ಇಫ್ಕೋ ಕಂಪನಿಯಿಂದ ರಾಜ್ಯದಲ್ಲಿ ನ್ಯಾನೋ ಯೂರಿಯಾ ಘಟಕ : ಸಚಿವ ಡಿ.ವಿ. ಸದಾನಂದ ಗೌಡ
Team Udayavani, Jun 12, 2021, 10:37 PM IST
ಬೆಂಗಳೂರು: ಸಹಕಾರಿ ಕ್ಷೇತ್ರದ ಇಫ್ಕೋ ಕಂಪನಿ ರಾಜ್ಯದಲ್ಲೂ ನ್ಯಾನೋ ಯೂರಿಯಾ ಘಟಕ ಸ್ಥಾಪಿಸಲು ಆಸಕ್ತಿ ತೋರಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು.
ಗುಜರಾತ್ನ ಕಲೋಲ್ನಿಂದ ರಾಜ್ಯಕ್ಕೆ ತಲಾ 500 ಮಿ.ಲೀ.ಯ 16,600 ನ್ಯಾನೋ ಯೂರಿಯಾ ಗೊಬ್ಬರದ ಬಾಟಲಿಗಳನ್ನು ಹೊತ್ತ ಮೊದಲ ವಾಹನದ ಸಂಚಾರಕ್ಕೆ ಶನಿವಾರ ಸಂಜೆ ವರ್ಚ್ಯುಯಲ್ ಆಗಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ‘ಇಫ್ಕೋ ಕಂಪನಿ ಈಗಾಗಲೇ ಮೂರು ಕಡೆ ನ್ಯಾನೋ ಯೂರಿಯಾ ಘಟಕಗಳನ್ನು ಸ್ಥಾಪಿಸಿದೆ. ಇನ್ನೂ ನಾಲ್ಕು ಸ್ಥಳಗಳಲ್ಲಿ ಹೊಸ ಘಟಕಗಳನ್ನು ಆರಂಭಿಸಲಿದೆ‘ ಎಂದರು.
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ನ್ಯಾನೋ ಯೂರಿಯಾ ಘಟಕ ಆರಂಭಿಸುವ ಯೋಚನೆ ಇದೆ. ಹತ್ತು ದಿನಗಳಲ್ಲಿ ಸೂಕ್ತ ಜಮೀನು ಗುರುತಿಸಲಾಗುವುದು ಎಂದು ಹೇಳಿದರು.ಇಫ್ಕೋ ಪ್ರಸಕ್ತ ಹಂಗಾಮಿನಲ್ಲಿ 28 ಕೋಟಿ ಬಾಟಲಿಯಷ್ಟು ನ್ಯಾನೋ ಯೂರಿಯಾ ಗೊಬ್ಬರ ಉತ್ಪಾದಿಸುವ ಗುರಿ ಹೊಂದಿದೆ. 500 ಮಿ.ಲೀ. ನ್ಯಾನೋ ಯೂರಿಯಾ ಬಾಟಲಿಯು 45 ಕೆ.ಜಿ. ಯೂರಿಯಾ ಗೊಬ್ಬರಕ್ಕೆ ಸಮನಾದುದು. ನ್ಯಾನೋ ಗೊಬ್ಬರದಿಂದ ದೇಶದಲ್ಲಿ ಯೂರಿಯಾ ಬಳಕೆಯಲ್ಲಿ ಶೇಕಡ 20ರಷ್ಟು ಕಡಿಮೆಯಾಗಲಿದೆ. ರೈತರ ಕೃಷಿ ವೆಚ್ಚವೂ ತಗ್ಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ