಗಳನ್ನು ಎರಡು ಹಂತಗಳಲ್ಲಿ ನಿರ್ಮಿಸಬೇಕು. ಸಾರ್ವೆ ತೆರವುಗೊಳಿಸುವಾಗ ಮುನ್ನೆಚ್ಚರಿಕೆ ಕ್ರಮವಾಗಿ ಕಂಬಗಳಿಗೆ ಕ್ರೇನ್‌ ಆಸರೆ ನೀಡಬೇಕು. ಅತಿ ಎತ್ತರದ ಕಂಬಗಳ ನಿರ್ಮಾಣ ಕಾಮಗಾರಿ ಜಾಗಗಳಲ್ಲಿ ನುರಿತ ಎಂಜಿನಿಯರ್‌ಗಳನ್ನು ನಿಯೋಜಿಸಬೇಕು ಎನ್ನುವುದು ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ. ಇದಕ್ಕೆ ನಿಗಮದಿಂದ ಸ್ಪಂದನೆಯೂ ದೊರಕಿದೆ’ ಎಂದು ಐಐಎಸ್ಸಿ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಪ್ರೊ.ಜೆ.ಎಂ. ಚಂದ್ರಕಿಶನ್‌ ಹೇಳಿದರು.

ಕಂಪನಿ ವಿರುದ್ಧ ಕಾನೂನು ಕ್ರಮ : ಕಾಮಗಾರಿ ಗುತ್ತಿಗೆ ಪಡೆದ ಕಂಪನಿ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಆರ್ಶಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌ ತಿಳಿಸಿದರು. ವರದಿ ಈಗಷ್ಟೇ ತಲುಪಿದೆ. ಕಂಪನಿಯ ಲೋಪ ಯಾವ ನಿಯಮದಡಿ ಬರುತ್ತದೆ ಎಂಬುದನ್ನು ಪರಿಶೀಲಿಸಲಾಗುವುದು. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Nandini Ragi Ambali: ಮಾರುಕಟ್ಟೆಗೆ ಬಂತು ನಂದಿನಿ ರಾಗಿ ಅಂಬಲಿ: ಬೆಲೆ 10 ರೂ.!

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

7

Theft: ಪ್ರಚಾರಕ್ಕೆ ತೆರಳಿದ್ದಾಗ ಮಾಜಿ ಮೇಯರ್‌ ಮನೆಯಲ್ಲಿ ಕಳವು

Money seized: ಕಾರಲ್ಲಿ ಸಾಗಿಸುತ್ತಿದ್ದ 2 ಕೋಟಿ ನಗದು ಜಪ್ತಿ; ಪ್ರಕರಣ ದಾಖಲು

Money seized: ಕಾರಲ್ಲಿ ಸಾಗಿಸುತ್ತಿದ್ದ 2 ಕೋಟಿ ನಗದು ಜಪ್ತಿ; ಪ್ರಕರಣ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.