ನೀಲಂಬೂರ್‌-ನಂಜನಗೂಡು ರೈಲ್ವೆ : ಸುರಂಗ ನಿರ್ಮಾಣಕ್ಕೆ ಪ್ರತಿರೋಧ


Team Udayavani, Mar 19, 2017, 12:53 PM IST

nanjangud-nilambur,-railway.jpg

ಬೆಂಗಳೂರು: ಕೇರಳದ ನೀಲಂಬೂರ್‌ ಹಾಗೂ ಕರ್ನಾಟಕದ ನಂಜನಗೂಡು ನಡುವಿನ ರೈಲ್ವೆ ಯೋಜನೆಯಡಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಸುರಂಗ ಮಾರ್ಗನಿರ್ಮಾಣಕ್ಕೆ ರಾಜ್ಯ ಅರಣ್ಯ ಇಲಾಖೆಯಿಂದ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮಾ.27ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮೆಟ್ರೋ ತಜ್ಞ ಇ.ಶ್ರೀಧರನ್‌ ಮಾತುಕತೆ ನಡೆಸಲಿದ್ದಾರೆ.

ನೀಲಂಬೂರ್‌- ನಂಜನಗೂಡು ನಡುವೆ 174 ಕಿ.ಮೀ. ಉದ್ದದ ರೈಲ್ವೆ ಮಾರ್ಗ ನಿರ್ಮಾಣ ಯೋಜನೆಗೆ ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯೋಜನೆಯಡಿ 62 ಕಿ.ಮೀ. ಉದ್ದದ ಮಾರ್ಗ ರಾಜ್ಯದಲ್ಲಿ ಹಾದು ಹೋಗಲಿದ್ದು, ನಾಗರಹೊಳೆ ರಾಷ್ಟ್ರೀಯ ಉದ್ಯಾನ ಭಾಗದಲ್ಲಿ 19 ಕಿ.ಮೀ. ಉದ್ದದ ಸುರಂಗ ಮಾರ್ಗದ ಪ್ರಸ್ತಾಪವಿದೆ. ಅರಣ್ಯ ಪ್ರದೇಶದಲ್ಲಿ ಯಾವುದೇ ಕಾಮಗಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅವಕಾಶ ನಿರಾಕರಿಸಿರುವ ಕಾರಣ ಕೇರಳ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾದಂತಿದೆ.

ಈ ಕುರಿತು ಶನಿವಾರ ಮಾಹಿತಿ ನೀಡಿದ ಇ.ಶ್ರೀಧರನ್‌, ಈ ಯೋಜನೆ ಕಾರ್ಯಗತವಾದರೆ ಕರ್ನಾಟಕಕ್ಕೆ ಸಮೀಪದಲ್ಲೇ ಬಂದರು ಸೇವೆಯನ್ನು ಬಳಸಿಕೊಳ್ಳಲು ಅವಕಾಶ ಸಿಗಲಿದೆ. ಇಲ್ಲದಿದ್ದರೆ ಚೆನ್ನೈ ಇಲ್ಲವೇ ಮಂಗಳೂರಿನ ಬಂದರನ್ನು ಅವಲಂಬಿಸಬೇಕಾಗುತ್ತದೆ. ರೈಲ್ವೆ ಯೋಜನೆ ಜಾರಿಯಾದರೆ ಸಂಚಾರ ಸುಗಮವಾಗಲಿದೆ. ಇಷ್ಟಾದರೂ ರಾಜ್ಯ ಅರಣ್ಯ ಇಲಾಖೆಯಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ. ಇದೇ 27ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. 

ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕೇರಳ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳು ಕೈಗೊಳ್ಳಬೇಕಿರುವ ಉದ್ದೇಶಿತ ಯೋಜನೆಯಿಂದ ವನ್ಯಜೀವಿಗಳು, ಅರಣ್ಯವಾಸಿಗಳು, ವನ್ಯಸಂಪತ್ತಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈಗಾಗಲೇ ಕೇರಳ ಸರ್ಕಾರ ಸಮಗ್ರ ಯೋಜನಾ ವರದಿ
ಸಿದ್ಧಪಡಿಸಿದೆ. ಸಮಗ್ರ ಸಾಧ್ಯತಾ ವರದಿ ಸಿದ್ಧವಾಗಬೇಕಿದ್ದು, ಭೌಗೋಳಿಕ, ಪರಿಸರ, ಸಂಚಾರ ಇತರೆ ಕ್ಷೇತ್ರಗಳ ಮೇಲೆ ಉಂಟಾಗುವ ಪರಿಣಾಮಗಳನ್ನು ಅಧ್ಯಯನ ನಡೆಸಲಾಗುವುದು. 

“ತಲಚೇರಿ- ಮೈಸೂರು’ ರೈಲ್ವೆ ಯೋಜನೆಗೆ ಸಂಬಂಧಪಟ್ಟಂತೆ ಸಮಗ್ರ ಸಾಧ್ಯತಾ ವರದಿ ಬಹುತೇಕ ಪೂರ್ಣಗೊಂಡಿದ್ದು, ಯೋಜನೆ ಜಾರಿ ಬಗ್ಗೆಯೂ ಆಸಕ್ತಿ ತೋರಿದೆ’ಎಂದು ಹೇಳಿದರು.

ತೋಕೂರು ಮತ್ತು ಮಂಗಳೂರು ಬಂದರಿಗೆ ಸಂಪರ್ಕಿಸುವ ರೈಲ್ವೆ ಮಾರ್ಗವನ್ನು ಕೊಂಕಣ ರೈಲ್ವೆ ವಿಭಾಗದ ವ್ಯಾಪ್ತಿಗೆ ಒಳಪಡಿಸದ ಕಾರಣ ಈ ಮಾರ್ಗದಲ್ಲಿ ಲಾಭದಾಯಕ ವ್ಯವಹಾರ ನಡೆಯುತ್ತಿದ್ದರೂ ಅದರ ಲಾಭ ಕರ್ನಾಟಕಕ್ಕೆ ದೊರೆಯದೆ ಪಾಲಾ^ಟ್‌ ರೈಲ್ವೆ ವಿಭಾಗ ಪಡೆಯುತ್ತಿದೆ. ತೋಕೂರು ಮತ್ತು ಮಂಗಳೂರು ಬಂದರು ಸಂಪರ್ಕ ರೈಲ್ವೆ ಮಾರ್ಗ ಲಾಭದಾಯಕವಾಗಿದೆ. ಈ ಮಾರ್ಗವನ್ನು ಕೊಂಕಣ ರೈಲ್ವೆ ವಿಭಾಗಕ್ಕೆ ಸೇರ್ಪಡೆ ಮಾಡುವಂತೆ ರೈಲ್ವೆ ಇಲಾಖೆಗೆ ಪತ್ರ ಕೂಡ ಬರೆಯಲಾಗಿತ್ತು .
– ಡಾ.ಇ.ಶ್ರೀಧರನ್‌, ಮೆಟ್ರೋ ತಜ್ಞ 

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.