ಕೆಎಂಎಫ್ನಿಂದ “ನಂದಿನಿ ಸಿಹಿ ಉತ್ಸವ’
Team Udayavani, Dec 22, 2018, 6:00 AM IST
ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್) ಡಿ.21 ರಿಂದ ಜ.9 ರವರೆಗಿನ 20 ದಿನಗಳು ರಾಜ್ಯಾದ್ಯಂತ “ನಂದಿನಿ ಸಿಹಿ ಉತ್ಸವ”ವನ್ನು ಹಮ್ಮಿಕೊಂಡಿದೆ. ಸಿಹಿ ತಿನಿಸುಗಳ ವಿನಿಮಯ ಮಾಡಿಕೊಳ್ಳುವ ಮೂಲಕ ಕ್ರಿಸ್ಮಸ್ ಹಾಗೂ ಹೊಸ ವರ್ಷವನ್ನು ಬರಮಾಡಿಕೊಳ್ಳುವ ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಕೆಎಂಎಫ್ ಈ ಉತ್ಸವವನ್ನು ಆಯೋಜಿಸಿದೆ.
ಶುಕ್ರವಾರ ಬೆಂಗಳೂರಿನ ಕೋರಮಂಗಲ ಬಿಡಿಎ ಕಾಂಪ್ಲೆಕ್ಸ್ನಲ್ಲಿರುವ ನಂದಿನಿ ಪಾರ್ಲರ್ನಲ್ಲಿ ಕೆಎಂಎಫ್ ಮಾರುಕಟ್ಟೆ ನಿರ್ದೇಶಕ ಎಂ.ಟಿ. ಕುಲಕರ್ಣಿ ಅವರು ನಂದಿನಿ ಸಿಹಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು. ಈ ಉತ್ಸವದಲ್ಲಿ ಮೈಸೂರು ಪಾಕ್, ನಂದಿನಿ ಪೇಡ, ಧಾರವಾಡ ಪೇಡ, ಕೇಸರ್ ಪೇಡ, ಏಲಕ್ಕಿ ಪೇಡ, ಬಾದಾಮ್ ಬರ್ಫಿ, ಕ್ಯಾಶು ಬರ್ಫಿ, ಡ್ರೈಪ್ರೂರ್ಟ್ಸ್ ಬರ್ಫಿ, ಕೊಕೋನಟ್ ಬರ್ಫಿ, ಚಾಕೋಲೆಟ್ ಬರ್ಫಿ, ಕುಂದಾ, ಜಾಮೂನ್, ರಸಗುಲ್ಲಾ ಇತ್ಯಾದಿ 20ಕ್ಕೂ ಹೆಚ್ಚು ಹಾಲಿನ ಸಿಹಿ ಉತ್ಪನ್ನಗಳು
ದೊರೆಯಲಿವೆ. ಬಹಳಷ್ಟು ಗ್ರಾಹಕರಲ್ಲಿ ನಂದಿನಿ ಎಂದರೆ ಕೇವಲ ಹಾಲು, ಮೊಸರು ಮಾತ್ರ ಎಂಬ ಭಾವನೆಯಿದೆ. ಅದನ್ನು ಈ ಉತ್ಸವ ಆಯೋಜಿಸುವ ಮೂಲಕ ಹೋಗಲಾಡಿಸುವ ಉದ್ದೇಶ ಹೊಂದಿದ್ದೇವೆ. ಅಲ್ಲದೆ, ಈ ಅವಧಿಯಲ್ಲಿ ಎಲ್ಲ ಸಿಹಿ ಉತ್ಪನ್ನಗಳ ಗರಿಷ್ಠ ಮಾರಾಟದ ಮೇಲೆ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು. ಈ ರಿಯಾಯಿತಿ ರಾಜ್ಯದ ಎಲ್ಲ ನಂದಿನಿ ಪಾರ್ಲರ್ಗಳು,
ಮಳಿಗೆಗಳು, ಕ್ಷೀರ ಕೇಂದ್ರಗಳು, ಸೂಪರ್ ಮಾರ್ಕೆಟ್ ಗಳಿಗೂ ಅನ್ವಯಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಆಡಳಿತ ವಿಭಾಗದ ನಿರ್ದೇಶಕ ಸುರೇಶ್ಕುಮಾರ್, ವಿತ್ತ ವಿಭಾಗದ ನಿರ್ದೇಶಕ ರಮೇಶ್ ಕನ್ನೂರು, ಮಾರುಕಟ್ಟೆ ಹೆಚ್ಚುವರಿ ನಿರ್ದೇಶಕ ರಘುನಂದನ್ ಹಾಗೂ ಕೆಎಂಎಫ್ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ