ನಂಜುಂಡೇಶ್ವರ ಸ್ವಾಮಿ ಬ್ರಹ್ಮರಥೋತ್ಸವ
Team Udayavani, Apr 25, 2019, 3:42 AM IST
ಮಹದೇವಪುರ: ಕಾಡುಗುಡಿಯಲ್ಲಿನ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಬುಧವಾರ ಸಂಭ್ರಮದಿಂದ ಜರುಗಿತು.
ಬೆಂಗಳೂರು ಪೂರ್ವ ತಾಲೂಕಿನ ಕಾಡುಗುಡಿಯ (ಅರಣ್ಯಪುರಿ) ವಿಶ್ವನಾಥ ಕ್ಷೇತ್ರದಲ್ಲಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಶಾಸಕ ಅರವಿಂದ ಲಿಂಬಾವಳಿ ಹಾಗೂ ಪಾಲಿಕೆ ಸದಸ್ಯ ಮುನಿಸ್ವಾಮಿ ಚಾಲನೆ ನೀಡಿದರು.
ಬ್ರಹ್ಮರಥೋತ್ಸವದ ಅಂಗವಾಗಿ ಸ್ವಾಮಿಗೆ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಜತೆಗೆ, ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ಉತ್ಸವದ ಪ್ರಯುಕ್ತ ನಂಜುಂಡೇಶ್ವರ ಸ್ವಾಮಿಗೆ ಒಂದು ವಾರದಿಂದ ಧ್ವಜಾರೋಹಣ, ಅಂಕುರಾರ್ಪಣೆ, ವೃಷಭಾರೋಹಣೋತ್ಸವ, ಶೇಷವಾಹನೋತ್ಸವ, ಕಾಶಿಯಾತ್ರೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಕಾಡುಗುಡಿಯ ಪ್ರಮುಖ ಬೀದಿಗಳಲ್ಲಿ ಬ್ರಹ್ಮರಥೋತ್ಸವ ಸಾಗಿತು. ಈ ವೇಳೆ ಕೀಲುಕುದುರೆ, ಗಾರುಡಿಗೊಂಬೆ ಕುಣಿತ, ತಮಟೆ ವಾದ್ಯ, ನಾದಸ್ವರ, ನಾಯಂಡಿ ನೃತ್ಯ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳ ಪ್ರದರ್ಶನ ನೆರೆದಿದ್ದ ಭಕ್ತರ ಗಮನ ಸೆಳೆಯಿತು.
ಚನ್ನಸಂದ, ದಿನ್ನೂರು, ನಾಗೋಂಡನಹಳ್ಳಿ, ಬೆಳತ್ತೂರು ಮತ್ತು ಎಕೆಜಿ ಕಾಲೋನಿ ಸೇರಿದಂತೆ ಕಾಡುಗುಡಿಯ ಸುತ್ತಮುತ್ತಲಿನ ಬಡವಾಣೆಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಭಕ್ತರಿಗೆ ಕಾಡುಗುಡಿ ಗ್ರಾಮಸ್ಥರು ಪಾನಕ, ಮಜ್ಜಿಗೆ, ಕೊಸಂಬರಿ ವಿತರಿಸಿದರು. ನಂಜುಂಡ ದೀಕ್ಷಿತ್ ಮತ್ತು ನರಸಿಂಹಮೂರ್ತಿ ದೀಕ್ಷಿತ್ ಸಹೋದರರು, ಧರ್ಮಕರ್ತರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ